Yakshagana-ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ

ಕನ್ನಡದ ಪ್ರಸಿದ್ದ ಕಾವ್ಯಕ್ಕೆ ಯಕ್ಷಗಾನ ಸ್ಪರ್ಷ
ಸಿದ್ದಾಪುರ: ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನದ ಸಾಹಿತ್ಯ ಕೂಡ‌ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕು ಎಂಬ ಕಾರಣಕ್ಕೆ ಪ್ರಥಮ ಹಂತದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಯಕ್ಷ ‘ಗಾನ’ದ ಸ್ಪರ್ಷ ನೀಡುವ ಕಾರ್ಯವನ್ನು ಸಿದ್ದಾಪುರದ ಶ್ರೀ ಅನಂತ‌ ಯಕ್ಷ ಕಲಾ ಪ್ರತಿಷ್ಠಾನ ನಡೆಸಿತು.
ಬೆಂಗಳೂರಿನ‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಪ್ರಸಿದ್ದ ಕಲಾವಿದರ ಮೂಲಕ ಯಕ್ಷಗಾನದ ಹೊದಿಕೆ ನೀಡುವ ಪ್ರಯೋಗ ನಡೆಸಲಾಯಿತು. ಈ ಪ್ರಯೋಗ ನಡೆಸಲು ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಆಶಯ ವ್ಯಕ್ತಪಡಿಸಿದ್ದರೆ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೋ. ಎಂ.ಎ.ಹೆಗಡೆ ಅವರು ಪದ್ಯಗಳನ್ನು ಆಯ್ಕೆ ಮಾಡಿಕೊಟ್ಟಿದ್ದರು.
ಕೆ.ಎಸ್.ನರಸಿಂಹ ಸ್ವಾಮಿ, ಪಂಜೆ‌ ಮಂಗೇಶರಾಯರು, ಗೋಪಾಲಕೃಷ್ಣ ಅಡಿಗರು, ಸಿದ್ದಲಿಂಗಯ್ಯ ಅವರ ಕಾವ್ಯಗಳ ತನಕ ಹಾಡಲಾಯಿತು. ಪಡುವಣ‌ ಕಡಲಿಗೆ ಕು.ತುಳಸಿ ಹೆಗಡೆ, ಎಲ್ಲಿ ಭೂ ರಮೆ ದೇವ ಸನ್ನಿಧಿ ಹಾಡಿಗೆ ಹಿರಿಯ ಕಲಾವಿದ ವಿನಾಯಕ ಹೆಗಡೆ ಕಲಗದ್ದೆ ನರ್ತನ‌ ಕೂಡ ಮಾಡಿದರು.
ಪ್ರಸಿದ್ದ ಭಾಗವತ ಕೇಶವ ಹೆಗಡೆ ಕೊಳಗಿ ಅವರ ಗಾನದಲ್ಲಿ ಯಕ್ಷಗಾನದ ಮಟ್ಟು ತಿಟ್ಟಿನಲ್ಲೇ ಕನ್ನಡದ ಪ್ರಸಿದ್ದರ ಕಾವ್ಯಗಳು ಬಿಚ್ಚಿಕೊಂಡರೆ ಮದ್ದಲೆಯಲ್ಲಿ ಶಂಕರ ಭಾಗವತ್, ಚಂಡೆಯಲ್ಲಿ ವಿಘ್ನೇಶ್ವರ ಗೌಡ, ಪ್ರಸಾದನದಲ್ಲಿ ವೆಂಕಟೇಶ ಬೊಗ್ರಿಮಕ್ಕಿ ಸಹಕಾರ ನೀಡಿದರು. ಇದಕ್ಕೂ‌ ಮುನ್ನ ಭರತ‌ ಮತ್ತು ರಾಮನ ಕುರಿತಾದ ತಾಳ ‌ಮದ್ದಲೆಯ ವೈಭವ ನಡೆಯಿತು.
ಇದಕ್ಕೂ‌ ಮುನ್ನ ಚಾಲನೆ ನೀಡಿದ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನ ಸಾಹಿತ್ಯ ಗುರುತಾಗಬೇಕು. ಈ‌ಕಾರಣದಿಂದ ಇದೊಂದು ಅಪರೂಪದ ಪ್ರಯೋಗ ಎಂದರು.
ವೇದಿಕೆಯಲ್ಲಿ ವಿನಾಯಕಬಹೆಗಡೆ ಕಲಗದ್ದೆ, ವಿನಯ ಹೆಗಡೆ ಹೊಸ್ತೋಟ, ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ, ವಿಘ್ಬೇಶ್ವರ ಗೌಡ ವೆಂಕಟೇಶ ಹೆಗಡೆ ಬಗ್ರಿಮಕ್ಕಿ ಇತರರು ಇದ್ದರು.

ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ 

ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ

ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.

ಒಂದು ವರ್ಷದ ಹಿಂದೆ ಅಪಘಾತಕ್ಕೀಡಾದ ನಂತರ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಇದ್ದರು. ಇಡಗುಂಜಿ ಮೇಳದಲ್ಲಿ ಭಾಗವತಿ ಮಾಡುತ್ತಿದ್ದ ಕೃಷ್ಣ ಭಂಡಾರಿಯವರು ಚಿಕಿತ್ಸೆ ಫಲಕಾರಿಯಾಗದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗುಣವಂತೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *