ಹೊಲ,ಗದ್ದೆ-ತೋಟಗಳ ದುರಸ್ಥಿಗೆ ಉದ್ಯೋಗಖಾತ್ರಿಯಲ್ಲಿ ಅವಕಾಶ

ಸಿದ್ದಾಪುರ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬಹಳಷ್ಟು ಹಾನಿಯಾಗಿದೆ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ 998600 ರೂ ಗಳನ್ನು ನೀಡಲಾಗಿದೆ. ತಾಲೂಕಿನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ 400% ಜಾಸ್ತಿಯಾಗಿದ್ದರಿಂದ ವಿಪರೀತ ಹಾನಿ ಸಂಭವಿಸಿದೆ. ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಮಂಗಳವಾರ ಮಿನಿವಿಧಾನಸೌಧದ ಸಭಾ ಭವನದಲ್ಲಿ ಕೋವಿಡ್ – 19 ಹಾಗೂ ಪ್ರವಾಹದಿಂದ ಹಾನಿಗೊಳಗಾದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ಸುದ್ದಿಗೋಷ್ಠಿ ನಡೆಸಿ ತಾಲೂಕಿನಲ್ಲಿ 11 ಮನೆಗಳು ಸಂಪೂರ್ಣ ಹಾನಿಯಾಗಿರುತ್ತದೆ. ಇದರಲ್ಲಿ ಎಂಟು ಅಧಿಕೃತ ಮನೆಗಳಿಗೆ 95100 ಎಂಟು ರೂಪಾಯಿಗಳನ್ನು ನೀಡಲಾಗಿದೆ. ಮನೆಗೆ ನೀರು ಹೋಗಿ ಹಾನಿ ಸಂಭವಿಸಿದ ಮನೆಗಳಿಗೆ 3800 ರೂಪಾಯಿಗಳನ್ನು ನೀಡಲಾಗಿದೆ. ಗಾಳಿ-ಮಳೆಯಿಂದಾಗಿ 225 ವಿದ್ಯುತ್ ಕಂಬಗಳು ಹಾಗೂ 4 ಟ್ರಾನ್ಸ್ಮಿಟರ್ ಗಳು ಹಾನಿಯಾಗಿದ್ದು ಅವುಗಳನ್ನು ತಕ್ಷಣದಲ್ಲಿ ಸರಿಪಡಿಸಿ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ 167 ಕಿಲೋಮೀಟರ್ 80 ರಸ್ತೆಗಳು ಹಾಗೂ 12 ಬ್ರಿಜ್ ಗಳು ಎರಡು ಶಾಲೆ ಹಾಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಹಾನಿ ಉಂಟಾಗಿದೆ. ಪಿಡಬ್ಲ್ಯೂಡಿ 150 ಕಿಲೋಮೀಟರ್ ರಸ್ತೆ ಹಾಗೂ 24 ಬ್ರಿಜ್ ಗಳಿಗೆ ಹಾನಿಯಾಗಿರುತ್ತದೆ. ಬಾಳೂರ್, ಶಿರಗೋಡ್ಬೈಲ್, ಗೋರನಮನೆ ಬ್ರಿಜ್ ಗಳು ಸಂಪೂರ್ಣ ಹಾನಿಯಾಗಿದೆ. ತಾಲೂಕಿನಲ್ಲಿ 12 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು 784 ಜನ ಅಶ್ರಯ ಪಡೆದಿದ್ದರು. ಹಾಲಿ 6 ಕಾಳಜಿ ಕೇಂದ್ರಗಳಲ್ಲಿ 136 ಜನರು ಆಶ್ರಯ ಪಡೆದಿದ್ದಾರೆ. ಪ್ರಕೃತಿ ವಿಕೋಪ ದಿಂದ ಒಂದು ಸಾವು ಸಂಭವಿಸಿದ್ದು 24 ಗಂಟೆಯ ಒಳಗೆ ಪರಿಹಾರ ವಿತರಿಸಲಾಗಿದೆ.
ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಜಿಲ್ಲೆಗೆ 200 ಕೋಟಿರೂ. ನೀಡುವ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಇವೆಲ್ಲವನ್ನು ಆದ್ಯತೆಯ ಮೇಲೆ ಸರಿಪಡಿಸಲಾಗುವುದು.
ಕೊವಿಡ್ ೩ನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಈಗಾಗಲೇ ನಾವು, ತಾಲೂಕಾಡಳಿತ ಸಿದ್ಧವಾಗಿದ್ದೇವೆ. ಕೋವಿಡ್ ಚಿಕಿತ್ಸೆ ಬೇಕಾಗುವ ಅಗತ್ಯತೆ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವಂತೆ ತಹಸೀಲ್ದಾರರಿಗೆ ಹಾಗೂ ತಾಪಂ ಮುಖ್ಯಾಧಿಕಾರಿಗೆ ಸೂಚಿಸಿದ್ದೇನೆ ಎಂದರು.
ಅತಿಹೆಚ್ಚು ಮಳೆಯಾದ ಕಾರಣ ಜನರಿಗೆ ಸಾಕಷ್ಟು ತೊಂದರೆಯಾಯಿತು ಆದರೆ ಸ್ಥಳೀಯ ಆಡಳಿತ, ಸಂಘ-ಸಂಸ್ಥೆಗಳ ಸಹಾಯದಿಂದ ಸಮರ್ಥವಾಗಿ ಎದುರಿಸಿದ್ದೇವೆ.
ಅತಿಕ್ರಮಣದಲ್ಲಿದ್ದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡುವ ಬಗ್ಗೆ ಹಾಗೂ ಮನೆಗೆ ನೀರು ನುಗ್ಗಿದ್ದಕ್ಕೆ ಹತ್ತುಸಾವಿರರೂ.ನೀಡುವ ಸರಕಾರದ ಆದೇಶದ ನಿರೀಕ್ಷೆಯಲ್ಲಿದ್ದೇವೆ.

25 ಹೆಕ್ಟೇರ್ ಭತ್ತದ ಪ್ರದೇಶ ಕೊಚ್ಚಿಕೊಂಡು ಹೋಗಿದ್ದರೆ 112 ಹೆ.ಪ್ರದೇಶ ಹಾನಿಯಾಗಿದೆ. 60 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿಯಾಗಿದೆ ಇನ್ನೂ ಸಮೀಕ್ಷೆ ನಡೆಯುತ್ತಿದೆ
ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆ ಮುಗಿದಿದ್ದು ಹೊಲ-ಗದ್ದೆ, ತೋಟಗಳ ದುರಸ್ತಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕ್ರೀಯಾಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಸರಕಾರದಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ವ್ಯಾಕ್ಸಿನೇಷನ್ ಕೊರತೆ ಇದೆ. ಬೇಡಿಕೆ ಹೆಚ್ಚಿರುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
ಅತಿಕ್ರಮಣ ದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದು ಮನೆ ಕರ ಕಟ್ಟುತ್ತಿರುವ ಹಾಗೂ ಮನೆ ನಂಬರ್ ಹೊಂದಿರುವ ಹೊಂದಿರುವವರಿಗೆ ಮನೆ ನಿರ್ಮಿಸಲು ಸರ್ಕಾರದಿಂದ ಆದೇಶವಾಗಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ತಹಶಿಲ್ದಾರ ಪ್ರಸಾದ್ ಎಸ್.ಎ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಸಿಪಿಐ ಕುಮಾರ ಕೆ, ಪಿಡಬ್ಲ್ಯೂಡಿ , ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *