ವಿದ್ಯುತ್ ಖಾಸಗೀಕರಣ ರೈತ ಸಂಘದ ಪ್ರತಿಭಟನೆ

ಸಿದ್ದಾಪುರ: ಕೇಂದ್ರ ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರು, ದೀನದಲಿತರ ಪರವಾಗಿಲ್ಲ. ಮುಂದೆ ಅವರನ್ನು ಜೀತದಾಳುಗಳಾಗಿ ದುಡಿಯುವಂತೆ ಮಾಡಲು ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ತಾಲೂಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.
ಅವರು ಕೇಂದ್ರ ಸರಕಾರವು ಹೊರಡಿಸಿದ ರೈತ ವಿರೋಧಿ ಕಾಯ್ದೆ ಗಳು ಹಾಗೂ ಜನವಿರೋಧಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತಾಡಿದರು.
ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಿದರೆ ಖಾಸಗಿ ಕಂಪನಿಗಳು ನೌಕರರನ್ನು ಗುಲಾಮರನ್ನಾಗಿಸಿ ಕೆಲಸ ಮಾಡಿಸುತ್ತವೆ. ಅಲ್ಲದೆ ಯಾವುದೇ ಉದ್ಯೋಗದ ಸೃಷ್ಟಿಮಾಡುವುದಿಲ್ಲ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತದೆ. ಯುವಕರು ಉದ್ಯೋಗವಿಲ್ಲದೆ ಬೀದಿ-ಬೀದಿಯಲ್ಲಿ ಅಲೆಯುವಂತೆ ಸ್ಥಿತಿ ನಿರ್ಮಾಣವಾಗುತ್ತದೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದರೆ ಕೃಷಿಗೆ ಮಾಡಿದ ಅರ್ಧದಷ್ಟು ಖರ್ಚನ್ನು ಕೊಡುತ್ತೇವೆ ಎಂದು ಹೇಳಿದ್ದರು. ರೈತರ ಸಾಲವನ್ನು ಮನ್ನಾ ಮಾಡಲಿಲ್ಲ. ಹೇಳಿದ ಭರವಸೆಗಳನ್ನು ಈಡೇರಿಸಿದೆ ವಚನಭ್ರಷ್ಟ ಆಗಿದ್ದಾರೆ ಎಂದು ಹರಿಹಾಯ್ದರು. ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ರೈತ ವಿರೋಧಿ ಕಾಯ್ದೆ ಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿ ಎನ್ ನಾಯ್ಕ್ ಮಾತನಾಡಿ ರೈತರಿಗೆ ದೀನದಲಿತರಿಗೆ ನಿರುದ್ಯೋಗಿಗಳಿಗೆ ಆಶಾವಾದದ ಮಾತುಗಳನ್ನಾಡಿ ಅಧಿಕಾರಕ್ಕೆ ಬಂದ ನರೇಂದ್ರಮೋದಿಯವರು “ಅಟ್ಟಕ್ಕೆ ಏರಿದ ಮೇಲೆ ಏಣಿಯನ್ನು ಒದ್ದರು” ಎನ್ನುವಂತೆ ವಚನಭ್ರಷ್ಟ ರಾಗಿದ್ದಾರೆ ಹೇಳಿದ ಯಾವುದೇ ಬರವಸೆಗಳನ್ನು ಈಡೇರಿಸಲಿಲ್ಲ. ಪ್ರಜಾಪ್ರಭುತ್ವದ ಆಡಳಿತವನ್ನು ನಡೆಸದೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ. ವಿದ್ಯುತ್ ಖಾಸಗಿಕರಣ ಮಾಡಿ ಹಣ ಮಾಡಲುಹೊರಟಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ತಿಮ್ಮಣ್ಣ ಬಿ. ನಾಯ್ಕ, ಕಾರ್ಯಾಧ್ಯಕ್ಷ ಪಿ ವಿ ಹೆಗಡೆ ಹೊಸಗದ್ದೆ,
ತಾಲೂಕು ಪ್ರಧಾನ ಕಾರ್ಯದರ್ಶಿ ವಿನಾಯಕ ಕಾನಮನೆ,
ಸಂಘಟನಾ ಅಧ್ಯಕ್ಷ ಸುರೇಶ್ ತೆಂಗಿನಮನೆ,
ಉಪಾಧ್ಯಕ್ಷರು ಮಹಮದ್ ಇಸ್ಮಾಯಿಲ್ ಸಾಬ್ ಅರೆಂದೂರು
ಹಲಿಗೇರಿ ಕ್ಷೇತ್ರ ಅಧ್ಯಕ್ಷ ಶಿವಾನಂದ್ ಇಟಗಿ,
ತಾಲೂಕು ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಮಲ ಪ್ರಭಾಕರ್ ನಾಯ್ಕ್ , ಕಾರ್ಯಾಧ್ಯಕ್ಷೆ ರಾಧಾ ಸೀತಾರಾಮ ನಾಯ್ಕ್ , ಯುವಮೋರ್ಚಾ ಕಾರ್ಯಾಧ್ಯಕ್ಷ ಹರೀಶ್,
ಸದಸ್ಯರಾದ ಚಂದ್ರ ಶೇಟ್, ವಾಸು ನಾಯ್ಕ ಮನಮನೆ
ಪ್ರಮುಖರಾದ ಗಾಂಧೀಜಿ ನಾಯ್ಕ್,
ಇಲಿಯಾಸ್ ಇಬ್ರಾಹಿಂ ಸಾಬ, ನಾಸೀರ್ ಖಾನ್
ಹೆಚ್. ಕೆ :ಶಿವಾನಂದ, ಸೋಮಶೇಖರ್ ಮನೆಮನೆ
ಮಂಜುನಾಥ್ ಮನೆಮನೆ, ಲೋಕೇಶ್ ಮನಮನೆ
ಹಾಗೂ ರೈತ ಭಾಂದವರು ಉಪಸ್ಥಿತರಿದ್ದರು.
ದೊಡ್ಮನೆ ಕ್ಷೇತ್ರ ಅಧ್ಯಕ್ಷ ಕೆರಿಯಪ್ಪ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *