ಕಣಸೆ ಅಪ್ಪೆ ಕಸಿ ಪ್ರಯೋಗ- ಪರಿಸರ, ಅರಣ್ಯ ಸಂರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ


ಸಿದ್ದಾಪುರ
ಭಾರತೀ ಸಂಪದ, ಸಂಸ್ಕೃತಿ ಸಂಪದ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಸಹಯೋಗದಲ್ಲಿ ಕಸಿ ಮಾಡಿ ಬೆಳೆಸಿದ ಅಪರೂಪದ ಕಣಸಿ ಕರಿ ಅಪ್ಪೆ ಸಸಿಗಳ ಹಸ್ತಾಂತರ ಹಾಗೂ ನರ್ಸರಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಹೊಸೂರಿನ ಅರಣ್ಯ ಇಲಾಖೆ ನರ್ಸರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪರಿಸರ ತಜ್ಞ ಎಂ.ಬಿ.ನಾಯ್ಕ ಕಡಕೇರಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪರಿಸರ ಹಾಗೂ ಸಸ್ಯ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಗಣಪತಿ ಹೆಗಡೆ ವಡ್ಡಿನಗದ್ದೆಯವರ ಕಾರ್ಯ ಮಾದರಿಯಾದದ್ದು. ಮರೆಯಾಗುತ್ತಿರುವ ಅಪರೂಪದ ಸಸ್ಯಗಳ ಬೀಜ ಸಂಗ್ರಹಣೆ, ಅವುಗಳ ಪೋಷಣೆ, ಅವನ್ನು ನೆಟ್ಟು ಬೆಳೆಸುವ ಕಾರ್ಯದ ಮೂಲಕ ಹಲವು ಸಸ್ಯಗಳನ್ನು ಸಂರಕ್ಷಿಸಿದ್ದಾರೆ. ಯಾವ ಪ್ರತಿಫಲಾಪೇಕ್ಷೆ ಇಲ್ಲದೇ ಇಂಥ ಉತ್ತಮ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.

ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿ- ಸಿದ್ದರಾಮಯ್ಯ

ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah1

ಬೆಂಗಳೂರು: ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶಿಕ್ಷಿತರು ಹೆಚ್ಚಾದಷ್ಟು ಪ್ರಜಾಪ್ರಭುತ್ವ ಗಟ್ಟಿಯಾಗಬೇಕಿತ್ತು. ಆದರೆ, ಶಿಕ್ಷಿತ ಯುವಜನರೇ ಇಂದು ಜಾತಿವಾದ, ಮತ್ತು ಕೋಮುವಾದದ ಪೋಷಕರಾಗಿದ್ದು, ವಿದ್ಯಾರ್ಥಿ ಯುವ ಜನರನ್ನು ಜಾಗೃತಗೊಳಿಸುವ ಹೊಣೆಗಾರಿಕೆ ವಿದ್ಯಾರ್ಥಿ ಕಾಂಗ್ರೆಸ್ ಮೇಲಿದೆ ಎಂದಿದ್ದಾರೆ.

ಶಿಕ್ಷಿತರು ಹೆಚ್ಚಾದಷ್ಟೂ ಪ್ರಜಾಪ್ರಭುತ್ವ ಗಟ್ಟಿಯಾಗಬೇಕಿತ್ತು.
ಆದರೆ ಶಿಕ್ಷಿತ ಯುವಜನರೇ ಇಂದು ಜಾತಿವಾದ ಮತ್ತು ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ.

ಅಂಬೇಡ್ಕರ್  ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭ್ರಾತೃತ್ವ ಮತ್ತು ಜಾತ್ಯತೀತೆಯ ಶುತ್ರಗಳಾದ ಬಿಜೆಪಿ ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.


ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಮಂಜುನಾಥ ಚಿನ್ನಣ್ಣನವರ್ ಮಾತನಾಡಿ ಇದೊಂದು ಉತ್ತಮ ಕಾರ್ಯ. ಪರಿಸರ ಪ್ರೇಮಿಯಾದ ಗಣಪತಿ ಹೆಗಡೆ ಅರಣ್ಯ ಇಲಾಖೆಯ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಪರಿಸರದ ಕುರಿತು ಉತ್ತಮ ಕಾರ್ಯ ಮಾಡುತ್ತಿರುವದು ಮತ್ತು ಅರಣ್ಯ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವವರನ್ನು ಅಭಿನಂದಿಸುತ್ತಿರುವುದು ಶಾಘ್ಲನೀಯ ಎಂದರು.
ಪ್ರಯೋಗ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷ ಗಂಗಾಧರ ಕೊಳಗಿ ಪರಿಸರ ರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಪ್ರತಿಯೊಬ್ಬನ ಜವಾಬ್ದಾರಿ. ಅರಣ್ಯ ಇಲಾಖೆಯ ಜೊತೆ ಪರಿಸರ ಮತ್ತು ಅರಣ್ಯ ರಕ್ಷಣೆಯ ಕಾರ್ಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದಾಗ ಉತ್ತಮ ಪರಿಸರ ರೂಪುಗೊಳ್ಳುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿಗಳಿಗೂ ಪರಿಸರದ ಕುರಿತಾಗಿ ಕಾಳಜಿ ಇರುತ್ತದೆ. ಅವರನ್ನು ಋಣಾತ್ಮಕವಾಗಿ ಕಾಣುವದು ಸರಿಯಲ್ಲ.ಕಳೆದ ಎರಡು ದಶಕಗಳಿಂದ ಸ್ವಯಂಸ್ಪೂರ್ತಿಯಿಂದ ನಶಿಸುತ್ತಿರುವ ಅಪರೂಪದ ಸಸ್ಯಗಳ ಬೀಜ ಸಂಗ್ರಹ, ಅವುಗಳನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡ ಗಣಪತಿ ಹೆಗಡೆ ಸ್ವಂತ ವೆಚ್ಚದಲ್ಲಿ ಇವನ್ನೆಲ್ಲ ನಿರ್ವಹಿಸುತ್ತ ಬಂದಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ದೊರಕಲಿ ಎಂದರು.
ಪ್ರಾಸ್ತಾವಿಕ ಮಾತನಾಡಿದ ಗಣಪತಿ ಹೆಗಡೆ ವಡ್ಡಿನಗದ್ದೆ ಭಾರತೀ ಸಂಪದದ ದಶಮಾನೋತ್ಸವ ಸಂದರ್ಭದಲ್ಲಿ ಸುಮಾರು ಮುನ್ನೂರು ವರ್ಷಗಳ ಹಳೆಯದಾದ ಕಣಸಿಯ ಕರಿ ಅಪ್ಪೆ ಮರದ ಗೆಲ್ಲುಗಳಿಗೆ ಕಸಿ ಮಾಡಿ, ಆ ಗಿಡಗಳನ್ನು ನರ್ಸರಿಯಲ್ಲಿ ಬೆಳೆಸಿ, ಅರಣ್ಯ ಇಲಾಖೆಗೆ ಹಸ್ತಾಂತರ ಮಾಡುತ್ತಿದ್ದೇನೆ. ಈ ಹಿಂದೆ ಅರಣ್ಯ ಇಲಾಖೆ ಹಾಗೂ ಇನ್ನಿತರರ ಸಹಕಾರ ದೊರಕಿದೆ. ಇಲಾಖೆಯ ನರ್ಸರಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಸಿಬ್ಬಂದಿಯನ್ನು ಪ್ರತಿವರ್ಷ ಸನ್ಮಾನಿಸುತ್ತ ಬಂದಿದ್ದೇವೆ. ಈ ಬಾರಿ ಓರ್ವ ಅನುಭವಿ ಸಿಬ್ಬಂದಿ ಪಾಂಡು ಮೇಸ್ತ ರನ್ನು ಗೌರವಿಸುತ್ತಿದ್ದೇವೆ ಎಂದರು.
ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ಹೊಸುರು ನರ್ಸರಿಯ ಸಿಬ್ಬಂದಿ ಪಾಂಡು ಮೇಸ್ತ ರನ್ನು ಸನ್ಮಾನಿಸಿದರು. ಆರ್.ಎಫ್ .ಓ. ಶಿವಾನಂದ ನಿಂಗಾಣಿ, ಉದ್ಯಮಿ ಆರ್.ಎಸ್.ಭಟ್ಟ ಕಲ್ಲಾಳ, ಡಿ.ಆರ್.ಎಫ್ .ಓ.ಗಳಾದ ಮಂಜುನಾಥ ಚಿನ್ನಣ್ಣನವರ್, ವಿನಾಯಕ ಮಡಿವಾಳ, ಮಂಜುನಾಥ ಹುಲ್ಲೂರು, ಅಶೋಕ ಪೂಜಾರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಇಲಾಖೆಯ ತಾಲೂಕಿನ ವಿಭಾಗಗಳಿಗೆ ಸಾಂಕೇತಿಕವಾಗಿ ಕಣಸಿ ಕಸಿ ಅಪ್ಪೆ ಸಸಿಗಳನ್ನು ವಿತರಿಸಲಾಯಿತು. ಹೊಸೂರು ನರ್ಸರಿಯಲ್ಲಿ ಕೆಲವು ಸಸಿಗಳನ್ನು ನೆಡಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *