ಆರಿದ್ರಮಳೆ ಹಬ್ಬದಲ್ಲಿ ಕುಮಾರರಾಮನನ್ನು ಭಜಿಸುವುದೇಕೆ ಗೊತ್ತೆ…?

ಕೊಪ್ಪಳ, ಬಳ್ಳಾರಿ ಭಾಗದ ಹೈದರಾಬಾದ್ ಕರ್ನಾಟಕದಲ್ಲಿ ಪೂಜಿಸುವ ಗಂಡುಗಲಿ ಕುಮಾರರಾಮನನ್ನು ಮಲೆನಾಡಿನ ಬಹುತೇಕ ಕಡೆ ಆರಿದ್ರಮಳೆ ಹಬ್ಬದಲ್ಲಿ ಪೂಜಿಸುವ ವಿಚಾರ ಹೆಚ್ಚು ಪ್ರಚಾರವಾಗಿಲ್ಲ. ಆದರೆ ದೀವರನ್ನು ಸೇರಿ ಮಲೆನಾಡಿನ ಹಿಂದುಳಿದ ವರ್ಗಗಳು ಬೇಡರ ದೊರೆ ಕುಮಾರರಾಮನನ್ನು ವರ್ಷಕ್ಕೊಂದಾವರ್ತಿ ಪ್ರತಿವರ್ಷ ಆರಿದ್ರಮಳೆ ಹಬ್ಬದಲ್ಲಿ ಆರಾಧಿಸುತ್ತಾರೆ. ಗಾಮ, ರಾಮ ಎನ್ನಲಾಗುವ ದೇವಸ್ಥಾನಗಳು, ಮರದ ಮುಖಗಳನ್ನು ಪೂಜಿಸುವ ಹಿಂದೆ ಒಂದು ಮಹತ್ವದ ಇತಿಹಾಸ, ಚರಿತ್ರೆಗಳಿರುವುದು ಶಾಸನಗಳು ಮತ್ತು ಐತಿಹಾಸಿಕ ದಾಖಲೆಗಳಲ್ಲಿ ಸಿದ್ಧವಾಗುತ್ತದೆ.

ಹೊಸನಗರದ ಒಂದು ಶಾಸನ ಸೇರಿ ಹಲವು ಶಾಸನಗಳಲ್ಲಿ ಉಲ್ಲೇಖವಾಗಿರುವ ಗಂಡುಗಲಿ ಕುಮಾರರಾಮ ವಿಜಯನಗರದ ಅರಸರ ಮೂಲ ಪುರುಷ ಎನ್ನಲಾಗುತ್ತದೆ.ಕಂಪಿಲ ಮತ್ತು ಹರಿಹರ ದೇವಿಯ ಮಗನಾದ ವೀರ ಕುಮಾರರಾಮ ಸುರದ್ರೂಪಿಯೂ ಶೂರನೂ ಆಗಿ ದೆಹಲಿಯ ದೊರೆ ಮಹಮ್ಮದ್ ಬಿನ್ ತುಘಲಕ್ ನ ಸೇನೆಯನ್ನು ಎರಡು ಬಾರಿ ಹಿಮ್ಮೆಟ್ಟಿಸಿದ್ದ ಎನ್ನುವ ಐತಿಹಾಸಿಕ ದಾಖಲೆಗಳಲ್ಲಿ ಕುಮಾರರಾಮನನ್ನು ಸ್ಮರಿಸಲಾಗಿದೆ.

ಗಂಡುಗಲಿ ಕುಮಾರರಾಮ ವೀರನೂ, ಧೀರನೂ ಆಗಿದ್ದು ಮಹಿಳೆಯರಿಗೆ ವಿಶೇಶ ಗೌರವಕೊಡುತಿದ್ದ ಹಿನ್ನೆಲೆಯಲ್ಲಿ ಐತಿಹಾಸಿಕ ದಾಖಲೆ, ಹಳೆಗನ್ನಡ ಕಾವ್ಯಗಳಲ್ಲಿ ಕೂಡಾ ಕುಮಾರರಾಮನ ಧೀರತನವನ್ನು ಚಿತ್ರಿಸಲಾಗಿದೆ.

ಈ ಕುಮಾರರಾಮ ಯೋಧರಾಗಿದ್ದ ಮಲೆನಾಡಿನ ದೀವರ ಆರಾಧ್ಯಪುರುಷನಾಗುವ ಹಿಂದೆ ದೀವರ ವಿಜಯನಗರದ ಕಾಲದ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ಬುಡಕಟ್ಟುಗಳಾದ ದೀವರು ರಾಜರ ಕೆಳಗೆ ಯೋಧರಾಗಿ, ಹಲವು ಸಾಂಮ್ರಾಜ್ಯಗಳಲ್ಲಿ ದೊರೆಗಳಾಗಿದ್ದು ಈ ನಾಡನ್ನು ಆಳಿದವರು, ರಕ್ಷಿಸಿದವರು.

ಅವರು ಮಳೆಗಾಲದ ಯುದ್ಧ ವಿರಾಮದ ಕಾಲದಲ್ಲಿ ತಮ್ಮ ಹುಟ್ಟೂರಿಗೆ ಬಂದು ಕೃಷಿಕೆಲಸ ಮನೋರಂಜನೆಗಳಲ್ಲಿ ತೊಡಗಿಕೊಳ್ಳುತಿದ್ದ ಆಚರಣೆಯಾಗಿ ಮಲೆನಾಡಿನಲ್ಲಿ ಈ ಆರಿದ್ರಮಳೆ ಹಬ್ಬದ ಗಾಮನ ಪೂಜೆ, ಬಿಂಗಿಗಳೆಲ್ಲಾ ಈಗಲೂ ನಡೆಯುತ್ತವೆ. ಗಾಮನ ಮೂರ್ತಿ ಹೊತ್ತ ವ್ಯಕ್ತಿಯನ್ನು ಸ್ತ್ರೀಯರು ಪಾದತೊಳೆದು ಪೂಜಿಸುವುದು ಈ ಬುಡಕಟ್ಟುಜನ ವೀರನೂ, ಧೀರನೂ ಆದ ಮಹಿಳೆಯರನ್ನು ಗೌರವಿಸುತಿದ್ದ ಕುಮಾರರಾಮನನ್ನು ಗೌರವಿಸುವ ಧ್ಯೋತಕ. ಪುರಾಣ, ಸಾಹಿತ್ಯ, ಚರಿತ್ರೆ ಎಲ್ಲಾ ಕಡೆ ತನ್ನ ಶೂರತನ, ತ್ಯಾಗ, ಪೌರುಷದಿಂದ ಅಜರಾಮರನಾದ ಕುಮಾರ ರಾಮ ದೀವರ ಕೊಪ್ಪಗಳಲ್ಲಿ ದೇವರಾಗಿ ಪೂಜಿಸುತ್ತಿರುವ ಹಿಂದೆ ಅಧ್ಯಯನಮಾಡಬೇಕಾದ ಚಾರಿತ್ರಿಕ ಸತ್ಯವಿದೆ. ಮಲೆನಾಡಿನ ಬಹುತೇಕ ಕಡೆ ಪೂಜಿಸಲ್ಪಡುವ ರಾಮ, ಗಾಮ ರಾಮಾಯಣದ ರಾಮನಲ್ಲದೆ ವೀರ-ಶೂರ, ಧೀರ ಬುಡಕಟ್ಟು ಕುಮಾರ ರಾಮನೆಂಬುದು ನಿರ್ವಿವಾದ. ಇದೇ ಕುಮಾರರಾಮನ ಗುಡಿಯೊಂದು ಹೊನ್ನಾವರ ತಾಲೂಕಿನ ನವಿಲಗೋಣಿನಲ್ಲಿ ಇರುವ ಮಾಹಿತಿ ಇದೆ. ಈ ದೇವಸ್ಥಾನದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಸುಗ್ಗಿ ಹಬ್ಬವೆಂದು ಆಚರಿಸುವ ರೂಢಿಯೂ ಸಂಪ್ರದಾಯವಾಗಿದೆ. ಈ ಬಗ್ಗೆ ಸಂಶೋಧನೆಗಳಾಗಿ ಆರಿದ್ರಮಳೆ ಹಬ್ಬ ಅಲ್ಲಿಯ ಬಿಂಗಿ ಈ ಆಚರಣೆಗಳೊಂದಿಗೆ ಗಾಮನ ಆರಾಧನೆ ಇವುಗಳ ಹಿಂದೆ ಪ್ರಬಲವಾದ ಬುಡಕಟ್ಟು ಆಚರಣೆ, ರೂಢಿಗಳಿರುವುದು ಕರಾವಳಿ, ಮಲೆನಾಡಿನ ದೀವರು ಅರಣ್ಯವಾಸಿ ಬುಡಕಟ್ಟುಗಳು ಎಂಬುದಕ್ಕೆ ಸಾಕ್ಷಗಳನ್ನೊದಗಿಸುತ್ತದೆ ಕೂಡಾ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *