ಸಿದ್ದಾಪುರದಲ್ಲಿ ಕಾರ್ ಕಳವು.. ಭಟ್ಕಳದಲ್ಲಿ ಆರೋಪಿಗಳ ಬಂಧನ

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮದಲ್ಲಿ ಕಳ್ಳತನಕ್ಕೆ ಹೊಂಚುಹಾಕಿ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯ ಒಳಗೆ ಹಣ-ಆಭರಣಗಳಿಗಾಗಿ ಹುಡುಕಿ ಕೊನೆಗೆ ಮನೆಯ ಎದುರಿಗಿದ್ದ ಕಾರ್ ಕದ್ದೊಯ್ದ ಘಟನೆ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ಸಮಯದೊಳಗೆ ನಡೆದಿದೆ.

ಶಿರಳಗಿಯ ಖಾಸಗಿ ಬ್ಯಾಂಕ್ ಉದ್ಯೋಗಿ ಮತ್ತು ಶಿಕ್ಷಕಿ ದಂಪತಿಗಳ ಮನೆಯಲ್ಲಿ ಯಾರೂ ಇರದಿರುವುದನ್ನು ಅರಿತ ಕಳ್ಳರು ಬೆಳಿಗ್ಗೆ 2-3 ಗಂಟೆಯ ಸಮಯಕ್ಕೆ ಬಾಗಿಲು ಒಡೆದು ಮನೆಗೆ ನುಗ್ಗಿದ್ದಾರೆ. ಮನೆಯ ಒಳಗೆ ಆಭರಣ-ಹಣಕ್ಕಾಗಿ ತಡಕಾಡಿದ್ದಾರೆ. ಯಾವ ಸ್ವತ್ತೂ ಸಿಗದೆ ವಾರ್ಡ್ ರೋಬ್ ನಲ್ಲಿ ದೊರೆತ ಕಾರ್ ಆರ್.ಸಿ. ಪುಸ್ತಕ ಹಿಡಿದು ಮನೆಯ ಮೇಜಿನ ಮೇಲಿದ್ದ ಕಾರ್ ಕೀಲಿ ಪಡೆದು ಕಾರ್ ನೊಂದಿಗೆ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಮಾಹಿತಿ ಮೇರೆಗೆ ಪೊಲೀಸ್ ದೂರು ದಾಖಲಿಸಿ ಪರಿಶೀಲಿಸಿದಾಗ ಕಳ್ಳರು ಕಳ್ಳತನಕ್ಕಾಗಿ ಪ್ರಯತ್ನಿಸಿ ವಿಫಲರಾಗಿ ನಂತರ ಕಾರ್ ನೊಂದಿಗೆ ಪರಾರಿಯಾದ ವಾಸ್ತವ ತಿಳಿದಿದೆ.

ಸ್ಥಳಿಯರ ಮಾಹಿತಿ ಪ್ರಕಾರ ಬೆಳಿಗ್ಗೆ 2 ಗಂಟೆಯಿಂದ 2.30 ರ ಅವಧಿಯಲ್ಲಿ ಬಾಗಿಲು ಒಡೆದ ಶಬ್ಧ, ನಂತರ ಕಾರಿನ ಅವಾಜ್ ಗಮನಕ್ಕೆ ಬಂದಿದೆ. ಆದರೆ ಕಳ್ಳತನದ ಬಗ್ಗೆ ಸಂಶಯಿಸದ ಸ್ಥಳಿಯರು ತೆಂಗಿನ ಮರದಿಂದ ಕಾಯಿ ಬಿದ್ದಿರಬಹುದು ಎಂದು ಭಾವಿಸಿ ಸುಮ್ಮನಾಗಿದ್ದಾರೆ. ಮುಂಜಾನೆಯ ವೇಳೆ ಕಳ್ಳತನದ ವಿಷಯ ತಿಳಿಯುತ್ತಲೇ ಶಬ್ಧಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ ನಾಯ್ಕ ಕೆಲವು ದಿವಸ ಶಿರಳಗಿಯಲ್ಲಿ ಕೆಲವು ದಿವಸ ಹೊರ ಊರಲ್ಲಿ ಕುಟುಂಬದೊಂದಿಗೆ ಇರುತಿದ್ದರು. ಈ ಮಾಹಿತಿ ಸಂಗ್ರಹಿಸಿದ ಕಳ್ಳರು ಅವರ ಕುಟುಂಬ ಶಿರಳಗಿಯ ಮನೆಯಲ್ಲಿರದಿರುವುದನ್ನು ಖಚಿತಪಡಿಸಿಕೊಂಡು ಬಾಗಿಲು ಒಡೆದಿದೆ. ಈ ಕಳ್ಳತನದ ವೇಳೆ ಬೀಡಿ ಸೇದು ಎಸೆದಿರುವ ಕುರುಹುಗಳಿದ್ದು ಹಣ-ಆಭರಣ ದೋಚುವ ಉದ್ದೇಶದಿಂದ ಬಂದವರು ಹತಾಶರಾಗಿ ಕಾರ್ ಅಪಹರಿಸಿರುವ ಸಾಧ್ಯತೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿದ್ಧಾಪುರ ಪೊಲೀಸರು ಕಳ್ಳರು ಶಿವಮೊಗ್ಗ ಜಿಲ್ಲೆಯ ಕಡೆಯಿಂದ ಬಂದಿದ್ದು ಒಳದಾರಿಯಿಂದ ಪರಾರಿಯಾಗಿರುವ ಸಾಧ್ಯತೆ ಬಗ್ಗೆ ಊಹಿಸಿದ್ದಾರೆ.

ಭಟ್ಕಳ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : ಸಾಗವಾನಿ ಮರ ಕಡಿದು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನ

ಕಾರವಾರ : ಭಟ್ಕಳ ತಾಲೂಕಾ ಅರಣ್ಯ ವಲಯ ವ್ಯಾಪ್ತಿಯ ಶಿರಾಲಿ ಶಾಖೆಯ ಕೊಪ್ಪಾ ಮೀಸಲು ಅರಣ್ಯ ಸರ್ವೆ ನಂ.157 ರಲ್ಲಿ ಸಾಗವಾನಿ ಮರ ಕಡಿದು ತಲೆಮರೆಸಿಕೊಂಡಿದ್ದ ಆರೋಪಿಗಳಾದ ಇಲಿಯಾಸ ಕೊಳಗೇರಿ,ಉತ್ತರಕೊಪ್ಪಾ ಮತ್ತು ಸೋಮ ಕೃಷ್ಣ ಮರಾಠಿ,ಉತ್ತರಕೊಪ್ಪಾ ಈ ಇಬ್ಬರು ಆರೋಪಿಗಳನ್ನು ಬಂಧಿಸಿ ದಂಡ ವಸೂಲಿ ಮಾಡಲಾಯಿತು.

ಅಕ್ರಮವಾಗಿ ಕಡಿದ ಸಾಗವಾನಿ ತುಂಡುಗಳನ್ನು ವಶಪಡಿಸಿಕೊಂಡು ಸದರಿ ಆರೋಪಿಗಳಿಂದ ರೂ.25000/- ದಂಡ ವಸೂಲಿ ಮಾಡಲಾಯಿತು.ಈ ಕಾರ್ಯಚರಣೆಯಲ್ಲಿ ಭಟ್ಕಳ ವಲಯ ಅರಣ್ಯಾಧಿಕಾರಿ ಸವಿತಾ ಆರ್.ದೇವಾಡಿಗ, ಉಪ ವಲಯ ಅರಣ್ಯಾಧಿಕಾರಿಗಳಾದ ಜಗದೀಶ ನಾಯ್ಕ,ಮಧುಕುಮಾರ ನಾಯ್ಕ, ಸಂದೀಪ ಭಂಡಾರಿ,ಶ್ರೀಕಾಂತ ಪವಾರ,ಗಣಪತಿ ನಾಯ್ಕ,ಅರಣ್ಯ ರಕ್ಷಕರಾದ ಸಚಿನ್ ಕಾಡು ಗೋಲಬಾವಿ,ಮೃತ್ಯುಂಜಯ,ಪುಂಡಲೀಕ ಮತ್ತು ವಾಹನ ಚಾಲಕರು ಪಾಲ್ಗೊಂಡಿದ್ದರು.ತಾಲೂಕಿನಲ್ಲಿ ನಡೆದ ಅರಣ್ಯ ಇಲಾಖೆಯ ಈ ಕಾರ್ಯಾಚರಣೆಗೆ ತಾಲೂಕಿನಾದ್ಯಂತ ಪ್ರಶಂಸೆಯ ಸುರಿಮಳೆಯೇ ಹರಿದು ಬಂದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *