ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ ಮತ್ತು ರೈತರ ಹಿತರಕ್ಷಣೆ ಹಿನ್ನೆಲೆಯಲ್ಲಿ ಅನೇಕ ಪ್ರತಿಭಟನೆ, ಜನಸಂಘಟನೆಗಳಾಗಿವೆ. ಈ ಕಾಡು ಪ್ರಾಣಿಗಳಲ್ಲಿ ರೈತರ ಬೆಳೆಗೆ ಕಂಟಕವಾಗಿರುವುದು ಕಾಡು ಹಂದಿ ಪಡೆ. ಒಂಟಿಗ ಕಾಡುಹಂದಿ ಹಾಗೂ ಕಾಡುಹಂದಿ ಗುಂಪುಗಳು ಅಡಿಕೆ, ತೆಂಗು, ಬಾಳೆ ಸೇರಿದಂತೆ ಎಲ್ಲಾ ಕೃಷಿ ಉತ್ಫನ್ನಗಳನ್ನು ತಿಂದು,ಹಾಳುಮಾಡಿ ಹಾನಿಮಾಡುತ್ತವೆ. ಈ ಕಾಡುಹಂದಿ ಹಾವಳಿ ತಡೆಯಲು ಅವುಗಳನ್ನು ಭೇಟೆಯಾಡುವುದೊಂದೇ ಪರಿಹಾರ ಸೂತ್ರ ಎನ್ನುವ ಅಭಿಪ್ರಾಯ ಸಾರ್ವತ್ರಿಕವಾಗಿದೆ. ನೆರೆಯ ಗೋವಾ-ಕೇರಳ ರಾಜ್ಯಗಳಲ್ಲಿ ಕಾಡುಹಂದಿಗಳನ್ನು ಭೇಟೆಯಾಡಲು ಸರ್ಕಾರ ಅನುಮತಿ ನೀಡಿದೆ ಆದರೆ ಕರ್ನಾಟಕದಲ್ಲಿ ಕಾಡುಹಂದಿ ಭೇಟೆ ನಿಷೇಧಿಸಲ್ಪಟ್ಟಿದ್ದು ಕಾಡು ಹಂದಿ ಬೇಟೆ ಮಾಡಿ ಬೆಳೆ ರಕ್ಷಿಸಿಕೊಳ್ಳುವ ರೈತರಿಗೆ ತೊಂದರೆಯಾಗುವಂಥ ಕಾನೂನು ಕಟ್ಟಳೆ ಗಳು ಕರ್ನಾಟಕದಲ್ಲಿ ಜಾರಿಯಲ್ಲಿವೆ. ಈ ಕಾನೂನು ಕಟ್ಟುಪಾಡುಗಳನ್ನು ಸಡಿಲಿಸಿ ಕಾಡುಹಂದಿ ಭೇಟೆಗೆ ಅವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಈ ಬಗ್ಗೆ ತಮ್ಮ ಅನುಭವದ ಅನಿಸಿಕೆ ಹಂಚಿಕೊಂಡಿರುವ ಪ್ರಗತಿಪರ ಕೃಷಿಕ ಡಿ.ಕೆ.ನಾಯ್ಕ ತೆಂಗಿನಮನೆ ನೆರೆಯ ಗೋವಾ, ಕೇರಳಗಳಲ್ಲಿ ಕರ್ನಾಟಕದಷ್ಟು ದೊಡ್ಡ ಪ್ರಮಾಣದಲ್ಲಿ ಕೃಷಿ ಭೂಮಿಯಿಲ್ಲ ಆದರೆ ಅಲ್ಲಿಯ ಸರ್ಕಾರಗಳು, ಜನಪ್ರತಿನಿಧಿಗಳು ಆ ರಾಜ್ಯಗಳಲ್ಲಿ ಕಾಡುಹಂದಿ ಬೇಟೆಗೆ ಅವಕಾಶಕಲ್ಫಿಸುವಂತೆ ಸರ್ಕಾರಗಳಿಗೆ ಮನವರಿಕೆ ಮಾಡಿ ಕಾನೂನು ಸಡಿಲಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಡುಹಂದಿ ಮತ್ತು ಕಾಡುಪ್ರಾಣಿಳಿಂದ ಆಗುತ್ತಿರುವ ಅನಾಹುತ, ಬೆಳೆನಾಶಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ವಿಸ್ತ್ರತ ಚರ್ಚೆಯಾಗಿ ರೈತರಿಗೆ ಕಂಟಕವಾಗಿರುವ ಕಾಡುಹಂದಿ ಭೇಟೆಗೆ ಅವಕಾಶ ಕಲ್ಫಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ರೈತಸಂಘ ಮತ್ತು ಇತರ ಪಕ್ಷ, ಸಂಘಟನೆಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ವಿದ್ಯುತ್ ತಂತಿ ಸಮಸ್ಯೆ-

ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಗಮ ವಿದ್ಯುತ್ ಸಂಪರ್ಕ ವಿತರಣೆಗಾಗಿ ರಾಜ್ಯದಾದ್ಯಂತ ವಿದ್ಯುತ್ ತಂತಿ,ಲೈನ್ ಗಳನ್ನು ಅಳವಡಿಸಿದೆ. ಹೀಗೆ ಬಹುಹಿಂದೆ ಅಳವಡಿಸಿದ ವಿದ್ಯುತ್ ಸರಬರಾಜು ತಂತಿ ಮಾರ್ಗ ರೈತರ ಭೂಮಿ ಜಮೀನುಗಳ ಮೂಲಕ ಹಾಯ್ದು ಹೋಗಿದೆ. ಇಂಥ ವಿದ್ಯುತ್ ಮಾರ್ಗ, ತಂತಿಗಳಿಂದ ರೈತರ ಜನ-ಜಾನುವಾರುಗಳಿಗೆ ಕಂಟಕವಾಗುತ್ತಿದೆ. ಈ ತಂತಿ ವ್ಯವಸ್ಥೆಯನ್ನು ಸರ್ಕಾರ, ನಿಗಮ ಬದಲಿಸುವುದಿಲ್ಲ, ರೈತರು ಬದಲಿಸಲು ಕೋರಿದರೆ ರೈತರಿಗೆ ಖರ್ಚು ವಿಧಿಸಲಾಗುತ್ತದೆ. ರೈತರನ್ನು ಕೇಳದೆ ನಿಗಮ ವಿದ್ಯುತ್ ಸಂಪರ್ಕ ತಂತಿ ಅಳವಡಿಸಿದ ಲೈನ್ ಗಳಿಂದ ಅಪಾಯವಾದರೆ ರೈತರ ಪರ ನಿಲ್ಲುವವರು ಯಾರು? ಈ ಕಾರಣಗಳಿಂದ ವಿದ್ಯತ್ ಲೈನ್ ಸ್ಥಳಾಂತರಕ್ಕೆ ರೈತರಿಗೆ ಹೊರೆಮಾಡದೆ ಸರ್ಕಾರ ಈ ವಿದ್ಯುತ್ ಲೈನ್ ಸ್ಥಳಾಂತರ ಮಾಡಬೇಕೆಂದು ರೈತರು ಸರ್ಕಾರವನ್ನು ಕೋರಿದ್ದಾರೆ.

ಈ ಬಗ್ಗೆ ಸಚಿವ ಸುನಿಲ್ ಕುಮಾರರಿಗೆ ಮನವಿ ನೀಡುವ ಸುಳಿವು ನೀಡಿರುವ ಯುವ ರೈತರಾದ ಸಂತೋಷ ಕಲಕರಡಿ, ಪಾಂಡುರಂಗ ನಾಯ್ಕ, ಸುದರ್ಶನ ನಾಯ್ಕ, ರಾಮಚಂದ್ರನಾಯ್ಕ ಸೇರಿದ ರೈತರು ಇದಕ್ಕೆ ರೈತಸಂಘ, ಇತರ ಸಂಘಟನೆಗಳ ಬೆಂಬಲ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *