ವರ್ಷಿತಾ ನಾಯ್ಕ ಪ್ರಥಮ & ಇತರ ಸ್ಥಳಿಯ ಸುದ್ದಿಗಳು

ಜಲ ಜೀವನ ಮಿಷನ್ ವತಿಯಿಂದ ಯಲ್ಲಾಪುರ ದಲ್ಲಿ
ನಡೆದ ಜಿಲ್ಲಾ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳೇಗೋಡ ಹಿ. ಪ್ರಾಥಮಿಕ. ಶಾಲೆಯ ವಿದ್ಯಾರ್ಥಿನಿ ಕುಮಾರಿ ವರ್ಷಿತಾ ನಾಯ್ಕ ಪ್ರಥಮ ಬಹುಮಾನ ಪಡೆದಿದ್ದಾ ಳೆ

ಸರಕುಳಿಯಲ್ಲಿ ಬ್ಯಾಗ್ ವಿತರಣೆ, ಮಾಹಿತಿ‌‌ ಕಾರ್ಯಾಗಾರ
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಗಡಿಯಲ್ಲಿ ಇರುವ ಸರಕುಳಿ ಶ್ರೀಜಗದಾಂಬಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ, ಸಿ ಸಿ ಕೆಮರಾ ಉದ್ಘಾಟನೆ, ಸಾರಿಗೆ ಅಧಿಕಾರಿಗಳಿಂದ ಸಂಚಾರ ಮಾರ್ಗದರ್ಶನ ಕಾರ್ಯಕ್ರಮಗಳು‌ ನಡೆದವು.
ನಿವೃತ್ತ ಮುಖ್ಯಾಧ್ಯಾಪಕ ಎಂ.ಎಂ.ಹೆಗಡೆ ಅವರು ಸಿಸಿಟಿವಿ‌ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ‌ನೀಡಿದರು. ಶಿರಸಿ ಆರ್ ಟಿಓ ಸಿ.ಡಿ.ನಾಯ್ಕ ಮಕ್ಕಳಿಗೆ ಸಾರಿಗೆ, ಸಂಚಾರದ ಮಾಹಿತಿ ನೀಡಿದರು. ಸಂಚಾರದ ನಿಯಮಗಳ ಕುರಿತು ಕೇಳಲಾದ ಪ್ರಶ್ನೆಗೆ ಸರಿ ಉತ್ತರ ಕೊಟ್ಟ ಮಕ್ಕಳಿಗೆ ಬಹುಮಾನ ಕೂಡ ವಿತರಿಸಿದರು.
ಎಂಟನೇ ವರ್ಗದ ೩೫ ಮಕ್ಕಳಿಗೆ ಆರ್ ಡಿಎಸ್ ಸ್ವಯಂ ಸೇವಾ ಸಂಸ್ಥೆ ೧೨೦೦ ರೂ. ಮೌಲ್ಯದ ಬ್ಯಾಗ್, ೨ ಜೊತೆ ಸಮಸವಸ್ತ್ರ, ಎರಡು‌ಪಟ್ಟಿ ವಿತರಿಸಿ ಶುಭಕೋರಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೦ಕ್ಕಿಂತ ಅಧಿಕ ಅಂಕ‌ ಪಡೆದು ಸಾಧನೆ ‌ಮಾಡಿದ ೧೦ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ‌ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಆರು‌ ಮುಖ್ಯಾಧ್ಯಾಪಕರು ಪಾಲ್ಗೊಂಡಿದ್ದರು. ಬಿ.ಎಂ.ಚಿತ್ರ ಗಿಮಠ, ಜಿ.ಎಸ್.ಹೆಗಡೆ, ಜಿ.ಆರ್.ಭಾಗವತ, ಟಿ.ಆರ್.ಜೋಶಿ, ಎಸ್.ಎನ್.ಭಟ್ಟ, ಎಂ.ಎಂ.ಹೆಗಡೆ ಪಾಲ್ಗೊಂಡರು. ಅಧ್ಯಕ್ಷತೆಯನ್ನು ಆಡಳಿತ ‌ಮಂಡಳಿ ಅಧ್ಯಕ್ಷ ಎಂ.ಜಿ.ಹೆಗಡೆ ವಹಿಸಿದ್ದರು.
ಸ್ತುತಿ‌ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕ ಕೃಷ್ಣಮೂರ್ತಿ ಹೆಗಡೆ ಸ್ವಾಗತಿಸಿದರು. ಎಂ.ವಿ.ನಾಯ್ಕ ವಂದಿಸಿದರು. ವಿ.ಎಸ್.ಭಟ್ಟ ನಿರ್ವಹಿಸಿದರು.

ಸಿದ್ಧಾಪುರ ಹಾವಿನಬೀಳು ಗ್ರಾಮದ ಹಿರಿಯ ವ್ಯಕ್ತಿ ಗಣಪತಿ ರಾಮಚಂದ್ರ ಭಟ್ಟ (87 ವರ್ಷ) ಇವರು ಇಂದು ನಿಧನರಾದರು .

ಇವರು ಈ ಹಿಂದೆ ಹಾವಿನಬೀಳು ಗ್ರಾಮದಲ್ಲಿ ಪೊಲೀಸ್ ಪಟೇಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಇವರ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರೆಂಬುದನ್ನು ಇಲ್ಲಿ ಸ್ಮರಿಸಬಹುದು.

ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿಯನ್ನು ‘ಹಾವಿನಬೀಳು ಯುವ ವಾಹಿನಿ’, ‘ಹಳೆಯ ವಿದ್ಯಾರ್ಥಿಗಳ ಸಂಘ, ಹುಲ್ಕುತ್ರಿ’, ‘ಹುಲ್ಕುತ್ರಿ ಶಾಲೆಯ ಪಾಲಕರು’ ಹಾಗೂ ಸಮಸ್ತ ಹಾವಿನಬೀಳು ಗ್ರಾಮದ ನಾಗರಿಕರು ಅಂತಿಮ ನಮನ ಸಲ್ಲಿ ಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *