![](https://i0.wp.com/samajamukhi.net/wp-content/uploads/2021/08/bommai-cabinet-1.jpg?resize=640%2C320&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
![ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರದ ನಂತರ ಗ್ರೂಪ್ ಫೋಟೊ](https://i0.wp.com/media.kannadaprabha.com/uploads/user/imagelibrary/2021/8/4/w900X450/bommai-cabinet-1.jpg?w=760&ssl=1)
![](https://i0.wp.com/samajamukhi.net/wp-content/uploads/2021/08/bommai-cabinet-1.jpg?resize=423%2C212&ssl=1)
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
![](https://i0.wp.com/samajamukhi.net/wp-content/uploads/2021/07/IMG-20210714-WA0100.jpg?resize=723%2C1024&ssl=1)
https://imasdk.googleapis.com/js/core/bridge3.473.0_en.html#goog_15694410
ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.
ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ.
13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ. (kpc)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)