ಹಿಂದುತ್ವ ಹೇಳುವ ಅನಂತ ಕುಮಾರ ಎಲ್ಲಿದ್ದಾರೆ? ಬಿ.ಜೆ.ಪಿ. ಜನಪ್ರತಿನಿಧಿಗಳಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಾ…?

ಉತ್ತರ ಕನ್ನಡ ಜಿಲ್ಲೆಗೆ ಸಂಸದರು,ಸಚಿವರು, ಶಿರಸಿ ಕ್ಷೇತ್ರಕ್ಕೆ ಶಾಸಕರು ಇದ್ದಾರೆಯೆ? ಹೀಗೆಂದು ಪ್ರಶ್ನಿಸಿದವರು ಕೆ.ಪಿ.ಸಿ.ಸಿ. ವಕ್ತಾರ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.

ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಫಂದಿಸದ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮಯಕ್ಕೆ ಬಂದು ಹಿಂದುತ್ವ ಎನ್ನುತ್ತಾರೆ. ಯಾವ ಹಿಂದುಗಳಿಗೆ ಇವರಿಂದ ಅನುಕೂಲ ಆಗಿದೆ? ಪರೇಶ್ ಮೇಸ್ತ ಪ್ರಕರಣದಿಂದ ಕರಾವಳಿ, ಮಲೆನಾಡಿನಲ್ಲಿ ಯೋಗ್ಯತೆ ಇಲ್ಲದವರೆಲ್ಲಾ ಶಾಸಕರು, ಸಂಸದರು ಆದರಲ್ಲ ಅವರಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಿದೆಯೆ?

ಶಾಸಕರು, ವಿಧಾನಸಭಾ ಅಧ್ಯಕ್ಷರ ಬಗ್ಗೆ ನಾವು ಮಾತನಾಡಬಾರದು, ಅವರು ಪೀಠದ ಮೇಲೆ ಕುಳಿತಿರುವವರು ಇವರು ಇವರ ಪಕ್ಷದಿಂದ ಯಾರಿಗಾದರೂ ಅನುಕೂಲವಾಗಿದೆಯೆ? ಕ್ಷೇತ್ರ-ಜಿಲ್ಲೆಯಲ್ಲಿ ರಸ್ತೆ ಇಲ್ಲ, ಅಭಿವೃದ್ಧಿ ಕಾಮಗಾರಿ ಇಲ್ಲ, ಅತಿಕ್ರಮಣದಾರರು, ಪ್ರವಾಹ ಪೀಡಿತರನ್ನು ಕೇಳುವವರಿಲ್ಲ. ಯುವಕರಿಗೆ ಉದ್ಯೋಗ ಇಲ್ಲ, ಉದ್ಯಮ ಇಲ್ಲ ಈ ವ್ಯವಸ್ಥೆಯಲ್ಲಿ ಚುನಾವಣೆ ಬಂದಾಗಲೆಲ್ಲಾ ಇವರಿಗೆ ನೆನಪಾಗುವುದು ಹಿಂದುತ್ವ ಹಾಗಾಗಿ ಬಿ.ಕೆ. ಹರಿಪ್ರಸಾದ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಸಂಘಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಕೆಲಸಕ್ಕೆ ಬಾರದವರೆಲ್ಲಾ ಹಿಂದುತ್ವದ ಹೆಸರಲ್ಲಿ ಶಾಸಕರು, ಸಂಸದರಾಗುವುದನ್ನು ತಡೆಯುತ್ತೇವೆ ಎಂದು ವಿವರಿಸಿದ ಗೋಪಾಲಕೃಷ್ಣ ಬೇಳೂರು, ಹಿಂದುತ್ವವಾದಿಗಳು ಅನಂತಕುಮಾರ ಹೆಗಡೆ ಎಲ್ಲಿದ್ದಾರೆ? ಏನುಮಾಡುತಿದ್ದಾರೆ ಎಂದು ಹೇಳಬೇಕು.

ಯಡಿಯೂರಪ್ಪ ಕೆಲಸ ಮಾಡುವ ಮನುಷ್ಯ ಅವರನ್ನು ತೆಗೆದು ಬೊಮ್ಮಾಯಿಯಿಂದ ಅಭಿವೃದ್ಧಿ ಮಾಡಿಸುತ್ತಾರೆಯೆ? ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಬಿ.ಜೆ.ಪಿ. ಸರ್ವನಾಶವಾಗಲಿದೆ. ಕಾಂಗ್ರೆಸ್ ರಾಜ್ಯ ವಿಧಾನಸಭೆಯ 150 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ. ಹೈಕಮಾಂಡ್ ತೀರ್ಮಾನದಂತೆ ಮುಖ್ಯಮಂತ್ರಿಗಳ ಆಯ್ಕೆ ನಡೆಯಲಿದೆ. ಅಭಿವೃದ್ಧಿ ಮಾಡದ, ಜನರಿಗೆ ಸ್ಪಂದಿಸದ ಬಿ.ಜೆ.ಪಿ. ಸ್ವಯಂಕೃತ ಅಪರಾಧ ಕಾಂಗ್ರೆಸ್ ಗೆಲುವಿಗೆ ಪೂರಕ ಎಂದರು.

ಬಿಜೆಪಿ ಎಲ್ಲಿ ಅಧಿಕಾರದಲ್ಲಿದೆ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. ಬಿ.ಜೆ.ಪಿ. ಗೆದ್ದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಇಲ್ಲ, ಯಡಿಯೂರಪ್ಪ ಶಿಕಾರಿಪುರ ಅಭಿವೃದ್ಧಿ ಮಾಡಿದ್ದಾರೆ. ಸಾಗರದಲ್ಲಿ ಯಡಿಯೂರಪ್ಪನವರಿಂದ ಕೆಲವು ಕೆಲಸಗಳಾಗಿವೆ. ಮತ್ತೆಲ್ಲಿ ಅಭಿವೃದ್ಧಿ ಆಗಿದೆ? ಬಿ.ಜೆ.ಪಿ. ಆಡಳಿತದಲ್ಲಿ ಉತ್ತರ ಕನ್ನಡಕ್ಕೆ ಅನ್ಯಾಯವಾದಂತೆ ರಾಜ್ಯದ ಬಹುತೇಕ ಜಿಲ್ಲೆ, ಕ್ಷೇತ್ರಗಳಲ್ಲಾಗಿದೆ. ಇದೇ ಅವರ ಸೋಲಿಗೆ ಕಾರಣವಾಗಲಿದೆ ಎಂದರು.

ಹೀಗೆಲ್ಲಾ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಜೋಗ ಅಭಿವೃದ್ಧಿ ಸೇರಿದಂತೆ ರಾಜ್ಯದಲ್ಲಿ ಅನೇಕ ಕಾಮಗಾರಿಗಳನ್ನು ಆನ್ ಲೈನ್ ನಲ್ಲಿ ಶಂಕುಸ್ಥಾಪನೆ ಮಾಡಲಾಗಿದೆ. ಇವುಗಳ ಹಣೆಬರಹ ಕೂಡಾ ಕೆಲವೇ ತಿಂಗಳಲ್ಲಿ ತಿಳಿಯಲಿದೆ ಎಂದರು. ಸಿದ್ದಾಪುರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಜನಪರವಾಗಿ ಕೆಲಸಮಾಡುತ್ತಿರಬೇಕು, ಪ್ರತಿಭಟನೆ, ಜನಹೋರಾಟದ ಮೂಲಕ ಅವರನ್ನು ಹಿಮ್ಮೆಟ್ಟಿಸಬೇಕು. ಬಿ.ಜೆ.ಪಿ. ಉಪಯೋಗಕ್ಕೆ ಬಾರದ ಪಕ್ಷ, ದೇಶಕ್ಕೆ ಇದರಿಂದ ಯಾವ ಪ್ರಯೋಜನ ಇಲ್ಲ ಎನ್ನುವುದನ್ನು ಜನರಿಕೆ ಮನವರಿಕೆ ಮಾಡಿದರೆ ದೇಶಕ್ಕೆ ಒಳ್ಳೆಯದಾಗಲಿದೆ ಎಂದರು. ತಾಲಿಬಾನ್ ಆಡಳಿತ ವ್ಯವಸ್ಥೆ ವಿರೋಧಿಸುವವರು ಬಿ.ಜೆ.ಪಿ ವಿರೋಧಿಸಬೇಕೆಂದು ಕರೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *