ಪದ್ಮಶ್ರೀ ಪ್ರಶಸ್ತಿ ವಾಪಸ್, ಸುಕ್ರಿ ಗೌಡ ಎಚ್ಚರಿಕೆ!

ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ

halakki-vokkaliga-community-demanded-to-inclusion-in-scheduled-tribe

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..!

ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗದ ದಶಕಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ 20 ವರ್ಷದಿಂದಲೂ ಬೇಡಿಕೆ ಇರಿಸಿದ್ದು, ಇಂದಿಗೂ ಈಡೇರಿ ಲ್ಲ. ಹೀಗಾಗಿ ಮುಂಬರುವ ದಿನದಲ್ಲಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಕಾರವಾರ (ಉ.ಕ): ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ಇಂದಿಗೂ ಹಲವಾರು ಬುಡಕಟ್ಟು ಸಮುದಾಯಗಳು ಜೀವನ ಕಟ್ಟಿಕೊಂಡಿವೆ. ಅದರಲ್ಲೂ ಜಿಲ್ಲೆಯ ಕರಾವಳಿಯಲ್ಲಿ ಕಂಡುಬರುವ ಬುಡಕಟ್ಟು ಸಮುದಾಯದ ಹಾಲಕ್ಕಿ ಒಕ್ಕಲಿಗರು ಕಳೆದ ಹಲವು ವರ್ಷಗಳಿಂದ ತಮ್ಮನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಅಷ್ಟಾದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಬೊಮ್ಮುಗೌಡ ಇದೀಗ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನೇ ಪಣಕ್ಕಿಟ್ಟು ಹೋರಾಟಕ್ಕಿಳಿದಿದ್ದಾರೆ.

ಹಾಲಕ್ಕಿ ಒಕ್ಕಲಿಗರು ಉತ್ತರಕನ್ನಡ ಜಿಲ್ಲೆಯಲ್ಲಿ ಕಂಡು ಬರುವ ವಿಶಿಷ್ಟ ಬುಡಕಟ್ಟು ಜನಾಂಗ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಅಂಕೋಲಾ, ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಮಾತ್ರ ಹಾಲಕ್ಕಿ ಬುಡಕಟ್ಟು ಜನಾಂಗದವರು ಕಂಡು ಬರುತ್ತಾರೆ. ಈ ಸಮುದಾಯ ಸರ್ಕಾರದ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದು, ಈಗ ಹೋರಾಟದ ಹಾದಿಗಿಳಿದಿವೆ.

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ

ಈ ಸಮುದಾಯಕ್ಕೆ ಸೇರಿದ ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಇದೀಗ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಸುಮಾರು 1.5 ಲಕ್ಷ ಜನಸಂಖ್ಯೆ ಇರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಜನಾಂಗದವರ ಬಹುದೊಡ್ಡ ಬೇಡಿಕೆ. ಈ ನಿಟ್ಟಿನಲ್ಲಿ ಕಳೆದ 2000ನೇ ಇಸ್ವಿಯಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದು ಇಂದಿಗೂ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿಸಿಲ್ಲ.

ಪದ್ಮಶ್ರೀ ಪ್ರಶಸ್ತಿ ವಾಪಸ್

ಈ ನಿಟ್ಟಿನಲ್ಲಿ ತಮ್ಮ ಸಮುದಾಯದ ಒಳಿತಿಗಾಗಿ ಮುಂದಾಗಿರುವ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗವನ್ನ ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸರ್ಕಾರದ ಸೌಲಭ್ಯದಿಂದ ಜನಾಂಗ ವಂಚಿತವಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಒಂದಿಷ್ಟು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಕ್ರಜ್ಜಿ ತಮ್ಮ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡುವುದಾಗಿ ಎಚ್ಚರಿಸಿದ್ದಾರೆ.

ಈ ಸಮುದಾಯವನ್ನ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ 20 ವರ್ಷದಿಂದಲೂ ಕೇಂದ್ರ ಈ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜನಾಂಗಕ್ಕೆ ನ್ಯಾಯ ಸಿಗದೇ ಹೋದರೆ ವಿಧಾನಸೌಧದ ಎದುರಲ್ಲೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. (etbk)

ಕಾರವಾರ : ಭಟ್ಕಳ ತಾಲೂಕಿನಲ್ಲಿ ಕಾನೂನಿನ ವಿಧಿ ವಿಧಾನ ಅನುಸರಿಸದೆ ತಾಲೂಕಾದ್ಯಂತ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ, ಖಂಡನಾರ್ಹ.ಅರಣ್ಯ ಸಿಬ್ಬಂದಿಗಳ ಕಾನೂನು ಬಾಹೀ ರ ಕೃತ್ಯ ನಿಯಂತ್ರಿಸಲು ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ.ಅರಣ್ಯ ಇಲಾಖೆಗೆ ಮುಂದಿನ 48 ಗಂಟೆಯಲ್ಲಿ ನ್ಯಾಯಕ್ಕಾಗಿ ಗಡುವು ನೀಡಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಸಿಬ್ಬಂದಿಗಳಿoದ ಅನ್ಯಾಯಕ್ಕೆ ಒಳಗಾಗಿರುವ ದುರ್ಗಮ್ಮಳಿಗೆ ಮುಂದಿನ 48 ಗಂಟೆಗಳಲ್ಲಿ ನ್ಯಾಯ ಒದಗಿಸಬೇಕು.ಇಲ್ಲದಿದ್ದಲ್ಲಿ ಅರಣ್ಯ ಸಿಬ್ಬಂದಿಗಳ ಕಾನೂನು ಬಾಹೀ ರ ಕೃತ್ಯದ ವಿರುದ್ಧ ಬೃಹತ್ ಹೋರಾಟದ ಮೂಲಕ ಪ್ರತಿಭಟಿಸಲಾಗುವುದೆಂದು ರವೀಂದ್ರನಾಥ ನಾಯ್ಕ ಎಚ್ಚರಿಕೆ ನೀಡಿದರು.ಹಾಗೂ ಸ್ಥಳದಿಂದಲೇ ಹೊನ್ನಾವರ ವಲಯದ ಡಿ.ಎಫ್.ಓ ಗಣಪತಿಯವರಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ತಕ್ಷಣ ವಿಧವೆಗೆ ನ್ಯಾಯ ಕೊಡಬೇಕೆಂದು ಅಗ್ರಹಿಸಿದರು.ಅರಣ್ಯ ಸಿಬ್ಬಂದಿಗಳಿಂದ ದೌರ್ಜನ್ಯಕ್ಕೆ ಒಳಗಾಗಿ,ಆಘಾತಕ್ಕೆ ಒಳಗಾಗಿರುವ ದುರ್ಗಮ್ಮ ಶನಿಯಾರ ನಾಯ್ಕ ಅವರಿಗೆ ಹೋರಾಟಗಾರರ ವೇದಿಕೆಯು ಸಂತೈಸಿ ಬೆಂಬಲವನ್ನು ಸೂಚಿಸಿತು.

ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳ ವಿರುದ್ಧ ಸ್ಥಳೀಕರಾದ ಚಂದ್ರು ಮೊಗೇರ್, ಮಹೇಶ ನಾಯ್ಕ,ಮನೋಹರ ನಾಯ್ಕ,ತರಬೇಜ್,ಜಿಲ್ಲಾ ಸಂಚಾಲಕ ದೇವರಾಜ್ ಗೊಂಡ,ಕಯೀಂ ಸಾಬ್,ಪಾಂಡುರಂಗ ನಾಯ್ಕ ಬೆಳಕೆ,ರಿಜವಾನ್ ಸಾಬ್,ಹತ್ಸಾಪ ದಾಮುದ್ದೀನ್ ಮುಂತಾದವರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *