ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ

ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ ನಡೆಸಿ ಪ್ರತಿಭಟನೆ ನಡೆಸಿದರು.

ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಕೈ ಬಿಡಬೇಕು, ಶೀಘ್ರ ತರಗತಿಗಳನ್ನು ಪ್ರಾರಂಭಿಸಬೇಕು ಮತ್ತು ಪರೀಕ್ಷೆ, ತರಗತಿ ನಡೆಸುವ ಗೊಂದಲಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸುವ ಜೊತೆಗೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವ ಮನವಿಯನ್ನು ತಹಸಿಲ್ಧಾರರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ನೀಡಿದರು.

ಈ ವೇಳೆ ಸೇರಿದ್ದ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೆಲವು ಕಾಲ ತಹಸಿಲ್ಧಾರ ಕಛೇರಿ ಎದುರು ಸಮಾವೇಶಗೊಂಡು ತಹಸಿಲ್ಧಾರರ ಅನುಪಸ್ಥಿತಿಯಲ್ಲಿ ಲಭ್ಯ ಅಧಿಕಾರಿಗಳಿಗೆ ಮನವಿ ನೀಡದೆ, ತಹಸಿಲ್ಧಾರರ ಮೂಲಕವೇ ಮನವಿ ಅರ್ಪಿಸಿದರು. ಈ ವೇಳೆ ಶಶಾಂಕ ಗೌಡರ್, ಹೃತಿಕ ಜೊಗಳೇಕರ್, ಅಭಿಶೇಕ ನಾಯ್ಕ ಸೇರಿದ ಕೆಲವು ವಿದ್ಯಾರ್ಥಿಮುಖಂಡರು ನೇತೃತ್ವವಹಿಸಿದ್ದರು.

ಕಾಂಗ್ರೆಸ್ ಘಟಕದ ಆಯೋಜನೆ ಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಕಾರ್ಯಕರ್ತರು ಸರ್ಕಾರ, ಶಾಸಕ ವಿಧಾನಸಭಾ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಬೆಳಿಗ್ಗೆ 11 ರಿಂದ ಪ್ರಾರಂಭವಾದ ಧರಣಿ ಸತ್ಯಾಗ್ರಹದ ಜಾಗಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳೇ ಬಂದು ಮನವಿ ಸ್ವೀಕರಿಸಬೇಕೆಂದು ಮಾಡಿದ ಆಗ್ರಹಕ್ಕೆ

ಜಿಲ್ಲಾಡಳಿತ ಸ್ಫಂದಿಸಿಲ್ಲ ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ವರೆಗೂ ನಡೆದ ಪ್ರತಿಭಟನೆಯ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು ದೇಶ, ರಾಜ್ಯದಲ್ಲಿ ಅರಾಜಕತೆ ಉಂಟಾಗಿದೆ. ಬಿ.ಜೆ.ಪಿ. ಅಧಿಕಾರದಿಂದ ಮುಕ್ತವಾಗುವವರೆಗೆ ದೇಶಕ್ಕೆ ಅನುಕೂಲಕರ ವಾತಾವರಣವಿಲ್ಲ. ಬಿ.ಜೆ.ಪಿ. ಮುಕ್ತ ಆಡಳಿತ ಮಾಡುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದರು. ನಂತರ ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ತಹಸಿಲ್ಧಾರ್ ಪ್ರಸಾದ್ ಮನವಿ ಸ್ವೀಕರಿಸಿದ ನಂತರ ಪ್ರತಿಭಟನೆ ಮುಕ್ತಾಯವಾಯಿತು.

ಪರೇಶ್ ಮೇಸ್ತ ಸಾವಿನ ಲಾಭಪಡೆದ ಬಿ.ಜೆ.ಪಿ. ಜನಪ್ರತಿನಿಧಿಗಳು ಅವರ ಕುಟುಂಬ ಜಿಲ್ಲೆಯ ಜನರ ಆಶಯಕ್ಕೆ ಸ್ಫಂದಿಸಿಲ್ಲ ತಳಮಟ್ಟದಿಂದ ಪ್ರಧಾನಿ ಮೋದಿಯವರೆಗೆ ಸುಳ್ಳಿನಿಂದಲೇ ಜನರನ್ನು ವಂಚಿಸುವ ಕಲೆ ಬಿ.ಜೆ.ಪಿ. ಗೆ ಸಿದ್ಧಿಸಿದೆ. ಸುಳ್ಳು, ಮತಾಂಧತೆ, ಅರಾಜಕತೆಯ ಬಿ.ಜೆ.ಪಿ. ಆಡಳಿತ ಕಿತ್ತೆಸೆಯವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಅಧಿಕಾರಿಗಳು, ಆಡಳಿತದ ಮೇಲೆ ಹಿಡಿತವಿಲ್ಲದ ಬಿ.ಜೆ.ಪಿ. ಜನಪ್ರತಿನಿಧಿಗಳು ಬೇಜವಾಬ್ಧಾರಿಯಿಂದ ವರ್ತಿಸುತ್ತಿರುವ ಲಾಭ ಪಡೆಯುತ್ತಿರುವ ಅಧಿಕಾರ ಶಾಹಿ ಜನರಿಗೆ ಅನ್ಯಾಯ ಮಾಡುತ್ತಿದೆ.- ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *