ವಿದ್ಯುತ್ ಕ್ಷೇತ್ರ ಖಾಸಗೀಕರಣ: ಆ.10 ರಂದು ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ

ದೇಶದ  ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗೆ ವಿರೋಧ ಹೆಚ್ಚುತ್ತಿದೆ. ಹಲವು ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗಿ ವ್ಯವಸ್ಥೆಗೆ ಒಪ್ಪಿಸಿದ ಕೇಂದ್ರ ಸರ್ಕಾರದ ನಡೆಯನ್ನು ಹಲವು ಸಂಘಟನೆಗಳು ವಿರೋಧಿಸಿವೆ. ದೇಶದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಖಾಸಗಿ ಕ್ಷೇತ್ರಕ್ಕೆ ನೀಡುವ ಕೇಂದ್ರ ಸರ್ಕಾರದ ಮಸೂದೆಗೆ ಆಗಷ್ಟ್ 10 ರಂದು ಅನುಮೋದನೆಯ ಒಪ್ಪಿಗೆ ಮುದ್ರೆ ಬೀಳಲಿದೆ.

ಮಳೆ, ಪ್ರವಾಹದಿಂದ ತಾಲೂಕಿನಾದ್ಯಂತ ವ್ಯಾಪಕ ಹಾನಿಯಾಗಿದ್ದು ಅದರ ಸಮೀಕ್ಷೆ ಕಾರ್ಯ ನಡೆದಿಲ್ಲ. ಸ್ಥಳಿಯ ಶಾಸಕರು ಸಂಸದರು ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಿಲ್ಲ, ತಾಲೂಕಿನ ರೈತರಿಗೆ ಸಾಮೂಹಿಕವಾಗಿ, ಸಮಗ್ರವಾಗಿ ಬೆಳೆಹಾನಿ ಪರಿಹಾರ ನೀಡಬೇಕು. ಜೀವ, ಬೆಳೆ, ಸಾರ್ವಜನಿಕ ಸ್ವತ್ತಿನ ಹಾನಿಗೆ ಸೂಕ್ತ ಪರಿಹಾರ ನ್ಯಾಯ ಒದಗಿಸಬೇಕು. ಜಿಲ್ಲೆಗೆ ಪ್ರವಾಹ ಪರಿಹಾರಕ್ಕೆ ಬಂದ 210 ಕೋಟಿ ಅನುದಾನದಲ್ಲಿ ರೈತರು, ಬೆಳೆಹಾನಿ ಪರಿಹಾರದ ಪ್ರಮಾಣ ಬಹಿರಂಗಪಡಿಸಬೇಕು.- ವೀರಭದ್ರ ನಾಯ್ಕ, ರೈತ ಸಂಘದ ಅಧ್ಯಕ್ಷ

ಈ ವರೆಗೆ ಆಡಳಿತಾರೂಢ ಕೇಂದ್ರ ಸರ್ಕಾರ ಹಲವು ಸಾರ್ವಜನಿಕ ಉದ್ದಿಮೆ ಸೇವಾಕ್ಷೇತ್ರಗಳನ್ನು ಖಾಸಗಿಯವರಿಗೆ ಒಪ್ಪಿಸಿದೆ. ಈಗ ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡುವ ಉದ್ದೇಶದಿಂದ ಮಸೂದೆ ಪಾಸು ಮಾಡಲು ಕೇಂದ್ರ ಮುಂದಾಗಿದೆ.


ಈ ಪ್ರಕ್ರೀಯೆಯನ್ನು ಜನವಿರೋಧಿ ತೀರ್ಮಾನ  ಎಂದು ಕರೆದಿರುವ ರಾಜ್ಯ ರೈತ ಸಂಘ ಆಗಷ್ಟ್ 10 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲು ಕರೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ರಾಜ್ಯ ರೈತ ಸಂಘದ ಈ ವಿರೋಧಕ್ಕೆ ಬೆಂಬಲ ವ್ಯಕ್ತವಾಗಿದ್ದು ಆಗಸ್ಟ್ 10 ರಂದು ಜಿಲ್ಲೆಯ ಕೆಲವು ತಾಲೂಕುಗಳ ತಹಸಿಲ್ಧಾರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ವಿದ್ಯುತ್ ಕ್ಷೇತ್ರ ಖಾಸಗಿಕರಣದಿಂದ ಜನಸಾಮಾನ್ಯರು, ವಿದ್ಯುತ್ ಶಕ್ತಿ ಉತ್ಪಾದನೆ ಮತ್ತು ವಿತರಣೆ ನಿಗಮದ ನೌಕರರಿಗೆ  ತೊಂದರೆಯಾಗಲಿದ್ದು ವಿದ್ಯುತ್ ಗ್ರಾಹಕರು ಮತ್ತು ನಿಗಮದ ನೌಕರರ ಪರವಾಗಿ ಹೋರಾಟ ಮಾಡುವುದಾಗಿ ರೈತಸಂಘ ಹೇಳಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ವೀರಭದ್ರ ನಾಯ್ಕ ಮಳಲವಳ್ಳಿ ಕೇಂದ್ರ ವಿದ್ಯುತ್ ಖಾಸಗೀಕರಣ ಮಸೂದೆಗೆ ಅನುಮತಿ ನೀಡುವ ಆಗಷ್ಟ್ ಹತ್ತರಂದು ರೈತ ಸಂಘದ ಕರೆಯ ಮೇರೆಗೆ ಸಿದ್ಧಾಪುರದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲಾ ರೈತರು,ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *