ಸಹಜ ರೋಗನಿರೋಧಕ ಶಕ್ತಿ ವೃದ್ಧಿಯಿಂದ ಕರೋನಾ ಮೂರನೆ ಅಲೆ ಎದುರಿಸಲು ಸಲಹೆ

ಕರೋನಾ ಮೂರನೇ ಅಲೆ ಎದುರಿಸಲು ಸಹಜ ರೋಗನಿರೋಧಕ ಶಕ್ತಿಯ ವೃದ್ಧಿಯೇ ಸರಳ ಪರಿಹಾರ  ಎಂದು ಪ್ರತಿಪಾದಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಾಧ್ಯತೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಸಿದ್ಧಾಪುರದಲ್ಲಿ ನಡೆದ ರೋಗ ನಿರೋಧಕ ಶಕ್ತಿ ವೃದ್ಧಿಸುವ ಜನಜಾಗೃತಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಅವರು ರೋಗನಿರೋಧಕ ಶಕ್ತಿ ವೃದ್ಧಿಸಲು ಸುಲಭ, ಸರಳ ಪರಿಹಾರೋಪಾಯಗಳಿವೆ. ಅಲೋಪತಿಯಲ್ಲಿ ರೋಗ ಬಂದಮೇಲೆ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ. ಆದರೆ ರೋಗ ಬರದಂತೆ ತಡೆಯಲು ಆಯುರ್ವೇದ, ಯೋಗಗಳಿಂದ ಸಾಧ್ಯ. ಈ ಸಾಧ್ಯತೆಯನ್ನು ಸರ್ಕಾರ ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇಂಥ ಸರಳ-ಸುಲಭ ಮುಂಜಾಗೃತಾ ಕ್ರಮಗಳ ಮೂಲಕ ಕರೋನಾ ಮೂರನೇ ಅಲೆ ಎದುರಿಸಲು ಸಜ್ಜಾಗಬೇಕು. ಅದಕ್ಕೆ ಸರ್ಕಾರಗಳು ಎಲ್ಲಾ ಮುಂದಾಲೋಚನೆ, ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಿವೆ ಎಂದರು.

ಶಂಕರಮಠ ಸಭಾಂಗಣದಲ್ಲಿ ನಡೆದ ಈ ಜನಜಾಗೃತಿ ಸಭೆಯಲ್ಲಿ ಉಪನ್ಯಾಸ ನೀಡಿದ ಹಿರಿಯ ವೈದ್ಯ ಡಾ.ಶ್ರೀಧರ ವೈದ್ಯ ಕರೋನಾ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಕೆಟ್ಟ ಪರಿಣಾಮ ಉಂಟುಮಾಡಿದೆ. ಚೀನಾ-ಇಟಲಿಗಳಲ್ಲಿ ಕರೋನಾ ವಿಸ್ತರಿಸಿ ಅಪಾಯ ಉಂಟುಮಾಡುತಿದ್ದಾಗ ಭಾರತದಲ್ಲಿ ಇಂಥ ಸಾಧ್ಯತೆಗಳ ಮುಂಜಾಗೃತಾ ಕಾರ್ಯಕ್ರಮವಾಗಿದ್ದರೆ ಕರೋನಾ ಅಪಾಯ ತಪ್ಪಿಸಬಹುದಿತ್ತು. ಈಗ ಕೂಡಾ ರೋಗನಿರೋಧಕ ಶಕ್ತಿ ವೃದ್ಧಿಸುವ ಸರಳ-ಸುಲಭ ಉಪಾಯಗಳ ಮೂಲಕವೇ ಕರೋನಾ ಮೂರನೇ ಅಲೆ, ಇತರ ರೋಗಗಳಿಂದ ಬಚಾವಾಗಲು ಸಾಧ್ಯ ಎಂದರು.

ಇನ್ನೊಬ್ಬ ಉಪನ್ಯಾಸಕಿ, ಆಯುರ್ವೇದ ತಜ್ಞೆ ಡಾ. ರೂಪಾ ಭಟ್ ಮಾತನಾಡಿ ಕರೋನಾ ಆತಂಕದಿಂದ ಅಪಾಯಗಳಾಗುತ್ತಿವೆ. ಆತಂಕದ ಬದಲು ಎಚ್ಚರಿಕೆ, ಮುಂಜಾಗೃತಾ ಕ್ರಮಗಳ ಮೂಲಕ ಕರೋನಾ ವಿರುದ್ಧ ಜಯಿಸಬಹುದು ಈ ಬಗ್ಗೆ ಜನಜಾಗೃತಿ ಆದರೆ ಪರಿಣಾಮ ಸಾಧ್ಯ ಎಂದರು.

ಸಿದ್ಧಾಪುರದಲ್ಲಿ ನಿರ್ಮಾಣವಾಗಲಿರುವ 5 ಕೋಟಿ ವೆಚ್ಚದ ಮೊದಲ ಹಂತದ ದ್ವಿಪಥ ಮುಖ್ಯರಸ್ತೆ

ಕಾಮಗಾರಿಗೆ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಚಾಲನೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *