

ಮೂರು ಕಾರುಗಳ ನಡುವೆ ಅಪಘಾತ- ಶಿರಸಿ ಸಿದ್ದಾಪುರ ರಸ್ತೆಯ ಅಜ್ಜಿಬಳ (ಜಾಗನಳ್ಳಿ) ಬಳಿ ನಡೆದ ಮೂರು ಕಾರುಗಳ ಅಪಘಾತದಲ್ಲಿ ಕಾರುಗಳು ಬಿದಿರುಹಿಂಡುಗಳನ್ನು ನುಗ್ಗಿ ಜಖಂ ಗೊಂಡಿವೆ. ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಗಾಯಗಳಾಗಿವೆ. ಮಾರುತಿ ಓಮಿನಿ,ಟಾಟಾ ಜೆಸ್ಟ್ ಮತ್ತು ಮಾರುತಿ 800 ಕಾರುಗಳು ಅಪಘಾತಕ್ಕೊಳಗಾದ ವಾಹನಗಳಾಗಿವೆ.



10 ವರ್ಷಗಳ ಹೋರಾಟಕ್ಕೂ ಸಿದ್ಧ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಬಿಡುವುದಿಲ್ಲ: ಭಾರತ್ ಬಂದ್ ಗೂ ಮುನ್ನ ರಾಕೇಶ್ ಟಿಕಾಯತ್
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದಾರೆ.

ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದು ಇನ್ನೂ 10 ವರ್ಷಗಳ ಹೋರಾಟಕ್ಕೂ ಸಿದ್ಧರಿದ್ದೇವೆ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.


ರೈತರು, ಪ್ರಮುಖವಾಗಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದ ಕೃಷಿಕರು ಕೇಂದ್ರ ಸರ್ಕಾರ ಜಾರಿ ತರಲು ಉದ್ದೇಶಿಸಲಾಗಿರುವ ಕೃಷಿ ಕಾನೂನನ್ನು ವಿರೋಧಿಸಿ ಅದನ್ನು ವಾಪಸ್ ಪಡೆಯುವಂತೆ ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಕಾನೂನನ್ನು ವಿರೋಧಿಸಿ 10 ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ. ನಾವು 10 ವರ್ಷಗಳ ಕಾಲ ಹೋರಾಟಕ್ಕೂ ಸಿದ್ಧರಿದ್ದೇವೆ ಎಂಬ ಸಂದೇಶವನ್ನು ಸರ್ಕಾರ ಕಿವಿ ತೆರೆದು ಆಲಿಸಬೇಕು ಎಂದು ಪಾಣಿಪತ್ ನಲ್ಲಿ ಟಿಕಾಯತ್ ಕಿಸಾನ್ ಮಹಾಪಂಚಾಯತ್ ನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದ್ದಾರೆ.
ಭಾರತ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಿದೆ ಎಂದು ರಾಕೇಶ್ ಟಿಕಾಯತ್ ಹೇಳಿದ್ದು, ರೈತರು ತಮ್ಮ ಬೇಡಿಕೆ ಈಡೇರಿಸದೇ ಇದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಸಂದೇಶವನ್ನು ರವಾನೆ ಮಾಡಿದ್ದಾರೆ.
” ರೈತರು ತಮ್ಮ ಟ್ರ್ಯಾಕ್ಟರ್ ಗಳನ್ನು ಸಿದ್ಧವಾಗಿರಿಸಿಕೊಂಡಿರಬೇಕು ದೆಹಲಿಯೆಡೆಗೆ ತೆರಳಲು ಯಾವುದೇ ಕ್ಷಣದಲ್ಲಿ ಅದು ಬೇಕಾಗುತ್ತದೆ ಎಂದು” ಟಿಕಾಯತ್ ರೈತರಿಗೆ ಕರೆ ನೀಡಿದ್ದಾರೆ. (kpc)
ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ,-
ಮಂಜುನಾಥ್ ಎಂ ನಾಯ್ಕ್ ಉತ್ತರಪ್ರದೇಶದ ಲಕ್ನೋದಲ್ಲಿ ನಡೆಯಲಿರುವ 46ನೇ ಸೀನಿಯರ್ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಮಂಜುನಾಥ್ ಎಂ. ನಾಯ್ಕ್ ಯೋಗ ಶಿಕ್ಷಕರಾ ಗಿದ್ದಾರೆ


ಪ್ರತಿಭಟನಾ ಮೆರವಣಿಗೆ, ಮನವಿ ಅರ್ಪಣೆಗಳು ನಡೆದವು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






