ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು, ಹೊನ್ನಾವರ-ಬೆಂಗಳೂರು ರಾ.ಹೆ. ಬಂದ್!

ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು

ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಉತ್ತರ ಕನ್ನಡ ಮತ್ತು ಶಿವಮೊಗ್ಗ ನಡುವಿನ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಭೂಕುಸಿತದಿಂದ ಹಾನಿಗೊಳಗಾಗಿದ್ದು ಈ ಮಾರ್ಗದ ವಾಹನ ಸಂಚಾರವನ್ನು ನಿಶೇಧಿಸಲಾಗಿದೆ.

train

ಹುಬ್ಬಳ್ಳಿ: ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಎಲ್ಲಾ 345 ಪ್ರಯಾಣಿಕರನ್ನು ಮಡ್ಗಾಂವ್‌ಗೆ ವಾಪಸ್ ಕಳುಹಿಸಲಾಗಿದೆ.

ಕರಾವಳಿ ಪ್ರದೇಶದಲ್ಲಿ ನಿರಂತರ ಮಳೆ ಮತ್ತು ಗೋವಾದಲ್ಲಿ ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಅನೇಕ ರೈಲುಗಳನ್ನು ಮಡ್ಗೊವನ್-ಲೋಂಡಾ-ಮಿರಾಜ್ ಮೂಲಕ ಸಂಚರಿಸುತ್ತಿವೆ. ಪರಿಣಾಮವಾಗಿ, ದುರದೃಷ್ಟದ ಮಂಗಳೂರು-ಮುಂಬೈ ರೈಲು ಕಾರ್ವಾರ್, ಮಡ್ಗಾಂವ್, ಲೋಂಡಾ ಮತ್ತು ಮಿರಾಜ್ ಮೂಲಕ ಮುಂಬೈಗೆ ಹೋಗುತ್ತಿತ್ತು.

ಸೌತ್ ವೆಸ್ಟರ್ನ್ ರೈಲ್ವೆಯ ದುಧ್‌ಸಾಗರ್ ಮತ್ತು ಸೋನಾಲಿಮ್ ನಡುವೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಎರಡು ಭೂಕುಸಿತ ಸಂಭವಿಸಿದೆ. 

ಘಟನೆ ನಡೆದ ಕೂಡಲೇ, ಕ್ಯಾಸಲ್ ರಾಕ್ ಮತ್ತು ವಾಸ್ಕೋ ಡಾ ಗಾಮಾದ ಅಪಘಾತ ಪರಿಹಾರ ರೈಲು(ಎಆರ್‌ಟಿ) ಸ್ಥಳಕ್ಕೆ ಧಾವಿಸಿ ಪುನಃಸ್ಥಾಪನೆ ಕ್ರಮಗಳನ್ನು ಕೈಗೊಂಡಿದೆ.

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ್ ಮಲ್ಖೆಡೆ ಸೇರಿದಂತೆ ಹುಬ್ಬಳ್ಳಿ ವಿಭಾಗದ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.

ಈ ಮಧ್ಯೆ, ದೂಧ್‌ಸಾಗರ್ ಮೂಲಕ ಮಡ್ಗಾಂವ್‌ಗೆ ತೆರಳುತ್ತಿದ್ದ ಹಜರತ್ ನಿಜಾಮುದ್ದೀನ್-ವಾಸ್ಕೋ ಡಾ ಗಾಮಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಿಲ್ಲಿಸಿ ಮತ್ತೆ ಲೋಂಡಾಗೆ ವಾಪಸ್ ಕಳುಹಿಸಲಾಯಿತು. ರೈಲಿನಲ್ಲಿ 887 ಪ್ರಯಾಣಿಕರು ಇದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *