ಹೊಲ,ಗದ್ದೆ-ತೋಟಗಳ ದುರಸ್ಥಿಗೆ ಉದ್ಯೋಗಖಾತ್ರಿಯಲ್ಲಿ ಅವಕಾಶ

ಸಿದ್ದಾಪುರ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬಹಳಷ್ಟು ಹಾನಿಯಾಗಿದೆ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ 998600 ರೂ ಗಳನ್ನು ನೀಡಲಾಗಿದೆ. ತಾಲೂಕಿನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ 400% ಜಾಸ್ತಿಯಾಗಿದ್ದರಿಂದ ವಿಪರೀತ ಹಾನಿ ಸಂಭವಿಸಿದೆ. ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಮಂಗಳವಾರ ಮಿನಿವಿಧಾನಸೌಧದ ಸಭಾ ಭವನದಲ್ಲಿ ಕೋವಿಡ್ – 19 ಹಾಗೂ ಪ್ರವಾಹದಿಂದ ಹಾನಿಗೊಳಗಾದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ಸುದ್ದಿಗೋಷ್ಠಿ ನಡೆಸಿ ತಾಲೂಕಿನಲ್ಲಿ 11 ಮನೆಗಳು ಸಂಪೂರ್ಣ ಹಾನಿಯಾಗಿರುತ್ತದೆ. ಇದರಲ್ಲಿ ಎಂಟು ಅಧಿಕೃತ ಮನೆಗಳಿಗೆ 95100 ಎಂಟು ರೂಪಾಯಿಗಳನ್ನು ನೀಡಲಾಗಿದೆ. ಮನೆಗೆ ನೀರು ಹೋಗಿ ಹಾನಿ ಸಂಭವಿಸಿದ ಮನೆಗಳಿಗೆ 3800 ರೂಪಾಯಿಗಳನ್ನು ನೀಡಲಾಗಿದೆ. ಗಾಳಿ-ಮಳೆಯಿಂದಾಗಿ 225 ವಿದ್ಯುತ್ ಕಂಬಗಳು ಹಾಗೂ 4 ಟ್ರಾನ್ಸ್ಮಿಟರ್ ಗಳು ಹಾನಿಯಾಗಿದ್ದು ಅವುಗಳನ್ನು ತಕ್ಷಣದಲ್ಲಿ ಸರಿಪಡಿಸಿ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ 167 ಕಿಲೋಮೀಟರ್ 80 ರಸ್ತೆಗಳು ಹಾಗೂ 12 ಬ್ರಿಜ್ ಗಳು ಎರಡು ಶಾಲೆ ಹಾಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಹಾನಿ ಉಂಟಾಗಿದೆ. ಪಿಡಬ್ಲ್ಯೂಡಿ 150 ಕಿಲೋಮೀಟರ್ ರಸ್ತೆ ಹಾಗೂ 24 ಬ್ರಿಜ್ ಗಳಿಗೆ ಹಾನಿಯಾಗಿರುತ್ತದೆ. ಬಾಳೂರ್, ಶಿರಗೋಡ್ಬೈಲ್, ಗೋರನಮನೆ ಬ್ರಿಜ್ ಗಳು ಸಂಪೂರ್ಣ ಹಾನಿಯಾಗಿದೆ. ತಾಲೂಕಿನಲ್ಲಿ 12 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು 784 ಜನ ಅಶ್ರಯ ಪಡೆದಿದ್ದರು. ಹಾಲಿ 6 ಕಾಳಜಿ ಕೇಂದ್ರಗಳಲ್ಲಿ 136 ಜನರು ಆಶ್ರಯ ಪಡೆದಿದ್ದಾರೆ. ಪ್ರಕೃತಿ ವಿಕೋಪ ದಿಂದ ಒಂದು ಸಾವು ಸಂಭವಿಸಿದ್ದು 24 ಗಂಟೆಯ ಒಳಗೆ ಪರಿಹಾರ ವಿತರಿಸಲಾಗಿದೆ.
ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಜಿಲ್ಲೆಗೆ 200 ಕೋಟಿರೂ. ನೀಡುವ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಇವೆಲ್ಲವನ್ನು ಆದ್ಯತೆಯ ಮೇಲೆ ಸರಿಪಡಿಸಲಾಗುವುದು.
ಕೊವಿಡ್ ೩ನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಈಗಾಗಲೇ ನಾವು, ತಾಲೂಕಾಡಳಿತ ಸಿದ್ಧವಾಗಿದ್ದೇವೆ. ಕೋವಿಡ್ ಚಿಕಿತ್ಸೆ ಬೇಕಾಗುವ ಅಗತ್ಯತೆ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವಂತೆ ತಹಸೀಲ್ದಾರರಿಗೆ ಹಾಗೂ ತಾಪಂ ಮುಖ್ಯಾಧಿಕಾರಿಗೆ ಸೂಚಿಸಿದ್ದೇನೆ ಎಂದರು.
ಅತಿಹೆಚ್ಚು ಮಳೆಯಾದ ಕಾರಣ ಜನರಿಗೆ ಸಾಕಷ್ಟು ತೊಂದರೆಯಾಯಿತು ಆದರೆ ಸ್ಥಳೀಯ ಆಡಳಿತ, ಸಂಘ-ಸಂಸ್ಥೆಗಳ ಸಹಾಯದಿಂದ ಸಮರ್ಥವಾಗಿ ಎದುರಿಸಿದ್ದೇವೆ.
ಅತಿಕ್ರಮಣದಲ್ಲಿದ್ದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡುವ ಬಗ್ಗೆ ಹಾಗೂ ಮನೆಗೆ ನೀರು ನುಗ್ಗಿದ್ದಕ್ಕೆ ಹತ್ತುಸಾವಿರರೂ.ನೀಡುವ ಸರಕಾರದ ಆದೇಶದ ನಿರೀಕ್ಷೆಯಲ್ಲಿದ್ದೇವೆ.

25 ಹೆಕ್ಟೇರ್ ಭತ್ತದ ಪ್ರದೇಶ ಕೊಚ್ಚಿಕೊಂಡು ಹೋಗಿದ್ದರೆ 112 ಹೆ.ಪ್ರದೇಶ ಹಾನಿಯಾಗಿದೆ. 60 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿಯಾಗಿದೆ ಇನ್ನೂ ಸಮೀಕ್ಷೆ ನಡೆಯುತ್ತಿದೆ
ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆ ಮುಗಿದಿದ್ದು ಹೊಲ-ಗದ್ದೆ, ತೋಟಗಳ ದುರಸ್ತಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕ್ರೀಯಾಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಸರಕಾರದಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ವ್ಯಾಕ್ಸಿನೇಷನ್ ಕೊರತೆ ಇದೆ. ಬೇಡಿಕೆ ಹೆಚ್ಚಿರುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
ಅತಿಕ್ರಮಣ ದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದು ಮನೆ ಕರ ಕಟ್ಟುತ್ತಿರುವ ಹಾಗೂ ಮನೆ ನಂಬರ್ ಹೊಂದಿರುವ ಹೊಂದಿರುವವರಿಗೆ ಮನೆ ನಿರ್ಮಿಸಲು ಸರ್ಕಾರದಿಂದ ಆದೇಶವಾಗಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ತಹಶಿಲ್ದಾರ ಪ್ರಸಾದ್ ಎಸ್.ಎ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಸಿಪಿಐ ಕುಮಾರ ಕೆ, ಪಿಡಬ್ಲ್ಯೂಡಿ , ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *