ಸಿದ್ಧಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಜಾಗ ಕಾಯ್ದಿರಿಸಲು ಅವಕಾಶ

ಸಿದ್ಧಾಪುರ ತಾಲೂಕಿನ ಕೈಗಾರಿಕಾ ವಸಾಹತು ಪ್ರದೇಶ ಮನ್ಮನೆ ಗ್ರಾಮಪಂಚಾಯತ್ ಮಳಲವಳ್ಳಿ ಯಲ್ಲಿ ಸ್ಥಾಪನೆಯಾಗುತಿದ್ದು ಈ ಪ್ರದೇಶದಲ್ಲಿ ಜಾಗೆ ಕಾಯ್ದಿರಿಸಿಕೊಳ್ಳುವ ಆಸಕ್ತರು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮ ಕೋರಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿ.ಜೆ.ಪಿ. ಪ್ರಮುಖರು ಈ ವಿಷಯ ತಿಳಿಸಿದರು.

ಬಹುವರ್ಷಗಳ ಬೇಡಿಕೆಯಾಗಿದ್ದ ಸಿದ್ಧಾಪುರದ ಕೈಗಾರಿಕಾ ವಸಾಹತು ಸ್ಥಾಪನೆ ಕನಸು ಈಗ ನನಸಾಗುತ್ತಿದೆ. ಸಣ್ಣ, ಅತಿಸಣ್ಣ ಉದ್ಯಮ ನಡೆಸುವ ಹಾಲಿ, ಭಾವಿ ಉದ್ಯಮಿಗಳು ಇಲ್ಲಿ ಸ್ಥಳ ಕಾಯ್ದಿರಿಸಿಕೊಂಡು ಅನುಕೂಲ ಪಡೆಯಬಹುದು ಎಂದರು.

ವಿಧಾನಸಭಾ ಅಧ್ಯಕ್ಷ ಕಾಗೇರಿ ವಿಶ್ವೇಶ್ವರ ಹೆಗಡೆಯವರ ದೂರದೃಷ್ಟಿಯಿಂದ ಸಿದ್ಧಾಪುರದ ಕೈಗಾರಿಕಾ ವಸಾಹತು ಕೋಡ್ಕಣಿ ಹೋಬಳಿ ಮಳಲವಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ.ತಾಲೂಕಿನ ಜನತೆ ಇದರ ಪ್ರಯೋಜನ ಪಡೆಯಬೇಕು.- ಮಾರುತಿ ಟಿ ನಾಯ್ಕ, ಪ.ಪಂ. ಸದಸ್ಯ

ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಳಲವಳ್ಳಿಯ ಈ ಪ್ರದೇಶ ವನ್ನು ಬಂಗಾರಮಕ್ಕಿ ದೇವಸ್ಥಾನಕ್ಕೆ ಹಸ್ತಾಂತರ ಮಾಡುವ ಪ್ರಯತ್ನ ನಡೆದಿತ್ತು. ಆಗ ವಿಶ್ವೇಶ್ವರ ಹೆಗಡೆ ಶಾಸಕರು, ಸಚಿವರು ಆಗಿದ್ದರು. ಆದರೆ ಅಂದಿನ ಮನ್ಮನೆ ಗ್ರಾ.ಪಂ. ಆಡಳಿತ, ಅಧ್ಯಕ್ಷರು, ಅಂದಿನ ತಾಲೂಕು ಪಂಚಾಯತ್ ಸದಸ್ಯ ವಸಂತ ನಾಯ್ಕ ಎಲ್ಲರೂ ಸೇರಿ ಈ ಸರ್ಕಾರಿ ಆಸ್ತಿಯನ್ನು ದೇವಸ್ಥಾನಕ್ಕೆ ಪರಬಾರೆ ಮಾಡುವುದನ್ನು ತಡೆದಿದ್ದೆವು. ಮಳಲವಳ್ಳಿಯ ಸರ್ಕಾರಿ ಭೂಮಿ ಉಳಿಸಿದ ಶ್ರೇಯಸ್ಸು ಸ್ಥಳಿಯ ಆಡಳಿತ ವ್ಯವಸ್ಥೆ,ಜನಪ್ರತಿನಿಧಿಗಳಿಗೆ ಸಲ್ಲುತ್ತದೆ. ಮತ್ತು ಈ ಪ್ರದೇಶವನ್ನು ಕೈಗಾರಿಕಾ ವಸಾಹತು ಮಾಡುವ ಪ್ರಸ್ಥಾವನೆ, ಪ್ರಯತ್ನ ಮಾಡಿದವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಈಗ ಇದರ ಕ್ರೆಡಿಟ್ ಪಡೆಯುವ ಶಾಸಕರು, ಅವರ ಅಭಿಮಾನಿ ಕಾರ್ಯಕರ್ತರು, ಪ.ಪಂ. ಸದಸ್ಯರು ಯಾರದೋ ಪ್ರಯತ್ನಕ್ಕೆ ತಮ್ಮ ಹೆಸರು ಅಂಟಿಸಿಕೊಂಡಂತಿದೆ.- ವೀರಭದ್ರ ನಾಯ್ಕ ರಾಜ್ಯ ರೈತ ಸಂಘದ ತಾಲೂಕಾಧ್ಯಕ್ಷ

ಆಸಕ್ತರು ಸಂಪರ್ಕಿಸಬೇಕಾದ ಅಧಿಕಾರಿ-ವಿಳಾಸ- ಸಹಾಯಕ ಪ್ರಧಾನ ವ್ಯವಸ್ಥಾಪಕರು, (ಕೈವ) ಕರಾಸಕೈ ಅನಿನಿ,ಕೈಗಾರಿಕಾ ವಸಾಹತು ಹುಬ್ಬಳ್ಳಿ ದೂರವಾಣಿ ಸಂಖ್ಯೆ-0836-2332006 ಮೊಬೈಲ್-8884415796

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *