ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು.

ತಮ್ಮ ಮ್ಯಾನರಿಸಂ, ಡೈಲಾಗ್​ನಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಕರಾಟೆ ಕಿಂಗ್ ಶಂಕರ್​ ನಾಗ್ ಅಗಲಿ ಇಂದಿಗೆ 31 ವರ್ಷ. ಆಟೋರಾಜ ಎಂದು ಕೂಡಾ ಹೆಸರಾಗಿದ್ದ ಶಂಕರ್​​ನಾಗ್ ಅವರ ಫೋಟೋಗಳನ್ನು ಇಂದಿಗೂ ಕೂಡಾ ಬಹಳ ಆಟೋಗಳ ಮೇಲೆ ಕಾಣಬಹುದು.

ಓದು ಮುಗಿಸಿ ವಿದೇಶಕ್ಕೆ ಹೋಗಬೇಕು ಎಂದುಕೊಂಡಿದ್ದ ಶಂಕರ್ ನಾಗ್ ಅಣ್ಣನ ಬಲವಂತದಿಂದ ರಂಗಭೂಮಿ ಪ್ರವೇಶಿಸಿದರು. ನಂತರ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಅವರು ಬೇಡ ಎಂದುಕೊಂಡು ಬಂದ ಕ್ಷೇತ್ರವನ್ನು ಪ್ರೀತಿಯಿಂದ ಅಪ್ಪಿಕೊಂಡರು.

ಒಮ್ಮೆ ಅನಂತ್​​ನಾಗ್ ಅವರು ತಮ್ಮನ ಕಾಲೆಳೆಯುವ ಉದ್ದೇಶದಿಂದ ‘ಶಂಕರ ವಿದೇಶಕ್ಕೆ ಹೋಗಬೇಕೆಂದುಕೊಂಡೆ, ಯಾವಾಗಪ್ಪಾ ಹೋಗೋದು’ ಎಂದು ಕೇಳಿದ್ದರಂತೆ. ಅದಕ್ಕೆ ಉತ್ತರಿಸಿದ್ದ ಶಂಕರ್​​​ ನಾಗ್ ‘ಇನ್ನೆಲ್ಲಿಯ ವಿದೇಶ ಅಣ್ಣ’ ಎಂದರಂತೆ. ಏಕೆಂದರೆ ಅಷ್ಟರಲ್ಲಿ ಅವರು ಚಿತ್ರರಂಗದಲ್ಲಿ ಅಷ್ಟು ಬ್ಯುಸಿ ಆಗಿದ್ದರು. ಕಾರ್ಯಕ್ರಮವೊಂದರಲ್ಲಿ ಅನಂತ್ ನಾಗ್ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದರು.

actor director shankar nag 31th death anniversary

ವರನಟ ಡಾ.ರಾಜ್​ಕುಮಾರ್​ ಅವರೊಂದಿಗೆ ಶಂಕರ್​ ನಾಗ್​

1978ರಲ್ಲಿ ಗಿರೀಶ್ ಕಾರ್ನಾಡ್ ಅವರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು. ತಾವು ನಿರ್ದೇಶಿಸಿದ ಮೊದಲ ಚಿತ್ರಕ್ಕೆ 7 ರಾಜ್ಯ ಪ್ರಶಸ್ತಿಗಳನ್ನು ಕೂಡ ಪಡೆದರು.

‘ಎಸ್​​​ಪಿ ಸಾಂಗ್ಲಿಯಾನ’ ಚಿತ್ರವನ್ನಂತೂ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಶಂಕರ್ ಖಾಕಿ ಧರಿಸಿದಾಗ ಅವರಿಗೆ ಎಲ್ಲರ ದೃಷ್ಟಿ ತಾಕುತ್ತಿತ್ತು. ಏಕೆಂದರೆ ಅವರಿಗೆ ಆ ಬಟ್ಟೆ ಅಷ್ಟು ಚೆನ್ನಾಗಿ ಒಪ್ಪುತ್ತಿತ್ತು ಎಂದು ಅವರ ಬಹಳಷ್ಟು ಆತ್ಮೀಯರು ಹೇಳಿದ್ದಾರೆ.

‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು ನಿರ್ದೇಶಿಸಿ ಶಂಕರ್​​ ನಾಗ್ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದರು. ಇದು ಹಿಂದಿ ಭಾಷೆಯಲ್ಲಿ ತಯಾರಾದರೂ ಇದರಲ್ಲಿ ನಟಿಸಿದ್ದು, ಕನ್ನಡ ಕಲಾವಿದರು. ಅನಂತ್ ನಾಗ್, ಡಾ. ವಿಷ್ಣುವರ್ಧನ್, ಗಿರೀಶ್ ಕಾರ್ನಾಡ್, ಗಾಯತ್ರಿ, ಮಾಸ್ಟರ್ ಮಂಜುನಾಥ್ ಹಾಗೂ ಇನ್ನಿತರರು ನಟಿಸಿದ್ದರು. ಶಿವಮೊಗ್ಗದಲ್ಲಿ ಸಂಪೂರ್ಣ ಚಿತ್ರೀಕರಣ ಮಾಡಲಾಗಿತ್ತು.

actor director shankar nag 31th death anniversary

ಡಾ. ವಿಷ್ಣುವರ್ಧನ್​ ಜೊತೆ ಶಂಕರ್​ ನಾಗ್​

ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ ಮಾಡಿದ್ದ ಅಭಿಮಾನಿಗಳ ಪ್ರೀತಿಯ ಶಂಕ್ರಣ್ಣ 35ನೇ ವಯಸ್ಸಿಗೆ ಈ ಲೋಕಕ್ಕೆ ವಿದಾಯ ಹೇಳಿದರು. 30 ಸೆಪ್ಟೆಂಬರ್​ 1990ರಂದು ಚಿತ್ರೀಕರಣ ಮುಗಿಸಿ ಬರುವಾಗ ದಾವಣಗೆರೆ ಬಳಿ ಅವರ ಕಾರು ಅಪಘಾತಕ್ಕೀಡಾಗಿ ನಿಧನರಾದರು. ಕರಾಟೆ ಕಿಂಗ್​​​​​​​​​​​​ ಶಂಕರ್​ನಾಗ್​​​​​​​​​​​​ ಇಂದು ನಮ್ಮೊಂದಿಗೆ ಇಲ್ಲವಾದರೂ ಅವರ ನೆನಪು ಮಾತ್ರ ಎಂದಿಗೂ ಹಸಿರಾಗಿರುತ್ತದೆ. ಒಂದು ವೇಳೆ ಶಂಕರ್​ ನಾಗ್ ಇಂದಿಗೂ ಬದುಕಿದ್ದರೆ ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಹೆಸರು ಮಾಡುತ್ತಿತ್ತು ಎಂಬುದು ಮಾತ್ರ ನಿಜ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *