ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ

ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ ನಡೆಸಿ ಪ್ರತಿಭಟನೆ ನಡೆಸಿದರು.

ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಕೈ ಬಿಡಬೇಕು, ಶೀಘ್ರ ತರಗತಿಗಳನ್ನು ಪ್ರಾರಂಭಿಸಬೇಕು ಮತ್ತು ಪರೀಕ್ಷೆ, ತರಗತಿ ನಡೆಸುವ ಗೊಂದಲಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸುವ ಜೊತೆಗೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವ ಮನವಿಯನ್ನು ತಹಸಿಲ್ಧಾರರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ನೀಡಿದರು.

ಈ ವೇಳೆ ಸೇರಿದ್ದ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೆಲವು ಕಾಲ ತಹಸಿಲ್ಧಾರ ಕಛೇರಿ ಎದುರು ಸಮಾವೇಶಗೊಂಡು ತಹಸಿಲ್ಧಾರರ ಅನುಪಸ್ಥಿತಿಯಲ್ಲಿ ಲಭ್ಯ ಅಧಿಕಾರಿಗಳಿಗೆ ಮನವಿ ನೀಡದೆ, ತಹಸಿಲ್ಧಾರರ ಮೂಲಕವೇ ಮನವಿ ಅರ್ಪಿಸಿದರು. ಈ ವೇಳೆ ಶಶಾಂಕ ಗೌಡರ್, ಹೃತಿಕ ಜೊಗಳೇಕರ್, ಅಭಿಶೇಕ ನಾಯ್ಕ ಸೇರಿದ ಕೆಲವು ವಿದ್ಯಾರ್ಥಿಮುಖಂಡರು ನೇತೃತ್ವವಹಿಸಿದ್ದರು.

ಕಾಂಗ್ರೆಸ್ ಘಟಕದ ಆಯೋಜನೆ ಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಕಾರ್ಯಕರ್ತರು ಸರ್ಕಾರ, ಶಾಸಕ ವಿಧಾನಸಭಾ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಬೆಳಿಗ್ಗೆ 11 ರಿಂದ ಪ್ರಾರಂಭವಾದ ಧರಣಿ ಸತ್ಯಾಗ್ರಹದ ಜಾಗಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳೇ ಬಂದು ಮನವಿ ಸ್ವೀಕರಿಸಬೇಕೆಂದು ಮಾಡಿದ ಆಗ್ರಹಕ್ಕೆ

ಜಿಲ್ಲಾಡಳಿತ ಸ್ಫಂದಿಸಿಲ್ಲ ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ವರೆಗೂ ನಡೆದ ಪ್ರತಿಭಟನೆಯ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು ದೇಶ, ರಾಜ್ಯದಲ್ಲಿ ಅರಾಜಕತೆ ಉಂಟಾಗಿದೆ. ಬಿ.ಜೆ.ಪಿ. ಅಧಿಕಾರದಿಂದ ಮುಕ್ತವಾಗುವವರೆಗೆ ದೇಶಕ್ಕೆ ಅನುಕೂಲಕರ ವಾತಾವರಣವಿಲ್ಲ. ಬಿ.ಜೆ.ಪಿ. ಮುಕ್ತ ಆಡಳಿತ ಮಾಡುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದರು. ನಂತರ ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ತಹಸಿಲ್ಧಾರ್ ಪ್ರಸಾದ್ ಮನವಿ ಸ್ವೀಕರಿಸಿದ ನಂತರ ಪ್ರತಿಭಟನೆ ಮುಕ್ತಾಯವಾಯಿತು.

ಪರೇಶ್ ಮೇಸ್ತ ಸಾವಿನ ಲಾಭಪಡೆದ ಬಿ.ಜೆ.ಪಿ. ಜನಪ್ರತಿನಿಧಿಗಳು ಅವರ ಕುಟುಂಬ ಜಿಲ್ಲೆಯ ಜನರ ಆಶಯಕ್ಕೆ ಸ್ಫಂದಿಸಿಲ್ಲ ತಳಮಟ್ಟದಿಂದ ಪ್ರಧಾನಿ ಮೋದಿಯವರೆಗೆ ಸುಳ್ಳಿನಿಂದಲೇ ಜನರನ್ನು ವಂಚಿಸುವ ಕಲೆ ಬಿ.ಜೆ.ಪಿ. ಗೆ ಸಿದ್ಧಿಸಿದೆ. ಸುಳ್ಳು, ಮತಾಂಧತೆ, ಅರಾಜಕತೆಯ ಬಿ.ಜೆ.ಪಿ. ಆಡಳಿತ ಕಿತ್ತೆಸೆಯವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಅಧಿಕಾರಿಗಳು, ಆಡಳಿತದ ಮೇಲೆ ಹಿಡಿತವಿಲ್ಲದ ಬಿ.ಜೆ.ಪಿ. ಜನಪ್ರತಿನಿಧಿಗಳು ಬೇಜವಾಬ್ಧಾರಿಯಿಂದ ವರ್ತಿಸುತ್ತಿರುವ ಲಾಭ ಪಡೆಯುತ್ತಿರುವ ಅಧಿಕಾರ ಶಾಹಿ ಜನರಿಗೆ ಅನ್ಯಾಯ ಮಾಡುತ್ತಿದೆ.- ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *