ಕೋವಿಡ್ ನೆಪದ ಅಂಧಾದರ್ಬಾರ್ ಗೆ ಸಮಾಜವಾದಿ ಪಕ್ಷದ ವಿರೋಧ

ಕರೋನಾ ಹೆಸರಲ್ಲಿ ಅಂಧಾದರ್ಬಾರ್ ನಡೆಯುತ್ತಿದೆ ಎಂದು ಆರೋಪಿಸಿರುವ  ಸಮಾಜವಾದಿ ಪಕ್ಷದ ರಾಜ್ಯ ಘಟಕ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ  ಮುಂಜಾಗ್ರತೆ ವಹಿಸಿ ಸಾರ್ವಜನಿಕ ಸಾರಿಗೆ, ಸಂತೆಗಳಲ್ಲಿ ಶಿಸ್ತುಪಾಲಿಸದಿದ್ದರೂ ಕರೋನಾ ಬಾಧಿಸುವುದಿಲ್ಲವೆ ಎಂದು ಪ್ರಶ್ನಿಸಿದೆ.
ಈ ಬಗ್ಗೆ samajamukhi.net ನೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ರಾಜ್ಯಘಟಕದ ಕಾರ್ಮಿಕ ವಿಭಾಗದ ಅಧ್ಯಕ್ಷ ನಾಗರಾಜ್ ನಾಯ್ಕ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಕಿಟ್ ವಿತರಣೆಯಲ್ಲಿ ಪಕ್ಷಪಾತ ಎಸಗಲಾಗಿದೆ. ಕರೋನಾ ಆಪತ್ತು ಬಿ.ಜೆ.ಪಿ. ಪಕ್ಷದವರಿಗೆ ಮಾತ್ರ ಬಾಧಿಸಿದಿಯೆ? ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾರ್ಮಿಕ ಇಲಾಖೆಯ ಕಿಟ್ ಗಳನ್ನು ಆಡಳಿತ ಪಕ್ಷದ ಕಾರ್ಯಕರ್ತರಿಗೆ ನೀಡಿ ಅವ್ಯವಹಾರ ನಡೆಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಕಠಿಣ ನಿಯಮ ಹೇರಿ ಸಾರ್ವಜನಿಕ ಸಾರಿಗೆ, ಸಂತೆಗಳಲ್ಲಿ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳ ರಕ್ಷಣೆ ಸಾಧ್ಯವೆ? ಸರ್ಕಾರ ಕರೋನಾ ಹೆಸರಲ್ಲಿ ಅಕ್ರಮವನ್ನು ಸಕ್ರಮ ಮಾಡುತ್ತಿದೆ. ಕಾರ್ಮಿಕ ಇಲಾಖೆಯ ಕಿಟ್ ಅವ್ಯವಹಾರ, ವಿದ್ಯಾರ್ಥಿಗಳ ಆರೋಗ್ಯ ನಿಷ್ಕಾಳಜಿ ಇವು ಈ ಸರ್ಕಾರದ ವಿಫಲತೆ, ಕೋವಿಡ್ ಹೆಸರಿನಲ್ಲಿ ಮಾಡುತ್ತಿರುವ  ಅಂಧಾದರ್ಬಾರ್ ಗೆ ದೃಷ್ಟಾಂತ  ಎಂದರು.

ಶಿರಸಿಯಲ್ಲಿ ಆ.30 ರಂದು ಸಮಾಜವಾದಿ ಪಕ್ಷದ ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಮಧುವನ ಆರಾಧನಾ ಸಭಾಭವನದಲ್ಲಿ ನಡೆಯುವ ಈ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ, ಈ ಸಮಾರಂಭದಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಪ್ರಮುಖರು ಭಾಗವಹಿಸಲಿದ್ದು ಬರಲಿರುವ ಜಿ.ಪಂ. ತಾ.ಪಂ. ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ವಿವರಿಸಿದರು..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *