Ibor-ತ್ರಿಶಿಕಾ ಶೇಟ್, & ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇಪ೯ಡೆಯಾದ ಪುಠಾಣಿ ತ್ರಿಶಿಕಾ..

ಸಿದ್ದಾಪುರದ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲಸ್೯ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಕೇವಲ 2 ವಷ೯ 8 ತಿಂಗಳ ಪುಠಾಣಿ ಪೋರಿ ತ್ರಿಶಿಕಾ ಶೇಟ್ ತನ್ನ ಅಸಾಧಾರಣ ನೆನಪಿನ ಶಕ್ತಿಯ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾಡ್೯ ದಾಖಲೆಯಲ್ಲಿ ಸೇಪ೯ಡೆಯಾಗಿದ್ದಾಳೆ.

ತನ್ನ ತೊದಲು ನುಡಿಗಳ ಮೂಲಕವೇ ಸಾಮಾನ್ಯ ವಿಷಯಗಳ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಪಟಪಟನೆ ನುಡಿ ಮುತ್ತುಗಳನ್ನು ಉದುರಿಸುವ ಪುಠಾಣಿ ತ್ರಿಶಿಕಾಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯು 2021 ನೇ ಸಾಲಿನ ಪ್ರಶಸ್ತಿ ಹಾಗೂ ಪದಕವನ್ನು ನೀಡಿ ಗೌರವಿಸಿದೆ.

ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ದೇಶ ಹಾಗೂ ರಾಜ್ಯಕ್ಕೆ ಸಂಬಂಧಪಟ್ಟ ಹಲವು ಮಾಹಿತಿಗಳ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ವಣ೯ಮಾಲೆ, ಇಂಗ್ಲಿಷ್ ವಣ೯ಮಾಲೆಯ ಎ ಯಿಂದ ಜೆಡ್ ವರೆಗಿನ ಪ್ರತಿ ಅಕ್ಷರಗಳ ಪದ ಜೋಡಣೆ, 1ರಿಂದ 20ವರೆಗಿನ ಸಂಖ್ಯೆ ಹೇಳುವುದು, ಮನುಷ್ಯನ ದೇಹದ 18 ಅಂಗಾಂಗಗಳ ಹೆಸರು, ಬಣ್ಣಗಳನ್ನು ಗುರುತು ಹಿಡಿಯುವುದು, ಸೂಯ೯ ನಮಸ್ಕಾರ, ಶಾಸ್ತ್ರದ 8 ಮಂತ್ರಗಳು, ಕಾಮನ ಬಿಲ್ಲಿನ ಬಣ್ಣವನ್ನು ಹೇಳುವುದು, ಪಂಚೇಂದ್ರಿಯಗಳು, ವಾರಗಳು, ಮಾಸಗಳು, ದಿಕ್ಕುಗಳು, ಋತುಗಳು, ಸೂಯ೯ಮಂಡಲದ ಗ್ರಹಗಳ ಹೆಸರು, ತಿಥಿಗಳು, ಕಾಲಗಳು ಸೇರಿದಂತೆ ಸಾಮಾನ್ಯ ಜ್ಞಾನದ ಬಗ್ಗೆ ಅಗಾಧವಾದ ಜ್ಞಾಪಕ ಶಕ್ತಿ ಹೊಂದಿರುವ ತ್ರಿಶಿಕಾ ಎಲ್ಲವನ್ನೂ ಹೇಳುತ್ತಾಳೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್ ನ ದಾಖಲೆಯಲ್ಲಿ ಸೇಪ೯ಡೆಯಾದ ಕುಮಾರಿ ತ್ರಿಶಿಕಾ ಸಾಧನೆಗೆ ಜನತೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಕಾರವಾರದಲ್ಲಿ ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ಇಂದು ರಕ್ಷಿಸಿದ್ದಾರೆ. ಇಲ್ಲಿನ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಈ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿ ಒಟ್ಟು 6 ಮಕ್ಕಳು ವಾಟರ್ ಸ್ಪೋರ್ಟ್ಸ್ ಮುಗಿಸಿಕೊಂಡು ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಾಟರ್​​ ಸ್ಪೋರ್ಟ್ಸ್ ಸಿಬ್ಬಂದಿ ಪಾಲಕರಿಗೆ ಮಕ್ಕಳನ್ನು ನೀರಿನಲ್ಲಿ ಮುಂದೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು. ಆದರೂ ಮಕ್ಕಳು ಆಟವಾಡುತ್ತ ಮುಂದೆ ಸಾಗಿದ್ದು, ಒಮ್ಮೆಲೇ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ.

ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ಧಾವಿಸಿದ ಲೈಫ್‌ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿ 6 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *