Yakshagana-ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ

ಕನ್ನಡದ ಪ್ರಸಿದ್ದ ಕಾವ್ಯಕ್ಕೆ ಯಕ್ಷಗಾನ ಸ್ಪರ್ಷ
ಸಿದ್ದಾಪುರ: ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನದ ಸಾಹಿತ್ಯ ಕೂಡ‌ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕು ಎಂಬ ಕಾರಣಕ್ಕೆ ಪ್ರಥಮ ಹಂತದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಯಕ್ಷ ‘ಗಾನ’ದ ಸ್ಪರ್ಷ ನೀಡುವ ಕಾರ್ಯವನ್ನು ಸಿದ್ದಾಪುರದ ಶ್ರೀ ಅನಂತ‌ ಯಕ್ಷ ಕಲಾ ಪ್ರತಿಷ್ಠಾನ ನಡೆಸಿತು.
ಬೆಂಗಳೂರಿನ‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಪ್ರಸಿದ್ದ ಕಲಾವಿದರ ಮೂಲಕ ಯಕ್ಷಗಾನದ ಹೊದಿಕೆ ನೀಡುವ ಪ್ರಯೋಗ ನಡೆಸಲಾಯಿತು. ಈ ಪ್ರಯೋಗ ನಡೆಸಲು ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಆಶಯ ವ್ಯಕ್ತಪಡಿಸಿದ್ದರೆ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೋ. ಎಂ.ಎ.ಹೆಗಡೆ ಅವರು ಪದ್ಯಗಳನ್ನು ಆಯ್ಕೆ ಮಾಡಿಕೊಟ್ಟಿದ್ದರು.
ಕೆ.ಎಸ್.ನರಸಿಂಹ ಸ್ವಾಮಿ, ಪಂಜೆ‌ ಮಂಗೇಶರಾಯರು, ಗೋಪಾಲಕೃಷ್ಣ ಅಡಿಗರು, ಸಿದ್ದಲಿಂಗಯ್ಯ ಅವರ ಕಾವ್ಯಗಳ ತನಕ ಹಾಡಲಾಯಿತು. ಪಡುವಣ‌ ಕಡಲಿಗೆ ಕು.ತುಳಸಿ ಹೆಗಡೆ, ಎಲ್ಲಿ ಭೂ ರಮೆ ದೇವ ಸನ್ನಿಧಿ ಹಾಡಿಗೆ ಹಿರಿಯ ಕಲಾವಿದ ವಿನಾಯಕ ಹೆಗಡೆ ಕಲಗದ್ದೆ ನರ್ತನ‌ ಕೂಡ ಮಾಡಿದರು.
ಪ್ರಸಿದ್ದ ಭಾಗವತ ಕೇಶವ ಹೆಗಡೆ ಕೊಳಗಿ ಅವರ ಗಾನದಲ್ಲಿ ಯಕ್ಷಗಾನದ ಮಟ್ಟು ತಿಟ್ಟಿನಲ್ಲೇ ಕನ್ನಡದ ಪ್ರಸಿದ್ದರ ಕಾವ್ಯಗಳು ಬಿಚ್ಚಿಕೊಂಡರೆ ಮದ್ದಲೆಯಲ್ಲಿ ಶಂಕರ ಭಾಗವತ್, ಚಂಡೆಯಲ್ಲಿ ವಿಘ್ನೇಶ್ವರ ಗೌಡ, ಪ್ರಸಾದನದಲ್ಲಿ ವೆಂಕಟೇಶ ಬೊಗ್ರಿಮಕ್ಕಿ ಸಹಕಾರ ನೀಡಿದರು. ಇದಕ್ಕೂ‌ ಮುನ್ನ ಭರತ‌ ಮತ್ತು ರಾಮನ ಕುರಿತಾದ ತಾಳ ‌ಮದ್ದಲೆಯ ವೈಭವ ನಡೆಯಿತು.
ಇದಕ್ಕೂ‌ ಮುನ್ನ ಚಾಲನೆ ನೀಡಿದ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನ ಸಾಹಿತ್ಯ ಗುರುತಾಗಬೇಕು. ಈ‌ಕಾರಣದಿಂದ ಇದೊಂದು ಅಪರೂಪದ ಪ್ರಯೋಗ ಎಂದರು.
ವೇದಿಕೆಯಲ್ಲಿ ವಿನಾಯಕಬಹೆಗಡೆ ಕಲಗದ್ದೆ, ವಿನಯ ಹೆಗಡೆ ಹೊಸ್ತೋಟ, ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ, ವಿಘ್ಬೇಶ್ವರ ಗೌಡ ವೆಂಕಟೇಶ ಹೆಗಡೆ ಬಗ್ರಿಮಕ್ಕಿ ಇತರರು ಇದ್ದರು.

ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ 

ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ

ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.

ಒಂದು ವರ್ಷದ ಹಿಂದೆ ಅಪಘಾತಕ್ಕೀಡಾದ ನಂತರ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಇದ್ದರು. ಇಡಗುಂಜಿ ಮೇಳದಲ್ಲಿ ಭಾಗವತಿ ಮಾಡುತ್ತಿದ್ದ ಕೃಷ್ಣ ಭಂಡಾರಿಯವರು ಚಿಕಿತ್ಸೆ ಫಲಕಾರಿಯಾಗದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗುಣವಂತೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *