Congress visit-ರಾಜ್ಯ ಕಾಂಗ್ರೆಸ್’ನಿಂದ ಮನೆ-ಮನೆ ಭೇಟಿ ಅಭಿಯಾನ

ಕೋವಿಡ್ ಮೂರನೇ ಅಲೆಯ ಆತಂಕದ ಅವಧಿಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರು ಕೋವಿಡ್ ನಿಯಮ ಗಾಳಿ ಗೆ ತೂರಿ ಕಾರ್ಯಕ್ರಮ ಮಾಡುವುದು, ಆಡಳಿತ ಸರ್ಕಾರದ ಶಾಸಕರು, ಸಚಿವರು ನಾಯಕತ್ವ ಬದಲಾಗಬೇಕೆಂದು ಬೀದಿರಂಪ ಮಾಡುವುದು ಇವೆಲ್ಲಾ ಜವಾಬ್ಧಾರಿಯುತ ಜನಪ್ರತಿನಿಧಿಗಳು, ಜನಪರ ಸರ್ಕಾರದ ಲಕ್ಷಣಗಳಲ್ಲ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೀಮಣ್ಣ ನಾಯ್ಕ ಹೇಳಿದ್ದಾರೆ.

ಸಿದ್ಧಾಪುರದಲ್ಲಿ ಲಯನ್ಸ್ ಬಾಲಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಾಲೂಕಿನ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಕೋವಿಡ್ ಸೇನಾನಿಗಳ ಪಾತ್ರ ಮಾಡಿದೆ. ಕೋವಿಡ್ ಅವಧಿ ನಂತರ ಕೂಡಾ ಕಾಂಗ್ರೆಸ್ ನ ಜನಪರ ಕಾರ್ಯಕ್ರಮ ಮುಂದುವರಿಯುತ್ತದೆ ಎಂದರು. ಬ್ಲಾಕ್ ಅಧ್ಯಕ್ಷ ವಸಂತ ನಾಯ್ಕ ಸ್ವಾಗತಿಸಿದರು. ಕಾಂಗ್ರೆಸ್ ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಕೋವಿಡ್ ಸಂಕಷ್ಟ:

ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

DK shivkumar

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವು-ನೋವು ಉಂಡವರು, ಉದ್ಯೋಗ, ಆರೋಗ್ಯ ಕಳೆದುಕೊಂಡವರು, ಆರ್ಥಿಕವಾಗಿ ಸಂಕಷ್ಟಕ್ಕೀಡಾದ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಎಲ್ಲಾ ವರ್ಗದವರ ಕಷ್ಟಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ಪಂಚಾಯಿತಿಯಿಂದ ಪಾರ್ಲಿಮೆಂಟ್ ಕ್ಷೇತ್ರದವರೆಗೂ, ಬ್ಲಾಕ್ ಮಟ್ಟದಿಂದ ಟೌನ್ ಗಳ ವರೆಗೂ ಕೊರೋನಾ ವಾರಿಯರ್ ಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. 

ಸ್ಥಳೀಯ ನಾಯಕರ ಮುಂದಾಳತ್ವದಲ್ಲಿ ಪ್ರತಿ ಬ್ಲಾಕ್ ನಲ್ಲಿ 10 ಸದಸ್ಯರ ತಂಡ ರಚಿಸಿ ಕನಿಷ್ಠ 200 ಕುಟುಂಬಗಳನ್ನು ಭೇಟಿ ಮಾಡಿ, ಸಾಂತ್ವನ ಹೇಳುವ ಗುರಿ ಹೊಂದಿದ್ದೇವೆ. ಆ ಕುಟುಂಬಗಳು ಏನೆಲ್ಲಾ ಸಂಕಷ್ಟ ಅನುಭವಿಸಿವೆ, ನಾವು ಹೇಗೆ ನೆರವಾಗಬಹುದು, ಸರ್ಕಾರದ ಮೇಲೆ ಒತ್ತಡ ಹಾಕಿ ಎನೆಲ್ಲಾ ನೆರವು ಕೊಡಿಸಬಹುದು ಎಂಬ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. 

ಈ ಬಗ್ಗೆ ಎಐಸಿಸಿಗೂ ವರದಿ ನೀಡಲಾಗೂವುದು. ಜನರ ಕಷ್ಟಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುತ್ತದೆ ಎಂದಿದ್ದಾರೆ. 

ಕೊರೋನಾಗೆ ಬಲಿಯಾದವರ ಆಡಿಟ್ ಮಾಡಿ ಎಂದು ಕೇಳಿದರೂ ಆ ಬಗ್ಗೆ ಸರ್ಕಾರ ಚಿಂತನೆ ಮಾಡಿಲ್ಲ. ಕೇವಲ ಸೀಮಿತಿ ಮಾನದಂಡಗಳನ್ನು ಇಟ್ಟುಕೊಂಡು, ಕೆಲವರಿಗೆ ಮಾತ್ರ ರೂ.1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತು. ಇನ್ನು ಕೇಂದ್ರ ಸರ್ಕಾರ ರೂ.4 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿ, 8 ತಾಸುಗಳಲ್ಲಿ ಅದನ್ನು ಹಿಂಪಡೆಯಿತು. 20 ಲಕ್ಷ ಕೋಟಿ ಪ್ಯಾಕೇಜ್ ಯಾರಿಗೆ ನೀಡಿದ್ದಾರೆಂಬುದು ಗೊತ್ತಿಲ್ಲ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನ ಹಮ್ಮಿಕೊಂಡಿದ್ದೇವೆಂದು ವಿವರಿಸಿದರು. 

ಕೊರೋನಾದಿಂದ ಮೃತಪಟ್ಟವರ ಕುಟುಂಬದವರು ಪರಿಹಾರ ಪಡೆಯಲು ನೋಂದಣಿ ಮಾಡಿಸಿಕೊಳ್ಳುವ ದಿನಾಂಕ ಸರ್ಕಾರ 30ನೇ ತಾರೀಕಿನವರೆಗೆ ವಿಸ್ತರಿಸಿದ್ದು, ಹೀಗಾಗಿ ನಮ್ಮ ಕಾರ್ಯಕರ್ತು ಎಲ್ಲಾ ವರ್ಗದವರ ಮಾಹಿತಿ ಪಡೆದು, ನೋಂದಣಿ ಮಾಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಸದ್ಯಕ್ಕೆ ಕಾಂಗ್ರೆಸ್ ನಾಯಕರಿಂದ ಕೈಲಾದಷ್ಟು ಸಹಾಯ ಮಾಡಲಾಗುವುದು. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದಿದ್ದಾರೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *