ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು.

ತಮ್ಮ ಮ್ಯಾನರಿಸಂ, ಡೈಲಾಗ್​ನಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಕರಾಟೆ ಕಿಂಗ್ ಶಂಕರ್​ ನಾಗ್ ಅಗಲಿ ಇಂದಿಗೆ 31 ವರ್ಷ. ಆಟೋರಾಜ ಎಂದು ಕೂಡಾ ಹೆಸರಾಗಿದ್ದ ಶಂಕರ್​​ನಾಗ್ ಅವರ ಫೋಟೋಗಳನ್ನು ಇಂದಿಗೂ ಕೂಡಾ ಬಹಳ ಆಟೋಗಳ ಮೇಲೆ ಕಾಣಬಹುದು.

ಓದು ಮುಗಿಸಿ ವಿದೇಶಕ್ಕೆ ಹೋಗಬೇಕು ಎಂದುಕೊಂಡಿದ್ದ ಶಂಕರ್ ನಾಗ್ ಅಣ್ಣನ ಬಲವಂತದಿಂದ ರಂಗಭೂಮಿ ಪ್ರವೇಶಿಸಿದರು. ನಂತರ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಅವರು ಬೇಡ ಎಂದುಕೊಂಡು ಬಂದ ಕ್ಷೇತ್ರವನ್ನು ಪ್ರೀತಿಯಿಂದ ಅಪ್ಪಿಕೊಂಡರು.

ಒಮ್ಮೆ ಅನಂತ್​​ನಾಗ್ ಅವರು ತಮ್ಮನ ಕಾಲೆಳೆಯುವ ಉದ್ದೇಶದಿಂದ ‘ಶಂಕರ ವಿದೇಶಕ್ಕೆ ಹೋಗಬೇಕೆಂದುಕೊಂಡೆ, ಯಾವಾಗಪ್ಪಾ ಹೋಗೋದು’ ಎಂದು ಕೇಳಿದ್ದರಂತೆ. ಅದಕ್ಕೆ ಉತ್ತರಿಸಿದ್ದ ಶಂಕರ್​​​ ನಾಗ್ ‘ಇನ್ನೆಲ್ಲಿಯ ವಿದೇಶ ಅಣ್ಣ’ ಎಂದರಂತೆ. ಏಕೆಂದರೆ ಅಷ್ಟರಲ್ಲಿ ಅವರು ಚಿತ್ರರಂಗದಲ್ಲಿ ಅಷ್ಟು ಬ್ಯುಸಿ ಆಗಿದ್ದರು. ಕಾರ್ಯಕ್ರಮವೊಂದರಲ್ಲಿ ಅನಂತ್ ನಾಗ್ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದರು.

actor director shankar nag 31th death anniversary

ವರನಟ ಡಾ.ರಾಜ್​ಕುಮಾರ್​ ಅವರೊಂದಿಗೆ ಶಂಕರ್​ ನಾಗ್​

1978ರಲ್ಲಿ ಗಿರೀಶ್ ಕಾರ್ನಾಡ್ ಅವರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು. ತಾವು ನಿರ್ದೇಶಿಸಿದ ಮೊದಲ ಚಿತ್ರಕ್ಕೆ 7 ರಾಜ್ಯ ಪ್ರಶಸ್ತಿಗಳನ್ನು ಕೂಡ ಪಡೆದರು.

‘ಎಸ್​​​ಪಿ ಸಾಂಗ್ಲಿಯಾನ’ ಚಿತ್ರವನ್ನಂತೂ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಶಂಕರ್ ಖಾಕಿ ಧರಿಸಿದಾಗ ಅವರಿಗೆ ಎಲ್ಲರ ದೃಷ್ಟಿ ತಾಕುತ್ತಿತ್ತು. ಏಕೆಂದರೆ ಅವರಿಗೆ ಆ ಬಟ್ಟೆ ಅಷ್ಟು ಚೆನ್ನಾಗಿ ಒಪ್ಪುತ್ತಿತ್ತು ಎಂದು ಅವರ ಬಹಳಷ್ಟು ಆತ್ಮೀಯರು ಹೇಳಿದ್ದಾರೆ.

‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು ನಿರ್ದೇಶಿಸಿ ಶಂಕರ್​​ ನಾಗ್ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದರು. ಇದು ಹಿಂದಿ ಭಾಷೆಯಲ್ಲಿ ತಯಾರಾದರೂ ಇದರಲ್ಲಿ ನಟಿಸಿದ್ದು, ಕನ್ನಡ ಕಲಾವಿದರು. ಅನಂತ್ ನಾಗ್, ಡಾ. ವಿಷ್ಣುವರ್ಧನ್, ಗಿರೀಶ್ ಕಾರ್ನಾಡ್, ಗಾಯತ್ರಿ, ಮಾಸ್ಟರ್ ಮಂಜುನಾಥ್ ಹಾಗೂ ಇನ್ನಿತರರು ನಟಿಸಿದ್ದರು. ಶಿವಮೊಗ್ಗದಲ್ಲಿ ಸಂಪೂರ್ಣ ಚಿತ್ರೀಕರಣ ಮಾಡಲಾಗಿತ್ತು.

actor director shankar nag 31th death anniversary

ಡಾ. ವಿಷ್ಣುವರ್ಧನ್​ ಜೊತೆ ಶಂಕರ್​ ನಾಗ್​

ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ ಮಾಡಿದ್ದ ಅಭಿಮಾನಿಗಳ ಪ್ರೀತಿಯ ಶಂಕ್ರಣ್ಣ 35ನೇ ವಯಸ್ಸಿಗೆ ಈ ಲೋಕಕ್ಕೆ ವಿದಾಯ ಹೇಳಿದರು. 30 ಸೆಪ್ಟೆಂಬರ್​ 1990ರಂದು ಚಿತ್ರೀಕರಣ ಮುಗಿಸಿ ಬರುವಾಗ ದಾವಣಗೆರೆ ಬಳಿ ಅವರ ಕಾರು ಅಪಘಾತಕ್ಕೀಡಾಗಿ ನಿಧನರಾದರು. ಕರಾಟೆ ಕಿಂಗ್​​​​​​​​​​​​ ಶಂಕರ್​ನಾಗ್​​​​​​​​​​​​ ಇಂದು ನಮ್ಮೊಂದಿಗೆ ಇಲ್ಲವಾದರೂ ಅವರ ನೆನಪು ಮಾತ್ರ ಎಂದಿಗೂ ಹಸಿರಾಗಿರುತ್ತದೆ. ಒಂದು ವೇಳೆ ಶಂಕರ್​ ನಾಗ್ ಇಂದಿಗೂ ಬದುಕಿದ್ದರೆ ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಹೆಸರು ಮಾಡುತ್ತಿತ್ತು ಎಂಬುದು ಮಾತ್ರ ನಿಜ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *