ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು. (gouri.com)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *