ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ

ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ.

ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ.

ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ, ದಕ್ಷಿಣ ಕನ್ನಡ ಮೂಲದ ಒಂದೇ ತಂಡದ ಎರಡು ಕಾರುಗಳನ್ನು ವಶಕ್ಕೆ ಪಡೆದಿರುವ ಶಿರಸಿ ಪೊಲೀಸರು ಕ್ರೇಟಾ ಕಾರಿನಲ್ಲಿದ್ದ ಇಬ್ಬರನ್ನು ಬಂಧಿಸುವ ಕೆಲಸದಲ್ಲಿ ಯಶಸ್ವಿಯಾಗಿದ್ದಾರೆ. ಫಾರ್ಚುನರ್ ನಲ್ಲಿದ್ದ ಮೂವರು ತಲೆಮರೆಸಿಕೊಂಡಿದ್ದು ಅವರ ಶೋಧ ಕಾರ್ಯ ನಡೆಯುತ್ತಿದೆ. ಬೀಡಾಡಿ ದನಗಳನ್ನು ಕದ್ದು ಸಾಗಿಸುತಿದ್ದ ಈ ತಂಡ ಅಂತರ್ಜಿಲ್ಲಾ ದನಗಳ್ಳರ ಗುಂಪು ಎನ್ನುವುದು ಸಾಬೀತಾಗಿದೆ.

ಇದು ಅಧೀಕೃತ ಪೊಲೀಸ್ ವರದಿ- ಇದೇ ತಿಂಗಳು ದಿನಾಂಕ 07-07-2021 ಮತ್ತು 09-07-2021 ರಂದು ಶಿರಸಿ ಹೊಸ ಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯ ವಿವೇಕಾನಂದನಗರ ಮತ್ತು ಮರಾಠಿಕೊಪ್ಪದಲ್ಲಿ ದನಗಳ್ಳತನ ಆದ ಬಗ್ಗೆ ಪ್ರಕರಣಗಳು ವರದಿಯಾಗಿದ್ದು. ಈ ಪ್ರಕರಣದ ದನಗಳ್ಳರ ಪತ್ತೆಯ ಕುರಿತು ರಾಮಚಂದ್ರ ನಾಯಕ, ಸಿ.ಪಿ.ಐ. ಶಿರಸಿ ಮತ್ತು ಭಿಮಾಶಂಕರ ಸಿನ್ನೂರ ಸಂಗಣ್ಣ ಪಿ.ಎಸ್.ಐ. ರವರ ನೇತೃತ್ವದಲ್ಲಿ ಸಿಬ್ಬಂದಿಗಳ ಒಂದು ವಿಶೇಷ ತಂಡವನ್ನು ರಚಿಸಿದ್ದು . ದಿನಾಂಕ 30-07-2021 ರಂದು ಪಿ.ಎಸ್.ಐ. ಶ್ರೀ ಭೀಮಾಶಂಕರ್ ವಿಶೇಷ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದಾಗ 03-30 ಗಂಟೆಗೆ ಕೋಟೆಕೆರೆ ಜಂಕ್ಷನ್ ಹತ್ತಿರ ಸಿಬ್ಬಂದಿಗಳೊಂದಿಗೆ ನಾಕಾಬಂದಿ ಮಾಡಿ ವಾಹನಗಳನ್ನು ಚೆಕ್ ಮಾಡುತ್ತಿರುವಾಗ ಸುಮಾರು 03-45 ಗಂಟೆಗೆ ಬಂದ ಟೋಯಟಾ ಫಾರ್ಚೂನರ್ ಮತ್ತು ಕ್ರೇಟಾ ಕಾರನ್ನು ತಡೆದು ನಿಲ್ಲಿಸಿದಾಗ ಫಾರ್ಚುನರ್ ಕಾರಿನಲ್ಲಿದ್ದ ಮೂವರು ಆರೋಪಿಗಳು ವಾಹವನ್ನು ಬಿಟ್ಟು ಓಡಿ ಹೊಗಿದ್ದು ಕ್ರೇಟಾ ಕಾರಿನಲ್ಲಿದ್ದ ಇಬ್ಬರು ಓಡಲು ಪ್ರಯತ್ನಿಸಿದಾಗ ಸಿಬ್ಬಂದಿಗಳೊಂದಿಗೆ ಸೇರಿ ಅವರನ್ನು ಹಿಡಿಯಲಾಯಿತು. ವಿಚಾರಿಸಿದಾಗ ತಾವು ಶಿರಸಿಗೆ ದನಗಳ್ಳತನ ಮಾಡುವ ಉದ್ದೇಶದಿಂದ ಬಂದಿರುತ್ತೇವೆ ಮತ್ತು ಅವರು ಈ ಹಿಂದೆ ಶಿರಸಿಯಲ್ಲಿ ದನಗಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಇವರಲ್ಲಿ ಒಬ್ಬನ ಹೆಸರು 1) ಅಬ್ದುಲ್ ಅಜೀಜ್ ತಂದೆ ಅಬ್ದುಲ್ ಗಫಾರ ಪ್ರಾಯ 29 ವರ್ಷ ವೃತ್ತಿ ಮಟನ್ ವ್ಯಾಪಾರ ಸಾ|| ಸೂಲೇಬೈಲ್, ಈದ್ಗಾನಗರ, ಮತ್ತೂರ ರಸ್ತೆ, ಶಿವಮೊಗ್ಗ, 2) ಫೈಜಲ್ ತಂದೆ ಅಬ್ದುಲ್ ರಜಾಕ್ ಪ್ರಾಯ 36 ವರ್ಷ ವೃತ್ತಿ ಚಾಲಕ ಸಾ|| ಬದ್ರಿಯಾನಗರ, ಕೊಂಚಾರು, ಕೊಳಂಜೆ, ಬಜಪೆ ದಕ್ಷಿಣ ಕನ್ನಡ ಅಂತಾ ಹೇಳಿದ್ದು ಓಡಿ ಹೊದವರ ಬಗ್ಗೆ ವಿಚಾರಿಸಲಾಗಿ 1) ಇಮ್ರಾನ್ @ ಬಾಬು 2) ಅಂಡು @ ಅಯಾಸ್ 3) ರೆಹೆಮಾನ್ ಎಲ್ಲಾರು ಶಿವಮೊಗ್ಗ ನಿವಾಸಿಗಳು ಎಂದು ಹೇಳಿರುತ್ತಾರೆ.

ಈ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಶಿರಸಿ ಹೊಸ ಮಾರುಕಟ್ಟೆ ಪೊಲೀಸ ಠಾಣೆಯ 02 ಪ್ರಕರಣಗಳು ಮತ್ತು ಶಿರಸಿ ನಗರ ಠಾಣೆಯ 01 ಪ್ರಕರಣ ಭೇದಿಸಲಾಗಿದೆ. ಈ ಕಾರ್ಯಚರಣೆಯು ರವಿ ನಾಯ್ಕ, ಡಿ.ಎಸ್.ಪಿ. ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಾಮಚಂದ್ರ ನಾಯಕ ಸಿ.ಪಿ.ಐ ಶಿರಸಿ, ಶಿರಸಿ ಹೊಸ ಮಾರುಕಟ್ಟೆ ಪೊಲೀಸ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಭೀಮಾಶಂಕರ ಸಿನ್ನೂರ ಸಂಗಣ್ಣ, ಹಾಗೂ ಸಿಬ್ಬಂಧಿಯವರಾದ ಶ್ರೀ ಮೊಹಮ್ಮದ ಇಸ್ಮಾಯಿಲ್ ಕೋಣನಕೇರಿ, ಶ್ರೀ ರಾಮಯ್ಯ ಪೂಜಾರಿ, ಶ್ರೀ ಮಹಾಂತೇಶ ಬಾರಕೇರ, ಶ್ರೀ ರೋನಾಲ್ಡ್ ಆಲ್ಮೇಡಾ, ಶ್ರೀ ಅಶೋಕ ನಾಯ್ಕ, ಶಿರಸಿ ಗ್ರಾಮೀಣ ಪೊಲೀಸ ಠಾಣೆಯ ಶ್ರೀ ಚೇತನ ನಾಯ್ಕ, ಶ್ರೀ ಪ್ರದೀಪ ರೇವಣಕರ ಹಾಗೂ ಶಿರಸಿ ನಗರ ಠಾಣೆಯ ಶ್ರೀ ರಾಮದೇವ ಗಾಂವಕರ, ಹಾಗೂ ಚಾಲಕರಾದ ಶ್ರೀ ಪಾಂಡು ನಾಗೋಜಿ, ಶ್ರೀ ಮೋಹನ ನಾಯ್ಕ ಇವರು ಭಾಗವಹಿಸಿ ಆರೋಪಿತರನ್ನು ವಶಕ್ಕೆ ಪಡೆಯುವಲ್ಲಿ ಸಹಕರಿಸಿದ್ದು, ಸಿರ್ಸಿ ಪೊಲೀಸ್ ರ ಈ ಕಾರ್ಯಾಚರಣೆಯನ್ನು ಪ್ರಶಂಸಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *