ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ

ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ

surjewal

ಹುಬ್ಬಳ್ಳಿ: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಶುಕ್ರವಾರ ಆರೋಪಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ದೇಶ ಹಾಗೂ ವಿಶ್ವ, ಮೋದಿ ಸರ್ಕಾರ ಹೇಗೆ ಗೂಢಚಾರಿಗಳನ್ನು ಬಳಸಿಕೊಂಡು ಹೇಗೆ ಚುನಾಯಿತ ಸರ್ಕಾರವನ್ನು ಕೆಡವಿದೆ ಎಂಬುದನ್ನು ನೋಡಿದೆ. ಇಂತಹ ಸರ್ಕಾರ ಜನಪರ ಕೆಲಸ ಮಾಡಲು ಅಸಾಧ್ಯ. ಹೀಗಾಗಿ 2 ವರ್ಷಗಳ ಅವಧಿಯಲ್ಲಿ ಕೇವಲ ಭ್ರಷ್ಟಾಚಾರಗಳೇ ನಡೆದಿವೆ. ಇದೇ ಮೊದಲ ಬಾರಿಗೆ ಭ್ರಷ್ಟಾಚಾರವನ್ನು ಆರ್ಟಿಜಿಎಸ್ ಮೂಲಕ ನಡೆಸಿರುವುದನ್ನು ನೋಡಿದ್ದೇವೆಂದು ಕುಟುಕಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಕಾರ್ಯವನ್ನು ಶ್ಲಾಘಿಸುತ್ತೇನೆ. ದೇಶದಲ್ಲೇ ಅತಿ ದೊಡ್ಡ ಸರ್ಕಾರೇತರ ಆರೋಗ್ಯ ಸೇವೆ ಆರೋಗ್ಯ ಹಸ್ತವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ದೇಶದಲ್ಲಿ ಜನ ಆಕ್ಸಿಜನ್ ಇಲ್ಲದೆ ಸಾಯುತ್ತಿರುವಾಗ ಸರ್ಕಾರ ನೆರವಾಗದೇ ಕೈಚೆಲ್ಲಿ ಕೂತಿತ್ತು. ಈ ಸಮಯದಲ್ಲಿ ಜನರಿಗೆ ಆಕ್ಸಿಜನ್, ರೆಮಡಿಸಿವಿರ್ ಔಷಧಿ ಪೂರೈಸಿದ್ದು ಕಾಂಗ್ರೆಸ್ ನಾಯಕರು. ಆಸ್ಪತ್ರೆಗಳು ಹೆಚ್ಚಿನ ಸುಲಿಗೆ ಮಾಡುವಾಗ ನಮ್ಮ ನಾಯಕರು ತಮ್ಮ ಆಸ್ಪತ್ರೆಗಳಲ್ಲಿ ಕಡಿಮೆ ಮೊತ್ತಕ್ಕೆ ಚಿಕಿತ್ಸೆ ನೀಡಿದರು ಎಂದು ಸುರ್ಜೆವಾಲಾ ತಿಳಿಸಿದರು.

ಬಿಜೆಪಿಯು ಹಿಂದುಳಿದ ವರ್ಗಗಳ, ಬಡವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ವಿರೋಧಿಗಳು. ಬಿಜೆಪಿ ಈ ವರ್ಗಗಳ ಕಲ್ಯಾಣಕ್ಕೆ ಯಾವುದೇ ಕಾರ್ಯಯೋಜನೆ ತಂದಿಲ್ಲ. ಆದರೆ ಈಗ ಪ್ರಧಾನಿಗಳು ಟ್ವಿಟರ್ ಮೂಲಕ ಸುಳ್ಳು ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು 1952ರಲ್ಲಿ ಶೇ.2ರಷ್ಟಿಂದ ಆರಂಭ ಮಾಡಲಾಯಿತು. ನಂತರ 1981ರಿಂದ ಶೇ.10ರಷ್ಟು ಮೀಸಲಾತಿ ನೀಡಲಾಯಿತು. ನಂತರ ಕಾಂಗ್ರೆಸ್ ಸರ್ಕಾರ ಮಂಡಲ್ ಸಮಿತಿ ರಚಿಸಿತು. 1995-96 ರಲ್ಲಿ ಶೇ.27 ರಷ್ಟು ಮೀಸಲಾತಿ ನೀಡಿದೆವು. ಪಂಡಿತ್ ನೆಹರೂ, ವಲ್ಲಭಬಾಯ್ ಪಟೇಲ್, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ತಂದಿದ್ದರು. ಈ ಮೀಸಲಾತಿ ವೈದ್ಯಕೀಯ ಶಿಕ್ಷಣಕ್ಕೆ ಅನ್ವಯವಾಗಿರಲಿಲ್ಲ. 2007ರಲ್ಲಿಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ನಾಯಕಿ ಸೋನಿಯಾ ಗಾಂಧಿ ಅವರು ಈ ಬಗ್ಗೆ ನಿರ್ಧಾರ ಕೈಗೊಂಡು, ಹಿಂದುಳಿದ ವರ್ಗಗಳಿಗೆ ಕಡ್ಡಾಯವಾಗಿ ಎಲ್ಲ ಕೇಂದ್ರ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಕಾನೂನು ಜಾರಿಗೆ ತಂದರು. ಪ್ರಧಾನಿ ಮೋದಿ ಅವರು 2014 ರ ಚುನಾವಣೆಯಲ್ಲಿ ತಮ್ಮ ಸಮುದಾಯವನ್ನು ಚುನಾವಣೆಗೂ ಮುನ್ನ ಹಿಂದುಳಿದ ವರ್ಗ ಎಂದು ಮಾಡಿ ತಾನು ಹಿಂದುಳಿದ ವರ್ಗದವನು ಎಂದು ಹೇಳಿಕೊಂಡರು. 7 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಲಿಲ್ಲ. ನಂತರ ಸೋನಿಯಾ ಗಾಂಧಿ ಅವರು ಪ್ರಧಾನ ಮಂತ್ರಿಗಳಿಗೆ ಜುಲೈ 3, 2020 ರಂದು ಪತ್ರ ಬರೆದು ಈ ವರ್ಗದವರಿಗೆ ಮೀಸಲಾತಿ ನೀಡಿ, ಅದು ಸಂವಿಧಾನಬದ್ಧವಾಗಿದೆ ಎಂದು ಹೇಳಿದ್ದರು. ಪ್ರಧಾನಮಂತ್ರಿಗಳು ಇದಕ್ಕೆ ಪ್ರತ್ಯುತ್ತರ ನೀಡಲಿಲ್ಲ ಎಂದರು.

27 ಜುಲೈ 2020 ರಲ್ಲಿ ಹಾಗೂ ನಂತರ ವಿದ್ಯಾರ್ಥಿಯೊಬ್ಬಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿ, ಕೇಂದ್ರ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವುದನ್ನು ಪ್ರಶ್ನಿಸಿದರು. ನಂತರ ಕೋರ್ಟ್ ಈ ಮೀಸಲಾತಿಯನ್ನು ಜಾರಿಗೊಳಿಸುವಂತೆ ಆದೇಶ ನೀಡಿತು. ನಂತರ ಕಾಂಗ್ರೆಸ್ ಹಾಗೂ ಡಿಎಂಕೆ ನ್ಯಾಯಾಂಗ ನಿಂದನೆ ಅರ್ಜಿ ಹಾಕಿದರು. ಈಗ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ಪಾರಾಗಲು ಆ ಮೀಸಲಾತಿಯನ್ನು ಜಾರಿಗೊಳಿಸುತ್ತಿದೆ. ಇದು ಬಿಜೆಪಿಯ ಸುಳ್ಳಿನ ಪ್ರಚಾರಕ್ಕೆ ಸಾಕ್ಷಿ.ಅಸ್ಸಾಂ ಹಾಗೂ ಮಿಜೋರಾಮ್ ನಡುವಣ ಸಂಘರ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ. ಎರಡೂ ರಾಜ್ಯಗಳಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಅಧಿಕಾರದಲ್ಲಿದೆ. ಗೃಹ ಸಚಿವರು 10-12 ದಿನಗಳ ಹಿಂದಷ್ಟೇ ಇಲ್ಲಿಗೆ ಭೇಟಿ ನೀಡಿದ್ದರು ಹಾಗೂ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದರು. ಆದರೂ ಎರಡೂ ರಾಜ್ಯಗಳ ಪೊಲೀಸರು ಪರಸ್ಪರ ಗುಂಡು ಹಾರಿಸಿಕೊಳ್ಲುವಂತೆ ಮಾಡಿದ್ದು ಯಾಕೆ? 73 ನರ್ಷಗಳ ಸ್ವತಂತ್ರ ಭಾರತದಲ್ಲಿ ಇಂತಹ ಘಟನೆ ಎಂದಾದರೂ ನಡೆದಿತ್ತಾ? ನಾವು ಶತ್ರು ರಾಷ್ಟ್ರಗಳ ಜತೆ ಸೆಣೆಸಾಡಬೇಕಾ? ಅಥವಾ ನಮ್ಮ ದೇಶದ ಸಹೋದರರ ಜತೆ ಸೆಣೆಸಾಡಬೇಕಾ? ಕಾಂಗ್ರೆಸ್ ನೇತೃತ್ವದ ಯುಪಿಎ ಹಾಗೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ನಡುವಣ ವ್ಯತ್ಯಾಸ ಇದೇ. ಇದು ಗೃಹ ಸಚಿವರು ಹಾಗೂ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ವೈಫಲ್ಯ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಜನರ ಪ್ರಾಣ ಒತ್ತೆ ಇಟ್ಟು ಈ ಸಮರ ಸಾರುತ್ತಿದ್ದಾರಾ? ಇವರ ವಿರುದ್ಧ ಜೆ.ಪಿ ನಡ್ಡಾ ಅವರಾಗಲಿ, ಪ್ರಧಾನಿ ಅವರಾಗಲಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಬಿಜೆಪಿಯವರು ದೇಶವನ್ನು ಮುನ್ನಡೆಸುವ ರೀತಿ ಇದೇನಾ? ಅಮಿತ್ ಶಾರಂತೆ ದೇಶದ ಯಾವುದೇ ಗೃಹ ಸಚಿವರು ಈ ರೀತಿ ವಿಫಲರಾಗಿರಲಿಲ್ಲ. ಅವರು ಕೇವಲ ಕದ್ದಾಲಿಕೆಯಲ್ಲೇ ಸಮಯ ಕಳೆಯುತ್ತಿದ್ದಾರೆ ಎಂದು ಬಿಜೆಪಿಯನ್ನು ಸುರ್ಜೆವಾಲಾ ಕಟುವಾಗಿ ಟೀಕಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *