ಮೋದಿ ಭಾರತದ ಕಿಂಗ್ ಅಲ್ಲ……. ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ಸ್ಫರ್ಧೆ….!

ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಈ ಮಾಜಿ ಐಪಿಎಸ್ ಅಧಿಕಾರಿ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

UP_CM1

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

ಚುನಾವಣೆ ಸನಿಹವಾಗುತ್ತಿರುವಂತೆಯೇ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಉತ್ಸುಕರಾಗಿದ್ದಾರೆ. 

https://imasdk.googleapis.com/js/core/bridge3.474.0_en.html#goog_596088374

https://imasdk.googleapis.com/js/core/bridge3.474.0_en.html#goog_596088377

2020 ರ ಮಾರ್ಚ್ ನಲ್ಲಿ ಅವಧಿಗೂ ಮುನ್ನವೇ ಸೇವೆಗೆ ರಾಜೀನಾಮೆ ನೀಡಿದ್ದ ಅಮಿತಾಬ್ ಠಾಕೂರ್ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿಯ ಪತ್ನಿ ನೂತನ್ ಠಾಕೂರ್ ಈ ಸ್ಪರ್ಧೆ ತನ್ನ ಪತಿಯ ತತ್ವ-ಸಿದ್ಧಾಂತಗಳಿಗಾಗಿ ಎಂದು ಹೇಳಿದ್ದಾರೆ. 

“ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ, ಅನುಚಿತ, ದಮನಕಾರಿ, ಕಿರುಕುಳ ಮತ್ತು ತಾರತಮ್ಯದಿಂದ ಕೂಡಿದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಅಮಿತಾಬ್ ಅವರು ಆದಿತ್ಯನಾಥ್ ಸ್ಪರ್ಧಿಸುವ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ನೂತನ್ ಠಾಕೂರ್ ಹೇಳಿದ್ದಾರೆ. 

“ಇದು ತತ್ವ-ಸಿದ್ಧಾಂತಗಳಿಗಾಗಿನ ಸ್ಪರ್ಧೆಯಾಗಿದ್ದು ಯೋಗಿ ಆದಿತ್ಯನಾಥ್ ಅವರ ತಪ್ಪು ನಿರ್ಣಯಗಳನ್ನು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ. 2028 ರಲ್ಲಿ ನಿವೃತ್ತರಾಗಬೇಕಿದ್ದ ಅಮಿತಾಬ್ ಠಾಕೂರ್ ಗೆ 2021 ರ  ಮಾರ್ಚ್ 23 ನಲ್ಲಿ ಕಡ್ಡಾಯ ನಿವೃತ್ತಿ ನೀಡಲಾಗಿತ್ತು.  (kpc)

ಮೋದಿ ಭಾರತದ ಕಿಂಗ್ ಅಲ್ಲ’: ಪ್ರಧಾನಿಯ ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ

ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ.

Subramanian swamy

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ.

ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ವಾದಿಸಿದ ಟ್ವಿಟರ್ 
ಬಳಕೆದಾರರೊಬ್ಬರಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನಾನು ಬೇರೆ ಕಾರಣಕ್ಕಾಗಿ “ಮೋದಿ ವಿರೋಧಿ” ಎಂದು ಹೇಳಿದ್ದಾರೆ.

“ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ ಮತ್ತು ಅದರ ಬಗ್ಗೆ ಯಾವುದೇ ಜವಾಬ್ದಾರಿಯುತರೊಂದಿಗೆ ಚರ್ಚಿಸಲು ನಾನು ಸಿದ್ಧ. ಪ್ರಜಾಪ್ರಭುತ್ವದ ಬಗ್ಗೆ ನೀವು ಕೇಳಿದ್ದೀರಾ? ಮೋದಿ ಭಾರತದ ರಾಜ ಅಲ್ಲ” ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ನಾನು ಸಮರ್ಥ ಮತ್ತು ಜವಾಬ್ದಾರಿಯುತವಾದ ಯಾರೊಂದಿಗೆ ಬೇಕಾದರೂ “ಚರ್ಚೆಗೆ” ಸಿದ್ಧ ಎಂದು ಸ್ವಾಮಿ ಹೇಳಿದ್ದಾರೆ.

ಭಾರತದ ವಿದೇಶಾಂಗ ನೀತಿಗಳ ಪರಿಣಾಮಕಾರಿತ್ವವನ್ನು ಸ್ವಾಮಿ ಪ್ರಶ್ನಿಸಿದ್ದು, ಇದು ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿರ್ಧಾರಗಳಿಂದಾಗಿ “ಅವ್ಯವಸ್ಥೆ” ಯಾಗಿದೆ ಎಂದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *