Smukhi local news- ಫ್ರಾ ಮತ್ತು ಗೆ ಗೆ ಪ್ರಶಸ್ತಿ, ಸಮಾನಮನಸ್ಕರ ಸಮಾಜಮುಖಿ ಕೆಲಸ

ತಮ್ಮಣ್ಣ ಬೀಗಾರರಿಗೆ ಅಡ್ವೈಸರ್ ಪ್ರಶಸ್ತಿ

ತಮ್ಮಣ್ಣ ಬೀಗಾರರ ‘ಫ್ರಾಗಿ ಮತ್ತು ಗೆಳೆಯರು’ ಮಕ್ಕಳ ಕಾದಂಬರಿಗೆ 2020 ನೇ ಸಾಲಿನ ಮಕ್ಕಳ ಸಾಹಿತ್ಯಕ್ಕಾಗಿ ರಾಜ್ಯಮಟ್ಟದಲ್ಲಿ ನೀಡುವ ಅಡ್ವೈಸರ್ ಪ್ರಶಸ್ತಿ ದೊರಕಿದೆ. ಮಂಡ್ಯ ಜಿಲ್ಲೆಯ ಅಡ್ವೈಸರ್ ಪತ್ರಿಕೆ ಸ್ಥಾಪಿಸಿರುವ ಈ ಪ್ರಶಸ್ತಿಯು 3000ರೂ ನಗದು ಹಾಗೂ ಪ್ರಶಸ್ತಿಪತ್ರಗಳನ್ನು ಒಳಗೊಂಡಿದೆ. ಬೀಗಾರರ ಇದೇ ಪುಸ್ತಕಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ‘ಪುಸ್ತಕ ಸೊಗಸು ಬಹುಮಾನ’ ಕೂಡಾ ಇತ್ತೀಚೆಗೆ ಬಂದಿದೆ. ಫ್ರಾಗಿ ಮತ್ತು ಗೆಳೆಯರು ಕಾದಂಬರಿಯು ‘ಇ’ ಬುಕ್ ಮತ್ತು ‘ಆಡಿಯೊ’ ಬುಕ್ ಆಗಿಕೂಡಾ ಓದುಗರ ಮೆಚ್ಚಿಗೆ ಗಳಿಸಿದೆ. ಬೀಗಾರರು ಮಕ್ಕಳಿಗಾಗಿಯೇ ಬರೆಯತ್ತಿದ್ದು ಅವರು ಕವನ ಸಂಕಲನಗಳು, ಕಥಾ ಸಂಕಲನಗಳು, ಲಲಿತ ಬರಹಗಳು, ಕಾದಂಬರಿಗಳು ಹಾಗೂ ಮಕ್ಕಳಿಗಾಗಿ ಚಿತ್ರ ಪುಸ್ತಕ ಹೀಗೆ ಇಪ್ಪತ್ತೈದಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

ಸಮಾನಮನಸ್ಕರ ಸಮಾಜಮುಖಿ ಕೆಲಸ… ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯಲ್ಲಿ ಮಹಾಮಳೆಯಿಂದಾಗಿ ಸಂಪೂರ್ಣ ಮನೆ ಹಾನಿ ಆದವರಿಗೆ ಹಾಗೂ ಭಾಗಶಃ ಹಾನಿ ಆದ ಕುಟುಂಬಕ್ಕೆ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಸಮಾನ ಮನಸ್ಕರು ಸಂಪೂರ್ಣ ಮನೆ ಹಾನಿ ಆದ ಹಾಗೂ ಭಾಗಶಃ ಮನೆ ಆದ ಸಂತ್ರಸ್ಥರಿಗೆ 1ಲಕ್ಷದ 27ಸಾವಿರದ 500ನೂರು ಮೌಲ್ಯದಲ್ಲಿ ಜಿಂಕ್ ಶೀಟ್(ತಗಡು) ಹಾಗೂ ಟಾರ್ಪಾಲ್‍ಗಳನ್ನು ಅಘನಾಶಿನಿ ಸಾಂಬಾರು ಬೆಳೆಗಳ ಉತ್ಪಾದಕ ಕಂಪನಿಯ ಆವರಣದಲ್ಲಿ ಸಾಂಕೇತಿಕವಾಗಿ ವಿತರಿಸಿ ನಂತರ ಸಂತೃಸ್ಥರ ಮನೆಗೆ ತೆರಳಿ ಬುಧವಾರ ವಿತರಿಸಿದರು.
ಸಂಪೂರ್ಣ ಮನೆ ಹಾನಿ ಆದವರಿಗೆ ಜಿಂಕ್ ಶೀಟ್(ತಗಡು) ಹಾಗೂ ಭಾಗಶಃ ಮನೆ ಆದವರಿಗೆ ಟಾರ್ಪಾಲ್‍ಗಳನ್ನು ವಿತರಿಸಲಾಯಿತು.ಎಸ್.ಆರ್.ಹೆಗಡೆ ಕುಂಬಾರಕುಳಿ, ರವೀಂದ್ರ ಹೆಗಡೆ ಹಿರೇಕೈ, ಗ್ರಾಪಂ ಸದಸ್ಯ ಸಿದ್ದಾರ್ಥ ಗೌಡರ್ ಮುಠ್ಠಳ್ಳಿ, ಅನಂತ ಶಾನಭಾಗ ಹಾರ್ಸಿಕಟ್ಟಾ, ಡಾ.ರವಿ ಹೆಗಡೆ ಹೊಂಡಗಾಸಿಗೆ, ಡಿ.ಕೆ.ನಾಯ್ಕ ತೆಂಗಿನಮನೆ,ಶಶಿಧರ ಹೆಗಡೆ ಹುಕ್ಲಮಕ್ಕಿ, ರಮೇಶ ಹೆಗಡೆ ಹಾರ್ಸಿಮನೆ, ದರ್ಶನ ಹೆಗಡೆ ಹೊನ್ನೆಹದ್ದ, ಪ್ರಮೋದ ಕೊಡಿಯಾ ಹೊನ್ನೆಹದ್ದ, ಸತೀಶ ಮುಠ್ಠಳ್ಳಿ, ಮಂಜು ಹುಬ್ಬಗೈ ಇತರರಿದ್ದರು.

ಸಿದ್ಧಾಪುರ ಕೊಪ್ಪ ಬಳಿ ಕೆಟ್ಟುನಿಂತಿದ್ದ ಮಾರುತಿ ಒಮಿನಿ ವಾಹನದ ಮೇಲೆ ಕಲ್ಲು ಹೊಡೆದು ಹಾನಿ
ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲು ಕೋರಿ ಮಾಲಕ ರಾಜು ನಾಯ್ಕ ಪೊಲೀಸರಿಗೆ ದೂರಿದ್ದಾರೆ.
ಕೋಲಶಿರ್ಸಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕಿ ದೇವಕಿ H ನಾಯ್ಕ್ ರಿಗೆ 2006-07 ಸಾಲಿನ 7ನೇ ತರಗತಿ ವಿದ್ಯಾರ್ಥಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಗಣ್ಯರು ಇಂತಹ ಕಾರ್ಯಕ್ರಮ ಅಪರೂಪದ್ದಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು.

ಶಿವಣ್ಣ ನಟನೆಯ ‘ಬೈರಾಗಿ’ ಸಿನಿಮಾ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಹಿಟ್!

ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ.

A still from byeragi

ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ.

‘ಟಗರು’ ಯಶಸ್ಸಿನ ಬಳಿಕ ಶಿವರಾಜ್ ಕುಮಾರ್ ಹಾಗೂ ‘ಡಾಲಿ’ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಇದಾಗಿರುವುದರಿಂದ ಪ್ರಾರಂಭದಿಂದಲೇ ನಿರೀಕ್ಷೆ ಗರಿಗೆದರಿದೆ. ಇಬ್ಬರೂ ಬೇರೆ ಬೇರೆ ಗೆಟಪ್ ಮೂಲಕ ಮೋಡಿ ಮಾಡಲಿದ್ದಾರೆ ಎಂಬುದು ವಿಶೇಷ. ಈಗಾಗಲೇ ಅಧಿಕೃತವಾಗಿ ಬಿಡುಗಡೆಯಾಗಿರುವ ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೋ ಹಾಗೂ ಕಾರುಗಳ ಮೇಲೆ ಶಿವಣ್ಣನ ಪೋಸ್ಟರ್ ರಾರಾಜಿಸುತ್ತಿವೆ.

ಸಿನಿಮಾದಲ್ಲಿ ಅಂಜಲಿ ನಾಯಕಿಯಾಗಿ ನಟಿಸಿದ್ದಾರೆ. ಬೈರಾಗಿಯಲ್ಲಿ ಪೃಥ್ವಿ ಅಂಬರ್, ಯಶೋ ಶಿವಕುಮಾರ್, ಉಮಾಶ್ರೀ ಮತ್ತು ಶಶಿಕುಮಾರ್ ಮುಂತಾದವರು ನಟಿಸಿದ್ದಾರೆ.

ಕೃಷ್ಣ ಸಾರ್ಥಕ್ ನಿರ್ಮಾಣದ ಬೈರಾಗಿ ಸಿನಿಮಾ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದೆ. ಚಿತ್ರದ ಉಳಿದ ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದ್ದು. ತಯಾರಕರು ಒಂದು ಬೃಹತ್ ಸೆಟ್ ಅನ್ನು ನಿರ್ಮಿಸಲು ಯೋಜಿಸಿದ್ದಾರೆ. “ನಾಯಕನ ಪರಿಚಯ ಮಾಡುವ ಹಾಡನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗುವುದು, ಮತ್ತು ಅದಕ್ಕಾಗಿ ಒಂದು ಸೆಟ್ ಅನ್ನು ನಿರ್ಮಿಸಲು ನಾವು ಯೋಜಿಸುತ್ತಿದ್ದೇವೆ. ಹಾಡಿನ ಚಿತ್ರೀಕರಣಕ್ಕಾಗಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಮತ್ತು ತಂತ್ರಜ್ಞರನ್ನು ಸೇರಿಸಲು ಯೋಜಿಸುತ್ತಿದ್ದೇವೆ. ಇದು ಎಲ್ಲಾ ಹವಾಮಾನ ಮತ್ತು ಕೋವಿಡ್ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಎಲ್ಲವೂ ಯೋಜನೆಯಂತೆ ನಡೆದರೆ, ನಾವು ಆಗಸ್ಟ್ ಅಂತ್ಯದ ವೇಳೆಗೆ ಅಥವಾ ಸೆಪ್ಟೆಂಬರ್ ವೇಳೆಗೆ ಚಿತ್ರೀಕರಣವನ್ನು ಮುಗಿಸುತ್ತೇವೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಶಿವರಾಜಕುಮಾರ್ ಭಜರಂಗಿ 2. ಬಿಡುಗಡೆಗಾಗಿ ಕಾಯುತ್ತಿದೆ. ಈ ಸಿನಿಮಾ ಬಿಡುಗಡೆಯ ನಂತರ ಶಿವಣ್ಣ ತನ್ನ 124 ನೇ ಚಿತ್ರದ ಸೆಟ್ ಗೆ ಸೇರಲಿದ್ದಾರೆ. ರಾಮ್ ಧೂಳಿಪುಡಿ ನಿರ್ದೇಶಿಸಲಿದ್ದಾರೆ. ಈ ಚಿತ್ರವು ಈ ತಿಂಗಳು ತೆರೆಗೆ ಬರಲಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *