ದೇಶದ ಸಮಗ್ರತೆ, ಶಾಂತಿ ಮತ್ತು ಭದ್ರತೆ ದೃಷ್ಠಿಯಲ್ಲಿ ರೈತ ಮತ್ತು ಸೈನಿಕರ ಕಾರ್ಯ ಸಮಾನ.

ಸಿದ್ಧಾಪುರ: ರೈತ ಮತ್ತು ಸೈನಿಕರು ದೇಶದ ಸಮಗ್ರತೆ, ಶಾಂತಿ ಮತ್ತು ಭದ್ರತೆ ದೃಷ್ಠಿಯಲ್ಲಿ ಸಮಾನ ಕಾರ್ಯಜರುಗಿಸುತ್ತಿದ್ದು ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸೈನಿಕರ ತ್ಯಾಗ, ಬಲಿದಾನ ದೇಶದ ಆಡಳಿತ ದೃಷ್ಟಿಯಲ್ಲಿ ವಿಶೇಷವಾಗಿದೆ. ಯುವ ಜನಾಂಗವು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಹೆಚ್ಚು ಆಸಕ್ತಿ ವಹಿಸಬೇಕೆಂದು ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಸಿದ್ಧಾಪುರ ತಾಲೂಕಿನ ಹೆಗ್ಗರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಸೇನೆ ತರಬೇತಿಗೆ ಆಯ್ಕೆಯಾಗಿರುವ ಸವಿನ್ ಹರಿಹರ ನಾಯ್ಕ, ಓಂಕಾರ ಅವರನ್ನು ಗ್ರಾಮಸ್ಥರು ಅಭಿನಂದಿಸಿದ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ದೇಶ ಸೇವೆ ಶ್ರೇ ಷ್ಟವಾದ ಸೇವೆ. ಪ್ರತಿಭಾವಂತ ಯುವಕರಿಗೆ ಮಾಹಿತಿ ಮತ್ತು ಮಾರ್ಗದರ್ಶನ ಕೊರತೆಯಿಂದ ಸೈನಿಕ ಸೇವೆಗೆ ಸೇರ್ಪಡೆಯಲ್ಲಿ ಯುವಕರು ವಂಚಿತರಾಗುತ್ತಿದ್ದಾರೆ. ಯುವಕರಿಗೆ ಈ ದಿಶೆಯಲ್ಲಿ ಸೂಕ್ತ ಮಾರ್ಗದರ್ಶನ ಅವಶ್ಯ ಎಂದು ರವೀಂದ್ರ ನಾಯ್ಕ ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಮ್ ಎಲ್ ಭಟ್ಟ ಮಾತನಾಡುತ್ತಾ ದೇಶದ ರಕ್ಷಣೆಯು ಪ್ರಪಂಚದಲ್ಲಿ ಉತ್ಕ್ರಷ್ಟ ಸ್ಥಾನದಲ್ಲಿದೇ. ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಯಲ್ಲಿ ಸೈನಿಕರ ಕೊಡುಗೆ ಅಪಾರವಾಗಿದೆ. ದೇಶ ಸೇವೆಗೆ ಮಕ್ಕಳನ್ನು ಕಳುಹಿಸಲು ಮನೋಪ್ರವೃತ್ತಿಯನ್ನು ಇಂದಿನ ಪಾಲಕರು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಮಕ್ಕಳಲ್ಲಿಯೇ ಸೈನಿಕ ಸೇವೆ ಕಲ್ಪನೆಯನ್ನು ಬೆಳೆಸಲು ಅವಕಾಶ ಒದಗಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಯುವಕರು ರಾಷ್ಟ್ರ ಮತ್ತು ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಸ್ಥಳೀಯ ಪ್ರೌಢಶಾಲಾ ಮುಖ್ಯ ಅಧ್ಯಾಪಕರಾದ ಗುಣಶೇಷಣ ಅವರು ಹೇಳಿದರು.

ಸೈನಿಕ ನವಿನ್ ನಾಯ್ಕ ಮಾತನಾಡುತ್ತಾ ಯುವಕರು ಸ್ವಪ್ರೇರಣೆಯಿಂಂದ ದೇಶ ಸೇವೆಗೆ ತೊಡಗಿಕೊಳ್ಳುವ ಮನೋಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ದೇಶಸೇವೆಗೆ ಸೇರುವುದು ಪುಣ್ಯದ ಕೆಲಸ. ನನಗೆ ಈ ಅವಕಾಶ ಒದಗಿಸಿದ ಪಾಲಕರಿಗೆ ಧನ್ಯವಾದಗಳು ಎಂದು ತರಬೇತಿ ಸೈನಿಕ ನವಿನ್ ನಾಯ್ಕ, ಓಂಕಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

ಸಭೆಯನ್ನು ಉದ್ಧೇಶಿಸಿ ಸ್ಥಳೀಯ ಧುರೀಣ ಈಶ್ವರ ಗೌಡ ಹುಕ್ಕಳಿ, ಸೇವಾ ಸಹಕಾರಿ ಸಂಘದ ವ್ಯವಸ್ಥಾಪಕ ಮ್ಯಾನೇಜರ್ ಚಂದ್ರಶೇಖರ್ ನಾಯ್ಕ, ಸೈನಿಕ ನವೀನ್ ತಂದೆ ಹರಿಹರ ನಾಯ್ಕ ಮಾತನಾಡಿದರು.

ಸಭೆಯಲ್ಲಿ ನಾಗಪತಿ ಗೌಡ ಸ್ವಾಗತಿಸಿ, ವಂದಿಸಿದರು. ವೇದಿಕೆಯ ಮೇಲೆ ಸೈನಿಕ ನವೀನ್ ಅವರ ತಾಯಿ ವಿನೋಧಿನಿ ನಾಯ್ಕ, ದ್ಯಾವಾ ಗೌಡ, ಬೀರಾ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಗೌಡ ಹುಕ್ಕಳಿ, ಮಂಜುನಾಥ ನಾಯ್ಕ ಮುಂತಾದವರ ನೇತ್ರತ್ವದಲ್ಲಿ ಸಂಘಟಿಸಲಾಗಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *