id-75-3- ಭೂಮಿಹಕ್ಕು ವಂಚಿತರಿಗೆಲ್ಲಿ 47 ರ ಸ್ವಾತಂತ್ರ್ಯ..? ಶಿರಸಿಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ವಿಶೇಶ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ ಹೋರಾಟ ನಡೆದುಕೊಂಡು ಬಂದಿದೆ.


ರಾಮಕೃಷ್ಣ ಹೆಗಡೆಯವರ ರಾಜಕೀಯದ ದಿನಗಳಲ್ಲಿ ಸಂಸದ ದಿ. ದಿನಕರ ದೇಸಾಯಿ ಈ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಯನ್ನು ಕೇಂದ್ರದ ವರೆಗೆ ಪರಿಚಯಿಸಿ, ಪರಿಹಾರ ಕೇಳಿದ್ದರು. ಅವರ ನಂತರ ಈ ಅರಣ್ಯ ಅತಿಕ್ರಮಣದಾರರ ಪರವಾಗಿ ನೂರಾರು ಜನರ ನೇತೃತ್ವದಲ್ಲಿ ಸಾವಿರಾರು ಬಾರಿ ಚಳವಳಿ, ಹೋರಾಟಗಳಾಗಿವೆ. ಕಳೆದ ಮೂವತ್ತು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಹೋರಾಟ ಮಾಡುತ್ತಿರುವ ಜಿಲ್ಲಾ ಅರಣ್ಯ ಹಕ್ಕು ಹೋರಾಟ ಸಮೀತಿ ಇಂದು ಶಿರಸಿಯಲ್ಲಿ ವಿಭಿನ್ನವಾಗಿ 75 ನೇ ಸ್ವಾತಂ ತ್ರ್ಯೋತ್ಸವ ಆಚರಿಸಿತು.


ಜಿಲ್ಲಾ ಅರಣ್ಯ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರನಾಯ್ಕ ನೇತೃತ್ವದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನಡೆಸಿ,ಮೆರವಣಿಗೆ ಮಾಡಲಾಯಿತು. ಈ ಸಮಾರಂಭ,  ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಅರಣ್ಯ ಅತಿಕ್ರಮಣದಾರರು ಅವರ ಮುಖಂಡರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ  ಎಂದು ಸಂವಿಧಾನಾತ್ಮಕವಾಗಿ ಪ್ರಶ್ನಿಸಿದರು.


ಶಿರಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ತಮಗೆ ಅರಣ್ಯ ಇಲಾಖೆ, ಸರ್ಕಾರಿ ವ್ಯವಸ್ಥೆಯಿಂದ ಆಗುತ್ತಿರುವ ತೊಂದರೆ ಅನಾವರಣ ಮಾಡಿದರು. ಸರ್ಕಾರ, ನ್ಯಾಯಾಲಯದ ಆದೇಶಗಳಿಂದ ತಮ್ಮನ್ನ ಒಕ್ಕಲೆಬ್ಬಸಿದರೆ ತಮ್ಮ ಮುಂದಿನ ಪೀಳಿಗೆಯ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಸ್ವಾತಂತ್ರ್ಯ ಹೋರಾಟದ ತವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಜನರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ ಎಂದು ಪ್ರಶ್ನಿಸಿದ್ದು, ಇದೇ ಸಂದರ್ಭದಲ್ಲಿ ಯೋಧರನ್ನು ಸನ್ಮಾನಿಸಿ ಗೌರವಿಸಿದ್ದು ಈ ದಿನದ 75 ನೇ ಸ್ವಾತಂತ್ರ್ಯೋತ್ಸವದ ವಿಶೇಶವಾಗಿತ್ತು.

ಪ್ರಧಾನಿ ಹೇಳುವುದೊಂದು, ಮಾಡುವುದೊಂದು; 7 ವರ್ಷದಿಂದ ಹೇಳಿದ್ದನ್ನೇ ಹೇಳುತ್ತಿದ್ದಾರೆ: ಕಾಂಗ್ರೆಸ್ ಆಕ್ರೋಶ

ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

Mallikarjun Kharge

ನವದೆಹಲಿ: ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

ಸ್ವಾಂತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ  ಹಿರಿಯ ಕಾಂಗ್ರೆಸ್ ಮುಖಂಡ, ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಹೇಳುವುದು ಒಂದು ಮಾಡುವುದು ಮತ್ತೊಂದು ಎಂಬ ಹಾದಿಯಲ್ಲಿ ಸಾಗಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ರೈತರ ಭವಿಷ್ಯಕ್ಕೆ ಹಾನಿಯಾಗುವ  ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್  ಪಡೆಯಬೇಕೆಂದು ಒತ್ತಾಯ ಮಾಡಿ ದೇಶದ ರೈತರು ಒಂದು ವರ್ಷಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದರೂ  ಸರ್ಕಾರ ಸ್ಪಂದಿಸುತ್ತಿಲ್ಲ, ರೈತ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬರಿ ಘೋಷಣೆಯಿಂದ ಜನರನ್ನು ಮರಳು  ಮಾಡುವುದೇ ಸರ್ಕಾರದ ಪ್ರಮುಖ ನೀತಿ, ಗುರಿಯಾಗಿದೆ  ಎಂದು  ಟೀಕಿಸಿದರು.

ಕಳೆದ 7 ವರ್ಷಗಳಿಂದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹಿಂದೆ ಹೇಳಿದ ವಿಷಯಗಳನ್ನು ಮತ್ತೆ, ಮತ್ತೆ ಪ್ರಸ್ತಾಪ ಮಾಡುತ್ತಿದ್ದಾರೆ. ದುರ್ಬಲ ವರ್ಗಗಳಿಗೆ ಮತ್ತು ಸಣ್ಣ ರೈತ ಕುಟುಂಬಗಳಿಗೆ ಅನುಕೂಲವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *