ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲಕರು ಇನ್ಮುಂದೆ ಡಿಎಲ್, ಆರ್’ಸಿ ಬುಕ್ ತೆಗೆದುಕೊಂಡು ಹೋಗಬೇಕಿಲ್ಲ; ಡಿಜಿಟಲ್ ದಾಖಲೆ ಸಾಕು!

ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ.

File photo

ಬೆಂಗಳೂರು: ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ.

ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ.  

ಡಿಜಿ ಲಾಕರ್ ಅಥವಾ ಎಂಪರಿವಾಹನ್ ಅಪ್ಲಿಕೇಶನ್‍ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ನಿಯಮ ಜಾರಿ ಮಾಡುವ ಅಧಿಕಾರಿಗಳು ಮೊಬೈಲ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ಈ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಧಿಕೃತ ಎಂದು ಪರಿಗಣಿಸಬೇಕು ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

ಈ ಎರಡು ಅಪ್ಲಿಕೇಷನ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ದಾಖಲೆಗಳು ಸ್ವೀಕಾರಾರ್ಹ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಗಳು ಸ್ಪಷ್ಟಪಡಿಸಿವೆ. 

ಅಧಿಕಾರಿಗಳು ಇ ಚಲನ್ ಆ್ಯಪ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸಬಹುದು. ಇದರಿಂದಾಗಿ ನಕಲಿ ದಾಖಲೆ ಹಾವಳಿಯನ್ನು ತಡೆಗಟ್ಟಲು ಸಾಧ್ಯ ಇದೆ. ವಾಹನ ಸವಾರರು ಪ್ಲೇ ಸ್ಟೋರ್‍ನಲ್ಲಿ ಡಿಜಿ ಲಾಕರ್ ಮತ್ತು ಎಂಪರಿವಾಹನ್ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ದಾಖಲಿಸಿ ಕೆವೈಸಿ ದಾಖಲಿಸಿ ನೋಂದಣಿ ಮಾಡಿಕೊಳ್ಳಬೇಕು.

ತದನಂತರ ಕರ್ನಾಟಕ ಸರ್ಕಾರವನ್ನು ಆಯ್ಕೆ ಮಾಡಿಕೊಂಡು ನಿರ್ದಿಷ್ಟ ದಾಖಲೆಗಳನ್ನು ಡೌನ್‍ಲೋಡ್ ಹಾಗೂ ಸೇವ್ ಮಾಡಿಕೊಳ್ಳಬಹುದು. ವಾಹನ ಮಾಲೀಕರಲ್ಲದವರು ಚಾಲನೆ ಮಾಡುತ್ತಿದ್ದರೆ ವಾಹನದ ಮಾಲೀಕನ ಆ್ಯಪ್‍ನಿಂದ ದಾಖಲಾತಿಗಳನ್ನು ವರ್ಗಾವಣೆ ಮಾಡಿಕೊಂಡು ತಪಾಸಣೆ ವೇಳೆ ಹಾಜರುಪಡಿಸಬಹುದು. 

ಇದರಿಂದಾಗಿ ಡಿಜಿಟಲ್ ದಾಖಲೆಗಳಿಂದ ಅಸಲಿ ದಾಖಲೆಗಳು ಕಳೆದುಹೋಗುವ ಭಯ ಇಲ್ಲವಾಗುತ್ತದೆ. ಪೊಲೀಸರಿಗೂ ಕೂಡ ಈ ವ್ಯವಸ್ಥೆ ಸೂಕ್ತವಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *