ಸ್ಪೀಕರ್ ಆಗ್ತಾರಾ ಮಂತ್ರಿ…ವಿಶ್ವೇಶ್ವರ ಹೆಗಡೆ ಸಚಿವಸ್ಥಾನದ ಗುಟ್ಟು ರಟ್ಟು ಮಾಡಿದ samajamukhi.net

ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೂ ನಾನೇ ವಿಧಾನಸಭಾ ಅಧ್ಯಕ್ಷ ಎನ್ನುವ ವಿಶ್ವೇಶ್ವರರ ಮಾತು ಈಗಿನ ಹೊಸ ಸಚಿವ ಸಂಪುಟದ ವರೆಗೋ ಅಥವಾ ಈ ಅವಧಿಯ ನಂತರ ಮುಂದಿನ ಸರ್ಕಾರ ಬರುವವರೆಗೂ ತಾಂತ್ರಿವಾಗಿ ಸ್ಫೀಕರ್ ಆಗಿ ಮುಂದುವರಿಯುವ ಸಾಂಪ್ರದಾಯಿಕ ಶಿಷ್ಟಾಚಾರದ ಬಗ್ಗೆ ಹೇಳಿದ ಮಾತೊ ಎನ್ನುವುದಕ್ಕೆ ಈ ವಾರವೇ ಉತ್ತರ ಸಿಗಲಿದೆ.

ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ  ಎಂದು ಬಿಂಬಿತವಾಗಿದ್ದ ರಾಜ್ಯ ವಿಧಾನಸಭಾ ಅಧ್ಯಕ್ಷ ಶಿರಸಿ ಕ್ಷೇತ್ರದ  ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಈಗಿನ ಸರ್ಕಾರದಲ್ಲಿ ಸಚಿವರಾಗ್ತಾರಾ ಎನ್ನುವ ಸುದ್ದಿ ಹರಿದಾಡುತ್ತಿದೆ.

ರಾಜ್ಯ ಸಚಿವ ಸಂಪುಟ ಪುನರ್ ರಚನೆಯಲ್ಲಿ ಹಿರಿಯರಿಗೆಲ್ಲಾ ಕೋಕ್ ಕೊಟ್ಟು ಹೊಸಬರಿಗೆ ಸಚಿವಸ್ಥಾನ ನೀಡಲಾಗುತ್ತಿದೆ ಎನ್ನುವ ಗಾಳಿಸುದ್ದಿಗಳ ನಡುವೆ ಮುಖ್ಯಮಂತ್ರಿ ಹುದ್ದೆಗೆ ಕಾಗೇರಿ ಹೆಸರು ಪ್ರಸ್ಥಾಪವಾದಂತೆ ಈಗ ಸಚಿವರಾಗುವ ವಿಷಯದಲ್ಲೂ ಇವರ ಹೆಸರು ಚಲಾವಣೆಯಲ್ಲಿದೆ ಎನ್ನಲಾಗುತ್ತಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಫೀಕರ್ ಆಗಿರುವುದು ಅವರ ಆಯ್ಕೆಯಲ್ಲ, ಕಾಗೇರಿ ಅನುಯಾಯಿಗಳು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವ ಬೇಡಿಕೆಯನ್ನು ಆಗಾಗ ಮುಂದಿಡುತಿದ್ದಾರೆ. ಈಗಲೂ ಕಾಗೇರಿ ಸಚಿವರಾಗಬೇಕು ಎನ್ನುವವರು ಅವರ ಆಪ್ತರೇ.
ವಿಧಾನಸಭಾ ಅಧ್ಯಕ್ಷ ಕಾಗೇರಿ ಕಳೆದ ವಾರದ ಪ್ರವಾಹದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದೆ ಬೆಂಗಳೂರಿನಲ್ಲೇ ಇದ್ದರು.ಕ್ಷೇತ್ರದಲ್ಲಿ ಪ್ರವಾಹದ ಭೀಕರತೆ ಇದ್ದಾಗ ಬೆಂಗಳೂರಿನಲ್ಲಿದ್ದು ಅದಕ್ಕಿಂತ ಹಿಂದೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾಗಿ ಚರ್ಚೆಯಾಗುತಿದ್ದಾಗಲೂ ಕಾಗೇರಿ ಎಂದಿನಂತೆ ಮಾಧ್ಯಮಗಳಿಗೂ ಪ್ರತಿಕ್ರೀಯಿಸದೆ ಸುಮ್ಮನಿದ್ದರು.

ಸೊರಬಾ ಸಾಗರ ಕ್ಷೇತ್ರಗಳ ಶಾಸಕರಾದ ಕುಮಾರ ಬಂಗಾರಪ್ಪ,ಹಾಲಪ್ಪ ಜೊತೆ ಕಾರ್ಕಳದ ಸುನಿಲ್ ಕುಮಾರ್ ಸಚಿವರಾಗುವ ಆಸೆ, ನಿರೀಕ್ಷೆಯಲ್ಲಿದ್ದಾರೆ. ಈಡಿಗ ಕೋಟಾದ ಶ್ರೀನಿವಾಸ್ ಪೂಜಾರಿ ಕೈಬಿಟ್ಟು, ಕುಮಾರತ್ರಯರಿಗೆ ಕೈಕೊಟ್ಟು ಹಾಲಪ್ಪ ಮಂತ್ರಿಯಾಗುವ ತವಕದಲ್ಲಿದ್ದಾರೆ ಎನ್ನುವುದು ರಾಜಾಹುಲಿ ಯಡಿಯೂರಪ್ಪ ಗುಂಪಿನ ವರ್ತಮಾನ!


ಆದರೆ ಈಗ ಮೌನಮುರಿದಿರುವ ಕಾಗೇರಿ ಕಳೆದ ವಾರ ಪೂರ್ವನಿಗಧಿಯ ಕಾರ್ಯಕ್ರಮಗಳಲ್ಲಿ ತೊಡಗಿ ಬಿಡುವು ದೊರೆತಿರಲಿಲ್ಲ. ಈಗ ಕ್ಷೇತ್ರದಲ್ಲಿದ್ದೇನೆ ಎಂದಿದ್ದಾರೆ. ಸಚಿವ ಸಂಪುಟ ರಚನೆಯಾಗುವವರೆಗೆ ಸರ್ಕಾರದಲ್ಲಿ ಅಸ್ಥಿತ್ವದಲ್ಲಿರುವ ಹುದ್ದೆಗಳೆಂದರೆ ಅದು ಮುಖ್ಯಮಂತ್ರಿಗಳ ಸ್ಥಾನ ಮತ್ತು ವಿಧಾನಸಭಾ ಅಧ್ಯಕ್ಷರ ಹುದ್ದೆ. ಈ ಮಹತ್ವದ ಹುದ್ದೆಯಲ್ಲಿದ್ದಾಗ ಮುಖ್ಯಮಂತ್ರಿ ಎಂದು ಬಿಂಬಿತವಾಗಿದ್ದ ಹೆಗಡೆ ಎಲ್ಲೂ ಮಾತನಾಡಿರಲಿಲ್ಲ.

ಮುಖ್ಯಮಂತ್ರಿ ರೇಸ್, ತಮ್ಮ ಮುಂದಿನ ರಾಜಕಾರಣ ಯಾವ ವಿಷಯದ ಬಗ್ಗೂ ಯಾರಿಗೂ ಮಾತಿಗೆ ಸಿಗದ ವಿಶ್ವೇಶ್ವರ ಹೆಗಡೆಯವರ ಹೆಸರು ಚಾಲ್ತಿಗೆ ಬರಲು ಕಾರಣ ಅವರ ಹಿರಿತನ. ಬಿ.ಜೆ.ಪಿ.ಯ ಹಿರಿಯ ನಾಯಕರಾಗಿರುವ ಹೆಗಡೆ ಎರಡು ಬಾರಿ ಸಚಿವರು ಎರಡು ಬಾರಿ ವಿಧಾನಸಭಾ ಅಧ್ಯಕ್ಷರು ಆಗಿದ್ದವರು. ಈಗ ವಿಶ್ವೇಶ್ವರ ಹೆಗಡೆ ಸಚಿವರಾಗುತ್ತಾರೆ ಎನ್ನುವ ವದಂತಿಗಳಿಗೆ samajamukhi.net ಗೆ ಪ್ರತಿಕ್ರೀಯಿಸಿರುವ ಅವರು ಕೊಟ್ಟ ಉತ್ತರ ಚುಟುಕಾಗಿದೆ.

ವಿವಾದ, ರಗಳೆಗಳಿಂದ ದೂರ ನಿಲ್ಲುವ ವಿಶ್ವೇಶ್ವರ ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೂ ನಾನೇ ವಿಧಾನಸಭಾ ಅಧ್ಯಕ್ಷ ಎನ್ನುವ ಅವರ ಮಾತು ಈಗಿನ ಹೊಸ ಸಚಿವ ಸಂಪುಟದ ವರೆಗೋ ಅಥವಾ ಈ ಅವಧಿಯ ನಂತರ ಮುಂದಿನ ಸರ್ಕಾರ ಬರುವವರೆಗೂ ತಾಂತ್ರಿವಾಗಿ ಸ್ಫೀಕರ್ ಆಗಿ ಮುಂದುವರಿಯುವ ಸಾಂಪ್ರದಾಯಿಕ ಶಿಷ್ಟಾಚಾರದ ಬಗ್ಗೆ ಹೇಳಿದ ಮಾತೊ ಎನ್ನುವುದಕ್ಕೆ ಈ ವಾರವೇ ಉತ್ತರ ಸಿಗಲಿದೆ.

ನಾನು ಈಗಲೂ ವಿಧಾನಸಭಾ ಅಧ್ಯಕ್ಷ ಸಚಿವನಾಗುವ ಬಗ್ಗೆ ನಾನು ಮಾತನಾಡಲು ಬರುವುದಿಲ್ಲ. ಇದೇ ಪ್ರಶ್ನೆಯನ್ನು ನೀವು ನನಗೆ ಕೇಳುವ ಬದಲು ಸಂಬಂಧಿಸಿದವರಿಗೆ ಕೇಳುವುದು ಸೂಕ್ತ.- ವಿಶ್ವೇಶ್ವರ ಹೆಗಡೆ, ಕಾಗೇರಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *