ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!

ಪ್ರೊ|| ಬಂಗಾರಿ ಎಂ. ಶೆಟ್ಟಿ ನಿಧನ
ಸಿದ್ದಾಪುರ-೧೪ : ಪ್ರೊ. ಬಂಗಾರಿ ಎಂ. ಶೆಟ್ಟಿ (೭೦) ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ : ೧೨ ರಂದು ನಿಧನ ಹೊಂದಿದರು. ಪತಿ, ಇಬ್ಬರು ಗಂಡುಮಕ್ಕಳು, ಓರ್ವ ಹೆಣ್ಣುಮಗಳನ್ನು ಹಾಗೂ ಸೊಸೆಯಂದಿರನ್ನು, ಬಂಧು-ಬಳಗವನ್ನು ಅಗಲಿದ್ದಾರೆ.
ಅವರು ಸಿದ್ದಾಪುರ ಎಂ.ಜಿ.ಸಿ. ಕಾಲೇಜಿನಲ್ಲಿ ದೀರ್ಘಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಹಿಂದೀ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಅವರ ನಿಧನಕ್ಕೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಿದ್ದಾಪುರ(ಉ.ಕ)
ದಿನಾಂಕ : ೧೪-೦೯-೨೦೨೧ ರ ಸಿದ್ದಾಪುರ ಪೇಟೆ ಧಾರಣೆ
ಅ.ನಂ. ಹುಟ್ಟುವಳಿಯ
ಹೆಸರು ಧಾರಣೆಗಳು (ಪ್ರತಿ ಕ್ವಿಂಟಲ್ಲಿಗೆ)
ಕನಿಷ್ಠ ಗರಿಷ್ಠ ಮಾದರಿ
೧ ರಾಶಿ ೪೭೧೬೯ ೫೧೧೩೩ ೫೦೮೯೯
೨ ತಟ್ಟಿಬೆಟ್ಟೆ ೩೪೦೯೯ ೪೭೪೮೯ ೪೪೮೦೯
೩ ಕೆAಪಗೋಟು ೩೩೬೯೯ ೩೪೦೯೯ ೩೪೦೯೯
೪ ಬಿಳಿಗೋಟು ೩೨೮೯೯ ೩೮೩೯೯ ೩೭೬೯೯
೫ ಚಾಲಿ ೪೦೯೫೯ ೪೬೧೦೯ ೪೫೮೯೯
೬ ಕೋಕಾ ೨೭೭೯೯ ೩೮೦೯೯ ೩೬೭೦೯
೭ ಕಾಳುಮೆಣಸು ೩೮೨೦೮ ೩೮೩೮೯ ೩೮೩೮೯

ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿವೆ. 

Gold smuggling (file pic)

ಕಾರವಾರ: ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ. ಅಧಿಕಾರಿಗಳು ಆರೋಪಿಗಳನ್ನು ಬಂಧಿಸುತ್ತಿರುವುದರಿಂದ ಕರಾವಳಿ ಭಾಗದಲ್ಲಿನ ಚಿನ್ನದ ಕಳ್ಳಸಾಗಾಣಿಕೆ ಏರಿಕೆ ಸ್ಪಷ್ಟವಾಗಿ ಗೋಚರಿಸುತ್ತಿದೆ.
 
ಸೆ.20, 2020 ರಲ್ಲಿ 50 ಗ್ರಾಮ್ ಚಿನ್ನದೊಂದಿಗೆ ತೆರಳುತ್ತಿದ್ದ ಭಟ್ಕಳದ ವ್ಯಕ್ತಿಯೋರ್ವನನ್ನು ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ  ಬಂಧಿಸಲಾಗಿತ್ತು.

ಜ.7, 2021 ರಲ್ಲಿ 22 ಲಕ್ಷ ಮೌಲ್ಯದ 741 ಗ್ರಾಮ್  ಚಿನ್ನಾಭರಣಗಳನ್ನು ಕಳ್ಳಸಾಗಣೆಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. 

ಇದಾದ ಬಳಿಕ ಮೇ.18, 2021 ರಲ್ಲಿ 262 ಗ್ರಾಮ್ ತೂಗುವ 13.17 ಲಕ್ಷ ಮೌಲ್ಯದ ಚಿನ್ನವನ್ನು ವ್ಯಕ್ತಿಯೋರ್ವನಿಂದ ವಶಪಡಿಸಿಕೊಳ್ಳಲಾಗಿತ್ತು. ಆಗಸ್ಟ್ 25 ರಂದು ಮತ್ತೋರ್ವ ವ್ಯಕ್ತಿಯಿಂದ 5.58 ಲಕ್ಷದಷ್ಟು ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು.

ಈ ಎಲ್ಲಾ ಪ್ರಕರಣಗಳಲ್ಲೂ ಇರುವ ಒಂದು ಸಾಮ್ಯತೆಯೆಂದರೆ ಎಲ್ಲಾ ಆರೋಪಿಗಳೂ ಭಟ್ಕಳದ ಮೂಲದವರಾಗಿದ್ದಾರೆ. 

ಭಟ್ಕಳ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ನಂಟು, ಅಕ್ರಮ ವಲಸಿಗರಿಗೆ ನಕಾರಾತ್ಮಕ ಅಂಶಗಳಿಗೆ ಸುದ್ದಿಯಾಗುತ್ತಿದೆ. ಪ್ರತಿ ಬಾರಿಯೂ ಎಟಿಎಸ್ ಹಾಗೂ ಎನ್ಐಎ ಸಿಬ್ಬಂದಿಗಳು ಭೇಟಿ ನೀಡುವುದು ಸಾಮಾನ್ಯ ಸಂಗತಿಯಾಗಿದೆ.

ಈಗ ಈ ನಕಾರಾತ್ಮಕ ಅಂಶಗಳಿಗೆ ಚಿನ್ನದ ಕಳ್ಳಸಾಗಣೆ ಹೊಸದಾಗಿ ಸೇರ್ಪಡೆಯಾಗಿದೆ. ಮೂಲಗಳ ಪ್ರಕಾರ ಕೋವಿಡ್-19 ಸಂದರ್ಭದಲ್ಲಿ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿದ್ದವರನ್ನು ವಾಪಸ್ ಕರೆತರಲು ಭಾರತ ವಂದೇ ಭಾರತ್ ಮಿಷನ್ ನ್ನು ಕೈಗೊಂಡಾಗಲೂ ಚಿನ್ನದ ಕಳ್ಳಸಾಗಣೆ ವರದಿಯಾಗಿತ್ತು ಎಂದು ತಿಳಿದುಬಂದಿದೆ.

ಮಂಗಳೂರು, ಕಣ್ಣೂರು, ಭಟ್ಕಳ, ದುಬೈ ಗಳಲ್ಲಿ ಕಳ್ಳಸಾಗಣೆ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ, ಚಪ್ಪಲಿಗಳಲ್ಲಿ, ಹೇರ್ ಬ್ಯಾಂಡ್, ಬಟ್ಟೆ ಒಣಗಿಸುವ ವೈರ್ ಗಳು ಎನ್-95 ಮಾಸ್ಕ್ ಗಳಲ್ಲಿ ಚಿನ್ನದ ಕಳ್ಳಸಾಗಣೆ ಮಾಡುವ ಮಾರ್ಗಗಳನ್ನು ಕಳ್ಳಸಾಗಣೆ ಮಾಡುವವರು ಕಂಡುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *