ಪ್ರವಾಹ ಪೀಡಿತ ಮಲ್ಲಾಪುರಕ್ಕೆ ಭೇಟಿ ನೀಡದ ಸಿಎಂ ಬೊಮ್ಮಾಯಿ: ಗ್ರಾಮಸ್ಥರ ಬೇಸರ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

As many as 200 houses have been completely destroyed in Mallapura panchayat

ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ಕಾರವಾರದ ಮಲ್ಲಾಪುರ ಗ್ರಾಮ ಪಂಚಾಯಿತಿ ಅಡಿಯಲ್ಲಿ ಒಟ್ಟು 8 ಗ್ರಾಮಗಳ ಬರಲಿದ್ದು, ಈ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಒಟ್ಟು 200 ಮನೆಗಳು ನಾಶವಾಗಿದ್ದು, 2000ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ತಮ್ಮ ಗ್ರಾಮಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡದಿರುವುದಕ್ಕೆ ಇದೀಗ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. 

ಕಳೆದ ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿಯವರು ಪ್ರವಾಹ ಪೀಡಿತ ಅಂಕೋಲಾ, ಯೆಲ್ಲಾಪುರ ಹಾಗೂ ಅರೆಬೈಲ್ ಘಾಟ್ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ಕಾರವಾರಕ್ಕೂ ಮುಖ್ಯಮಂತ್ರಿಗಳು ಭೇಟಿ ನೀಡಬೇಕಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಪ್ರವಾಸ ರದ್ದುಗೊಳಿಸಿ ದೆಹಲಿಗೆ ಭೇಟಿ ನೀಡಿದ್ದರು. 

ಈ ನಡುವೆ ಮಲ್ಲಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉದಯ್ ಬಾಂದೇ ಕರ್ ರು ಮಾತನಾಡಿ, 2019ರ ಪ್ರವಾಹದ ಬಳಿಕ ಅಧಿಕಾರದಲ್ಲಿರುವ ಯಾವುದೇ ನಾಯಕರೂ ಗ್ರಾಮಕ್ಕೆ ಭೇಟಿ ನೀಡಿಲ್ಲ. ನೂತನ ಮುಖ್ಯಮಂತ್ರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡುವ ವಿಶ್ವಾಸವಿತ್ತು. ಅದರೆ, ನಿರಾಸೆಯುಂಟಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ನಮ್ಮ ಸಮಸ್ಯೆಗಳಿಗೆ ಸ್ಪಂದನೆ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಕದ್ರಾ ಅಣೆಕಟ್ಟಿನಿಂದ 2.7 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶಗೊಂಡಿವೆ. ಒಳಹರಿವು ಹೆಚ್ಚಾಗಿದ್ದರಿಂದ ಅಣೆಕಟ್ಟು ಕ್ರೆಸ್ಟ್ ಗೇಟ್‌ಗಳನ್ನು ತೆರೆಯಬೇಕಾಗಿ ಬಂದಿತ್ತು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನುಜಾ ರಂಗಸ್ವಾಮಿಯವರು ತಿಳಿಸಿದ್ದಾರೆ.

ಉಪ ಆಯುಕ್ತರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಪ್ರತೀವರ್ಷ ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಲೇ ಇರುತ್ತದೆ. ಸರ್ಕಾರ ಇಡೀ ಗ್ರಾಮ ಪಂಚಾಯತಿಯನ್ನೇ ಸ್ಥಳಾಂತರ ಮಾಡಲಿ ಎಂದು ತನುಜಾ ಅವರು ಹೇಳಿದ್ದಾರೆ.

ಹೈಡಲ್ ಪವರ್ ಉತ್ಪಾದಿಸುವ ಸಲುವಾಗಿ ಕಾಳಿ ನದಿಗೆ ಅಡ್ಡಲಾಗಿ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಆದರೆ ಹತ್ತಿರದಲ್ಲಿ ಕೈಗಾ ಅಣುಸ್ಥಾವರ ಕಾರ್ಯನಿರ್ವಹಿಸುತ್ತಿರುವುದರಿಂದ ಕದ್ರಾ ಅಣೆಕಟ್ಟೆಯಲ್ಲಿರುವ ಜಲವಿದ್ಯುತ್ ಘಟಕವನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಮಾತನಾಡಿ,  ಕೆಪಿಸಿಎಲ್ ಅಧಿಕಾರಿಗಳು ಯಾವುದೇ ಮುನ್ಸೂಚನೆಗಳನ್ನು ನೀಡದೆ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಮಲ್ಲಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ನಾನು ಯತ್ನಿಸಿದ್ದೆ, ಆದರೆ, ಹೆಚ್ಚಿನ ಭದ್ರತೆಯಿದ್ದರಿಂದ ಹತ್ತಿರ ಕೂಡ ಹೋಗಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *