ಬಂಗಾರಪ್ಪ ಅಭಿಮಾನಿಗೆ ನಟಿ ವಿಜಯಲಕ್ಷ್ಮಿಯಿಂದ ಅವಮಾನ

ಬಂ. ಅಭಿಮಾನಿ ತುಕಾರಾಮ ನಾಯ್ಕ- ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ ಮನೆ ನೀಡಿ ಆಶ್ರಯ ಒದಗಿಸಿದ್ದರು. ಇಂಥ ಸಮಾಜಸೇವೆಯ ತುಕಾರಾಮ ನಾಯ್ಕ ಹಿಂದೆ ಬಂಗಾರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದವರು. ಸಾಮಾಜಿಕ, ರಾಜಕೀಯ ಸೇವೆಯ ತುಕಾರಾಮ ನಾಯ್ಕರಿಗೆ ಉಪಕಾರ ಪಡೆದವರು ಅಪಕಾರ ಮಾಡಿರುವುದು ಇದೇ ಮೊದಲೇನಲ್ಲ…..

ಕಾರವಾರ: ಆರ್ಥಿಕ ತೊಂದರೆಯಲ್ಲಿದ್ದ ನಟಿ ವಿಜಯಲಕ್ಷ್ಮಿ ಅವರ ನೋವಿಗೆ ಮರುಕ ವ್ಯಕ್ತಪಡಿಸಿದ ಅಭಿಮಾನಿಯೋರ್ವರು ಆಸ್ಪತ್ರೆಯ ಬಿಲ್ ಕಟ್ಟಿ ಊಳಿದುಕೊಳ್ಳಲು ಮನೆಯನ್ನೂ ಮಾಡಿಕೊಟ್ಟಿದ್ದರಂತೆ. ಆದರೆ ನಟಿ ಮಾತ್ರ ಮೂರೇ ದಿನದಲ್ಲಿ ವಿವಿಧ ನೆಪ ಹೇಳಿ, ಮುನಿಸಿಕೊಂಡು ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ ಎನ್ನುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಅಭಿಮಾನಿಯ ಆಶ್ರಯ ತೊರೆದ ನಟಿ ವಿಜಯಲಕ್ಷ್ಮಿ

ಇತ್ತೀಚೆಗೆ ವಿಜಯಲಕ್ಷ್ಮಿ ಫೇಸ್ಬುಕ್ ಲೈವ್‌ಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರು, ನಾನು ಮತ್ತು ನಮ್ಮ ಕುಟುಂಬ ಆಸ್ಪತ್ರೆಯಲ್ಲಿದ್ದು, ನಮಗೆ ಉಳಿದುಕೊಳ್ಳಲು ಮನೆ ಇಲ್ಲ, ತುಂಬಾ ತೊಂದರೆಯಲ್ಲಿರುವುದಾಗಿ ಹೇಳಿ ಸಹಾಯ ಕೋರಿದ್ದರು. ಇದಕ್ಕೆ ಸ್ಪಂದಿಸಿದ ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ ಮನೆ ನೀಡಿ ಆಶ್ರಯ ಒದಗಿಸಿದ್ದರು.


, ಒಂದು ವರ್ಷದ ಬಾಡಿಗೆಯನ್ನೂ ತಾವೇ ತುಂಬುವುದಾಗಿಯೂ ತಿಳಿಸಿ ಉಳಿಯುವುದಕ್ಕೆ ಬೆಡ್, ಅಡಿಗೆಗೆ ವ್ಯವಸ್ಥೆ ಕಲ್ಪಿಸಿದ್ದರು. ಎರಡು ದಿನ ಅಡುಗೆ ಮಾಡಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ತಾವೇ ಊಟವನ್ನೂ ಪೂರೈಸಿದ್ದರಂತೆ. ಆದರೆ ನಟಿ ಮಾತ್ರ ಎರಡೇ ದಿನದಲ್ಲಿ ಮನೆಯಲ್ಲಿ ಜಿರಲೆ, ಹಲ್ಲಿ ಬರುತ್ತದೆ ಎಂದೆಲ್ಲಾ ನೆಪಗಳನ್ನು ಹೇಳಿ, ಮುನಿಸಿಕೊಂಡು ಇಂದು ಬೆಂಗಳೂರಿಗೆ ತೆರಳಿದ್ದಾರಂತೆ.

ವಿಜಯಲಕ್ಷ್ಮಿ ಅವರ ಊಟ ಸೇರಿದಂತೆ ಇತರೆ ಖರ್ಚುವೆಚ್ಚ ಎಲ್ಲವನ್ನೂ ನೋಡಿಕೊಂಡಿದ್ದ ತುಕರಾಮ್ ಆರು ದಿನಗಳಿಂದ ಅವರನ್ನು ಸಹಿಸಿಕೊಂಡು ಬಂದಿದ್ದಾರೆ. ಆದ್ರೆ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದರೂ ಮನೆ ಸರಿ ಇಲ್ಲ ಎಂದು ಆಶ್ರಯ ಕೊಟ್ಟವರ ವಿರುದ್ಧವೇ ಅವರು ಮಾತಾಡುತ್ತಿದ್ದರು. ಇದು ನಮಗೆ ತೀವ್ರ ಬೇಸರ ತರಿಸಿದೆ ಎಂದು ತುಕರಾಮ್ ಹೇಳಿದರು. (etbk)

ತುಕಾರಾಮ ಅವರಿಗೆ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಹೃದಯ ಖಂಡಿತಾ ಇದೆ. ಅಪಘಾತ ಆದಾಗ ಅಥವಾ ಯಾರಾದರು ಮೃತರಾದಾಗ ಅವರು ಸಹಾಯಕ್ಕೆ ಧಾವಿಸುತ್ತಾರೆ. ಆದರೆ ಕೈಯಿಂದ 30 ಸಾವಿರ ಹಣ ನೀಡಿ ಸಹಾಯಕ್ಕೆ ಬಂದರು, ಅವರು ಸಹಾಯ ದ ಬಗ್ಗೆ ಕೃತಜ್ಞತೆ ಸಲ್ಲಿಸಿದಂತಹ ವ್ಯಕ್ತಿ ಗೆ ಇನ್ನೂ ಮುಂದೆ ಸಹಾಯ ಮಾಡುವಾಗ ತುಕಾರಾಂ ಅವರೂ ನೂರು ಸಲ ವಿಚಾರ ಮಾಡ ಬೇಕು. ಅವರನ್ನು ಕೆಲವು ರಾಜಕಾರಣಿಗಳು ಈಗಾಗಲೇ ಸಾಕಷ್ಟು ಉಪಯೋಗಿಸಿ ಕೊಂಡು ಮೇಲೇರಿ ಇವರನ್ನು ಕಡೆಗಣಿಸಿದ್ದನ್ನು ಸಹ ನಾನು ಹತ್ತಿರದಿಂದ ಬಲ್ಲೆ. -ಡಾ.ಶ್ರೀಧರ ನಾಯ್ಕ ಕೂಜಳ್ಳಿ,ಕುಮಟಾ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *