ಆರಿದ್ರಮಳೆ ಹಬ್ಬದಲ್ಲಿ ಕುಮಾರರಾಮನನ್ನು ಭಜಿಸುವುದೇಕೆ ಗೊತ್ತೆ…?

ಕೊಪ್ಪಳ, ಬಳ್ಳಾರಿ ಭಾಗದ ಹೈದರಾಬಾದ್ ಕರ್ನಾಟಕದಲ್ಲಿ ಪೂಜಿಸುವ ಗಂಡುಗಲಿ ಕುಮಾರರಾಮನನ್ನು ಮಲೆನಾಡಿನ ಬಹುತೇಕ ಕಡೆ ಆರಿದ್ರಮಳೆ ಹಬ್ಬದಲ್ಲಿ ಪೂಜಿಸುವ ವಿಚಾರ ಹೆಚ್ಚು ಪ್ರಚಾರವಾಗಿಲ್ಲ. ಆದರೆ ದೀವರನ್ನು ಸೇರಿ ಮಲೆನಾಡಿನ ಹಿಂದುಳಿದ ವರ್ಗಗಳು ಬೇಡರ ದೊರೆ ಕುಮಾರರಾಮನನ್ನು ವರ್ಷಕ್ಕೊಂದಾವರ್ತಿ ಪ್ರತಿವರ್ಷ ಆರಿದ್ರಮಳೆ ಹಬ್ಬದಲ್ಲಿ ಆರಾಧಿಸುತ್ತಾರೆ. ಗಾಮ, ರಾಮ ಎನ್ನಲಾಗುವ ದೇವಸ್ಥಾನಗಳು, ಮರದ ಮುಖಗಳನ್ನು ಪೂಜಿಸುವ ಹಿಂದೆ ಒಂದು ಮಹತ್ವದ ಇತಿಹಾಸ, ಚರಿತ್ರೆಗಳಿರುವುದು ಶಾಸನಗಳು ಮತ್ತು ಐತಿಹಾಸಿಕ ದಾಖಲೆಗಳಲ್ಲಿ ಸಿದ್ಧವಾಗುತ್ತದೆ.

ಹೊಸನಗರದ ಒಂದು ಶಾಸನ ಸೇರಿ ಹಲವು ಶಾಸನಗಳಲ್ಲಿ ಉಲ್ಲೇಖವಾಗಿರುವ ಗಂಡುಗಲಿ ಕುಮಾರರಾಮ ವಿಜಯನಗರದ ಅರಸರ ಮೂಲ ಪುರುಷ ಎನ್ನಲಾಗುತ್ತದೆ.ಕಂಪಿಲ ಮತ್ತು ಹರಿಹರ ದೇವಿಯ ಮಗನಾದ ವೀರ ಕುಮಾರರಾಮ ಸುರದ್ರೂಪಿಯೂ ಶೂರನೂ ಆಗಿ ದೆಹಲಿಯ ದೊರೆ ಮಹಮ್ಮದ್ ಬಿನ್ ತುಘಲಕ್ ನ ಸೇನೆಯನ್ನು ಎರಡು ಬಾರಿ ಹಿಮ್ಮೆಟ್ಟಿಸಿದ್ದ ಎನ್ನುವ ಐತಿಹಾಸಿಕ ದಾಖಲೆಗಳಲ್ಲಿ ಕುಮಾರರಾಮನನ್ನು ಸ್ಮರಿಸಲಾಗಿದೆ.

ಗಂಡುಗಲಿ ಕುಮಾರರಾಮ ವೀರನೂ, ಧೀರನೂ ಆಗಿದ್ದು ಮಹಿಳೆಯರಿಗೆ ವಿಶೇಶ ಗೌರವಕೊಡುತಿದ್ದ ಹಿನ್ನೆಲೆಯಲ್ಲಿ ಐತಿಹಾಸಿಕ ದಾಖಲೆ, ಹಳೆಗನ್ನಡ ಕಾವ್ಯಗಳಲ್ಲಿ ಕೂಡಾ ಕುಮಾರರಾಮನ ಧೀರತನವನ್ನು ಚಿತ್ರಿಸಲಾಗಿದೆ.

ಈ ಕುಮಾರರಾಮ ಯೋಧರಾಗಿದ್ದ ಮಲೆನಾಡಿನ ದೀವರ ಆರಾಧ್ಯಪುರುಷನಾಗುವ ಹಿಂದೆ ದೀವರ ವಿಜಯನಗರದ ಕಾಲದ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ಬುಡಕಟ್ಟುಗಳಾದ ದೀವರು ರಾಜರ ಕೆಳಗೆ ಯೋಧರಾಗಿ, ಹಲವು ಸಾಂಮ್ರಾಜ್ಯಗಳಲ್ಲಿ ದೊರೆಗಳಾಗಿದ್ದು ಈ ನಾಡನ್ನು ಆಳಿದವರು, ರಕ್ಷಿಸಿದವರು.

ಅವರು ಮಳೆಗಾಲದ ಯುದ್ಧ ವಿರಾಮದ ಕಾಲದಲ್ಲಿ ತಮ್ಮ ಹುಟ್ಟೂರಿಗೆ ಬಂದು ಕೃಷಿಕೆಲಸ ಮನೋರಂಜನೆಗಳಲ್ಲಿ ತೊಡಗಿಕೊಳ್ಳುತಿದ್ದ ಆಚರಣೆಯಾಗಿ ಮಲೆನಾಡಿನಲ್ಲಿ ಈ ಆರಿದ್ರಮಳೆ ಹಬ್ಬದ ಗಾಮನ ಪೂಜೆ, ಬಿಂಗಿಗಳೆಲ್ಲಾ ಈಗಲೂ ನಡೆಯುತ್ತವೆ. ಗಾಮನ ಮೂರ್ತಿ ಹೊತ್ತ ವ್ಯಕ್ತಿಯನ್ನು ಸ್ತ್ರೀಯರು ಪಾದತೊಳೆದು ಪೂಜಿಸುವುದು ಈ ಬುಡಕಟ್ಟುಜನ ವೀರನೂ, ಧೀರನೂ ಆದ ಮಹಿಳೆಯರನ್ನು ಗೌರವಿಸುತಿದ್ದ ಕುಮಾರರಾಮನನ್ನು ಗೌರವಿಸುವ ಧ್ಯೋತಕ. ಪುರಾಣ, ಸಾಹಿತ್ಯ, ಚರಿತ್ರೆ ಎಲ್ಲಾ ಕಡೆ ತನ್ನ ಶೂರತನ, ತ್ಯಾಗ, ಪೌರುಷದಿಂದ ಅಜರಾಮರನಾದ ಕುಮಾರ ರಾಮ ದೀವರ ಕೊಪ್ಪಗಳಲ್ಲಿ ದೇವರಾಗಿ ಪೂಜಿಸುತ್ತಿರುವ ಹಿಂದೆ ಅಧ್ಯಯನಮಾಡಬೇಕಾದ ಚಾರಿತ್ರಿಕ ಸತ್ಯವಿದೆ. ಮಲೆನಾಡಿನ ಬಹುತೇಕ ಕಡೆ ಪೂಜಿಸಲ್ಪಡುವ ರಾಮ, ಗಾಮ ರಾಮಾಯಣದ ರಾಮನಲ್ಲದೆ ವೀರ-ಶೂರ, ಧೀರ ಬುಡಕಟ್ಟು ಕುಮಾರ ರಾಮನೆಂಬುದು ನಿರ್ವಿವಾದ. ಇದೇ ಕುಮಾರರಾಮನ ಗುಡಿಯೊಂದು ಹೊನ್ನಾವರ ತಾಲೂಕಿನ ನವಿಲಗೋಣಿನಲ್ಲಿ ಇರುವ ಮಾಹಿತಿ ಇದೆ. ಈ ದೇವಸ್ಥಾನದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಸುಗ್ಗಿ ಹಬ್ಬವೆಂದು ಆಚರಿಸುವ ರೂಢಿಯೂ ಸಂಪ್ರದಾಯವಾಗಿದೆ. ಈ ಬಗ್ಗೆ ಸಂಶೋಧನೆಗಳಾಗಿ ಆರಿದ್ರಮಳೆ ಹಬ್ಬ ಅಲ್ಲಿಯ ಬಿಂಗಿ ಈ ಆಚರಣೆಗಳೊಂದಿಗೆ ಗಾಮನ ಆರಾಧನೆ ಇವುಗಳ ಹಿಂದೆ ಪ್ರಬಲವಾದ ಬುಡಕಟ್ಟು ಆಚರಣೆ, ರೂಢಿಗಳಿರುವುದು ಕರಾವಳಿ, ಮಲೆನಾಡಿನ ದೀವರು ಅರಣ್ಯವಾಸಿ ಬುಡಕಟ್ಟುಗಳು ಎಂಬುದಕ್ಕೆ ಸಾಕ್ಷಗಳನ್ನೊದಗಿಸುತ್ತದೆ ಕೂಡಾ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *