ಪಂಚಮಸಾಲಿಗಳನ್ನು 2ಎ ಸೇರಿಸುವುದಕ್ಕೆ ವಿರೋಧ,bsndp ಸಂವಾದ ಸಭೆಯ ತೀರ್ಮಾನ

ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿ ಸುವ ಪ್ರಸ್ಥಾಪಕ್ಕೆ ಸರ್ಕಾರ ಸಮ್ಮತಿಸಬಾರದು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಪ್ರಯತ್ನದ ಬಗ್ಗೆ ಸ್ಪಷ್ಟತೆ ಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಸ್ಥೆ ಆಯೋಜಿಸಿದ್ದ ಸಂವಾದ ಸಭೆ ಸರ್ಕಾರವನ್ನು ಆಗ್ರಹಿಸಿದೆ. ಸಿದ್ಧಾಪುರದ ಬಾಲಭವನದಲ್ಲಿ ನಡೆದ ಚಿಂತನಾ (ಸಂವಾದಸಭೆ) ಸಭೆಯಲ್ಲಿಈ ಅಭಿಪ್ರಾಯ ವ್ಯಕ್ತಪಡಿಸಿದ ಚಿಂತಕರು ರಾಜಕೀಯ ಲಾಭಿಯ ಅಂಗವಾಗಿ ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವುದರಿಂದ ಹಿಂದುಳಿದವರಿಗೆ ಅನ್ಯಾಯವಾಗುವ ಬಗ್ಗೆ ಯಾಕೆ ಯಾರೂ ಯೋಚಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಸಂವಾದ ಸಭೆಯನ್ನು ಉದ್ಘಾಟಿಸಿದ ಬಿ.ಎಸ್.ಎನ್.ಡಿ.ಪಿ. ರಾಜ್ಯ ಸಂಚಾಲಕ ಲೋಹಿತ್ ನಾಯ್ಕ ಮೀಸಲಾತಿ ಮತ್ತು ಅಂಬೇಡ್ಕರ್ ವಿಚಾರಗಳ ಬಗ್ಗೆ ಸ್ಪಷ್ಟತೆ ಬೇಕು. ಯಾರೋ ಬೇಡಿಕೆ ವ್ಯಕ್ತಪಡಿಸಿದ ಮಾತ್ರಕ್ಕೆ ಸರ್ಕಾರ ಎಲ್ಲರಿಗೂ ಮೀಸಲಾತಿ ಕೊಡುತ್ತಾ ಹೋದರೆ ಮೀಸಲಾತಿಯ ಮಹತ್ವವೇ ಕಡಿಮೆಯಾಗುತ್ತದೆ.ಈಗ ಇಂಥ ಪ್ರಯತ್ನಗಳು ನಡೆಯುತ್ತಿರುವುದರಿಂದ ಸಾಮಾಜಿಕ ನ್ಯಾಯದ ಸವಾಲು ಎದುರಾಗಿದೆ ಎಂದು ಪೀಠಿಕೆ ಹಾಕಿದರು.

ಸಂವಾದ ಸಭೆಯಲ್ಲಿ ಉಪನ್ಯಾಸ ನೀಡಿದ ಲಕ್ಷಣ ನಾಯ್ಕ ನಾಯ್ಕ ಕಾನಗೋಡು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಬೇಡಿಕೆ ಪ್ರಸ್ಥಾಪಿಸಿ ಇದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎಂದರು.

ಇದಕ್ಕೆ ಪ್ರತಿಕ್ರೀಯಿಸಿದ ಪತ್ರಕರ್ತ ಕನ್ನೇಶ್ ನಾಯ್ಕ ಕೋಲಶಿರ್ಸಿ,ಮತ್ತು ಬಿ.ಆರ್. ನಾಯ್ಕ ಹೆಗ್ಗಾರಕೈ ಈಡಿಗ ಉಪಪಂಗಡಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಪ್ರಸ್ಥಾಪ ಹಳೆಯದು 2ಎ ವರ್ಗದಲ್ಲಿ ಹೆಚ್ಚಿನ ಸಂಖ್ಯೆಯೊಂದಿಗೆ ಸ್ಫರ್ಧಿಸಬೇಕಾಗುತ್ತದೆ. ಪ್ರವರ್ಗ 1 ಕ್ಕೆ ಸೇರಿಸುವ ವಿಚಾರ ಚರ್ಚೆಯಾಗಿ ನಿರ್ಣಯಕ್ಕೆ ಬರಬೇಕು. ಆದರೆ ಪ್ರವರ್ಗ1 ಅಥವಾ ಅನೂಚಿತ ವರ್ಗಕ್ಕೆ ಸೇರ್ಪಡೆ ಆಗುವುದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎನ್ನುವುದಕ್ಕೆ ಸಾಕ್ಷ ಅಥವಾ ಸ್ಫಷ್ಟತೆ ಇಲ್ಲ ಎಂದರು.

ಬಿ.ಎಸ್.ಎನ್.ಡಿ.ಪಿ ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಸ್ವಾಗತಿಸಿದರು.ಅಣ್ಣಪ್ಪ ನಾಯ್ಕ ನಿರೂಪಿಸಿದರು. ಹಿತೇಂದ್ರ ನಾಯ್ಕ, ದಿವಾಕರ ನಾಯ್ಕ, ಕೆ.ಆರ್. ವಿನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *