ಉ.ಕ. ಜಿಲ್ಲಾ ಕಾಂಗ್ರೆಸ್ ಗೆ ಸತೀಶ್ ಶೈಲ್ ಅಧ್ಯಕ್ಷ, ಮಂಜುನಾಥ ನಾಯ್ಕ ಕಾರ್ಯಾಧ್ಯಕ್ಷ?

ನಿರಂತರ ಮೂರು ಅವಧಿಯ ನಂತರ ಈಗಿನ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಳಲಗಾಂವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆ ಬಿಡುವುದು ಪಕ್ಕಾ ಆಗಿದ್ದು ಭೀಮಣ್ಣ ನಿರ್ಗಮನದಿಂದ ತೆರವಾಗುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಕಾರವಾರದ ಮಾಜಿ ಶಾಸಕ ಸತೀಶ್ ಶೈಲ್ ಅಧ್ಯಕ್ಷರಾಗುವುದು ಬಹುತೇಕ ಪಕ್ಕಾ ಆಗಿದೆ.ಜಿಲ್ಲಾ ಕಾಂಗ್ರೆಸ್ ಗೆ ಹೆಚ್ಚುವರಿ ಕಾರ್ಯಾಧ್ಯಕ್ಷರ ಆಯ್ಕೆ ನಡೆಯಲಿದ್ದು ಕುಮಟಾದ ಮಂಜುನಾಥ ಎಲ್. ನಾಯ್ಕ ಕಾರ್ಯಾಧ್ಯಕ್ಷರಾಗುವುದು ಕೂಡಾ ಬಹುತೇಕ ತೀರ್ಮಾನವಾಗಿದೆ ಎನ್ನಲಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಭೀಮಣ್ಣ ನಾಯ್ಕ ದೇಶಪಾಂಡೆಯವರ ಆಪ್ತರಾಗಿದ್ದು ದೇಶಪಾಂಡೆಯವರ ಒತ್ತಾಯದಿಂದ ಭೀಮಣ್ಣ ಮೂರು ಅವಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಒಮ್ಮೆ ಮಾತ್ರ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಭೀಮಣ್ಣ ನಾಯ್ಕ ಪಕ್ಷದ ಸಂಘಟನೆಯಲ್ಲಿದ್ದುದು ಬಿಟ್ಟರೆ ಅಧಿಕಾರ, ಜನಪ್ರತಿನಿಧಿತ್ವದ ಜವಾಬ್ಧಾರಿ, ಅನುಕೂಲ ಅನುಭವಿಸಿದವರಲ್ಲ. ದೇಶಪಾಂಡೆಯವರ ಪಾಳೆಯದಲ್ಲಿದ್ದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಪಡೆದಿದ್ದ ಭೀಮಣ್ಣ ಬಿ.ಜೆ.ಪಿ.ಯ ಅಲೆ, ತಂತ್ರ-ಮಂತ್ರಗಳ ನಡುವೆ 53 ಸಾವಿರ ಮತ ಪಡೆದು ವಿರೋಚಿತ ಸೋಲು ಕಂಡಿದ್ದರು. ಈಗಲೂ ಶಿರಸಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ನ ಪ್ರಬಲ ಆಕಾಂಕ್ಷಿಯಾಗಿರುವ ಭೀಮಣ್ಣ ಜಿಲ್ಲಾ ಕಾಂಗ್ರೆಸ್ ಸಂಘಟನೆಯೊಂದಿಗೆ ಶಿರಸಿ ಕ್ಷೇತ್ರದಲ್ಲಿ ಸಕ್ರೀಯವಾಗಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್ಗೆಮ ರಳಿರುವುದು ಶಿರಸಿ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳಿಗಿಂತ ಭೀಮಣ್ಣ ನಾಯ್ಕ ಹೆಚ್ಚು ಜನಪರವಾಗಿ ಜನಪ್ರೀಯವಾಗುತ್ತಿರುವುದು ಸೇರಿದಂತೆ ಮುಂದಿನ ಬಾರಿ ಶಿರಸಿ ಕ್ಷೇತ್ರ ಗೆಲ್ಲಲು ಅವಶ್ಯ ತಾಲೀಮು ಮಾಡುತ್ತಿರುವ ಭೀಮಣ್ಣ ಜಿಲ್ಲಾ ಕಾಂಗ್ರೆಸ್ ಜವಾಬ್ಧಾರಿಯಿಂದ ಮುಕ್ತವಾಗುತ್ತಿರುವುದು ಅವರ ವೈಯಕ್ತಿಕ ಏಳ್ಗೆಯ ದೃಷ್ಟಿಯಿಂದ ಉತ್ತಮ ಎನ್ನುವ ಅಭಿಪ್ರಾಯವಿದೆ.

ಸಾಯಿ ಗಾಂವಕರ್, ಶಿವಾನಂದ ಹೆಗಡೆ ಬದಲು ಸತೀಶ್ ಶೈಲ್- ಕಾರವಾರದ ಮಾಜಿ ಶಾಸಕ ಸತೀಶ್ ಶೈಲ್ ಜೊತೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗುವ ಪಟ್ಟಿಯಲ್ಲಿ ಸಿದ್ಧಾಪುರದ ಕೆ.ಜಿ.ನಾಗರಾಜ್, ವಿ.ಎನ್. ನಾಯ್ಕ, ಭಟ್ಕಳದ ಮಂಕಾಳು ವೈದ್ಯ, ಜೆ.ಡಿ.ನಾಯ್ಕ, ಹೊನ್ನಾವರದ ಶಿವಾನಂದ ಹೆಗಡೆ,ಕುಮಟಾದ ಸಾಯಿ ಗಾಂವಕರ್ ಸ್ಫರ್ಧೆಯಲ್ಲಿದ್ದರು ಇಷ್ಟು ಜನರ ನಡುವೆ ಸತೀಶ್ ಶೈಲ್ ಒಮ್ಮತದ ಆಯ್ಕೆಯಾಗಿದ್ದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ವಿ.ಪ. ಸದಸ್ಯ ಕಾಂಗ್ರೆಸ್ ನ ಪ್ರಮುಖ ನಾಯಕ ಬಿ.ಕೆ. ಹರಿಪ್ರಸಾದ್ ಈ ಆಯ್ಕೆಯ ಹಿಂದಿದ್ದಾರೆ ಎನ್ನಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *