ಸಿನೆಮಾ ಮಂದಿ ಸುದ್ದಿ…..ಶೃತಿ ಅಧ್ಯಕ್ಷೆ, ರಮೇಶ್ ಕೃತಜ್ಞತೆ!

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯಾಗಿ ನಟಿ ಶ್ರುತಿ ನೇಮಕ

ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Shruthi

ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ

ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.

Ramesh_Aravind_flag_up1

ಬೆಂಗಳೂರು: ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.

ನಗರದ ಟೆನ್ನಿಸ್ ಅಸೋಸಿಯೇಷನ್ ನಲ್ಲಿ ಕಾವೇರಿ ಆಸ್ಪತ್ರೆ ವತಿಯಿಂದ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಹಾಗೂ ಕೃತಜ್ಞ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 2 ವರ್ಷದಿಂದ ವಿಶ್ವಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ವಾರಿಯರ್ಸ್ ಗಳಿಂದ ಇಂದು ನಾವೆಲ್ಲಾ ಜೀವಂತವಾಗಿದ್ದೇವೆ. ತಾಯಿಯ ಋಣದಂತೆ ಕೋವಿಡ್ ವಾರಿಯರ್ಸ್ ಗಳ ಋಣ ತೀರಿಸುವುದು ಅಸಾಧ್ಯ ಎಂದರು.

https://imasdk.googleapis.com/js/core/bridge3.471.1_en.html#goog_1505403165

ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್ ಮಾತನಾಡಿ, ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಜುಲೈ 31ರಂದು ಕೃತಜ್ಞಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದರ ಭಾಗವಾಗಿ ಇಂದಿನಿಂದ 12 ದಿನಗಳಲ್ಲಿ ನಮ್ಮ ತಂಡ 5 ವಾಹನಗಳಲ್ಲಿ ನಗರದ 300ಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಕೋವಿಡ್ ವಾರಿಯರ್ಸ್ ಗಳನ್ನು ಸನ್ಮಾನಿಸಿ ಪ್ರಶಸ್ತಿ ನೀಡಲಿದೆ. ಜೊತೆಗೆ ಕೋವಿಡ್ ಚಿಕಿತ್ಸೆಗಾಗಿ ಹೊಸ ಆವಿಷ್ಕಾರ ಮಾಡಿದ ಆಸ್ಪತ್ರೆಗಳಿಗೆ ವಿಶೇಷ ವರ್ಗದಲ್ಲಿ ಪಶಸ್ತಿ ನೀಡಲಿದ್ದೇವೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ವಾರಿಯರ್ಸ್ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ  2 ಲಕ್ಷದವರೆಗೆ ವಿದ್ಯಾರ್ಥಿ ವೇತನ ಹಾಗೂ ಪದವೀಧ ರ ಮಕ್ಕಳಿಗೆ ಉದ್ಯೋಗ ಕೊಡಿಸಲು ಮುಂದಾಗಿದ್ದೇವೆ. ಸಂಬಂಧಪಟ್ಟ ಕುಟುಂಬಗಳು ನೋಂದಣಿ ಮಾಡಿಕೊಳ್ಳಬಹುದು ಎಂದರು. ಮೊದಲ ದಿನದಂದು ತಂಡ ಕೃತಜ್ಞಾ ವಾಹನದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಅಲ್ಲಿನ ಸಿಬ್ಬಂದಿಯನ್ನು ಸನ್ಮಾನಿಸಿತು. ಈ ವೇಳೆ ಕಾವೇರಿ ಆಸ್ಪತ್ರೆ ನಿರ್ದೇಶಕ ಡಾ. ವಿಲ್ಫೆಂಡ್ ಸ್ಯಾಮ್ಸನ್ ಉಪಸ್ಥಿತರಿದ್ದರು.

ಬೆಂಗಳೂರು: ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯಪಾಲರ ಆದೇಶದ ಅನುಸಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಶ್ರುತಿ ಅವರು ಮದ್ಯಪಾನ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾ ರೆ ಎಂದು ತಿಳಿಸಿದೆ.

https://imasdk.googleapis.com/js/core/bridge3.471.1_en.html#goog_1091149064

ಈ ಹಿಂದೆ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಹುದ್ದೆಯಿಂದ ಇತ್ತೀಚೆಗಷ್ಟೇ ಕೆಳಗಿಳಿದಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *