Tarjaan – ರಿಯಲ್ ಲೈಫ್ ಟಾರ್ಜಾನ್ & ನಕಲಿ ನೋನಿ ಜಾಲ

ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ.

Ho van Lang,
“ರಿಯಲ್ ಲೈಫ್ ಟಾರ್ಜಾನ್” ಎಂದು ದಂತಕತೆಯಾಗಿರುವ ಈತನ ಬದುಕು ನಮಗೆ ಕುತೂಹಲಕಾರಿ, ರೋಮಾಂಚಕ ಅನಿಸಿದರೂ ನಿಜಕ್ಕೂ ಅದೊಂದು ಕರುಣಾಜನಕ ಕತೆ.
ವಿಯೆಟ್ನಾಂ‌ನ ಆಂತರಿಕ ಯುದ್ದ(1959–1975)ದ ಸಮಯದಲ್ಲಿ1972 ರಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಈ ಬಾಲಕ ಟಾರ್ಜಾನನು ತಾಯಿ ಮತ್ತು ಇಬ್ಬರು ಸೋದರಿಯರನ್ನು ಕಳೆದುಕೊಂಡು ದಿಗ್ಭ್ರಾಂತನಾಗಿ ಮನುಷ್ಯರೆಂದರೆ ಅನುಮಾನ, ಅಂಜಿಕೆಯ ತೀವ್ರ ಭಯ (Profound phobia)ಕ್ಕೊಳಗಾಗುತ್ತಾನೆ. ಆಗ ತನ್ನ ತಂದೆ ಹೊ ವಾನ್ ತಾಂಗ್ ನೊಟ್ಟಿಗೆ ವಿಯೆಟ್ನಾಂ‌ನ ದಟ್ಟ ಅಡವಿಗೆ ಪಲಾಯನ ಮಾಡುತ್ತಾನೆ;ನಾಗರಿಕ ಜಗತ್ತಿನಿಂದ ಅಕ್ಷರಶಃ ಕಣ್ಮರೆಯಾಗುತ್ತಾನೆ.ಮನುಷ್ಯನ ಸುಳಿವು ಕಂಡರೆ ಹೆದರಿಕೆಯಿಂದ ತಪ್ಪಿಸಿಕೊಳ್ಳತೊಡಗಿ ಶುದ್ಧ “ಕಾಡು ಮನುಷ್ಯ” ನಾಗಿ ಅಲ್ಲಿನ ಪ್ರಕೃತಿ, ಪ್ರಾಣಿ,ಪಕ್ಷಿಗಳೊಂದಿಗಿನ ಬದುಕಿನಲ್ಲಿ ಲೀನವಾಗಿಬಿಡುತ್ತಾನೆ.ನಾಗರಿಕ ಬದುಕಿನಿಂದ, ಸಹಜ ಮನುಷ್ಯ ಭಾವನೆಗಳಿಂದ ಅದೆಷ್ಟು ದೂರವಾಗುತ್ತಾನೆಂದರೆ,ಮನುಷ್ಯರಲ್ಲಿ ಹೆಣ್ಣೆಂಬ ಜಾತಿ ಇದೆ ಗಂಡು ಹೆಣ್ಣಿನ ಗೆಳೆತನ ಸಹಜ,ಅನಿವಾರ್ಯ, ಅಗತ್ಯ ಎಂಬುದು ಕೂಡ ಅವನ ಜೀವಿತದಲ್ಲಿ ಅರಿವಿಗೇ ಬರುವುದಿಲ್ಲ‌.ಹೀಗೆಯೇ ನಾಲ್ಕು ದಶಕಗಳ ಕಾಲ ಅಜ್ಞಾತವಾಗಿಯೇ ಉಳಿದುಹೋಗುತ್ತಾನೆ.ತನ್ನ ಐವತ್ತೆರಡನೇ ವಯಸ್ಸಿನಲ್ಲಿ ಲಿವರ್ ಕ್ಯಾನ್ಸರಿನಿಂದ ತೀರಿಕೊಳ್ಳುತ್ತಾನೆ.
ಯುದ್ಧ ಮಾನ,ಪ್ರಾಣ,ಆರ್ಥಿಕತೆಯ….. ವಿನಾಶಕಾರಿ ಮಾತ್ರವಲ್ಲ;ಮನುಷ್ಯನನ್ನೇ ಪ್ರಾಣಿಯಾಗಿಸಬಲ್ಲ ವಿಕೃತ ಕ್ರೂರಿ. -deepak kalkere

ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆ

ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ: ಅಮೃತ್ ನೋನಿಯನ್ನೇ ಹೋಲುವ ನಕಲಿ ಪ್ಯಾಕಿಂಗ್ ಮಾಡಿ ಜ್ಯೂಸ್ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಇಲ್ಲಿನ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಅಮೃತ್ ನೋನಿಯನ್ನು ಮಾರಾಟ ಮಾಡುತ್ತಿರುವ ವ್ಯಾಲ್ಯೂ ಪ್ರಾಡೆಕ್ಟ್ ಕಂಪನಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಅಮೃತ್ ನೋನಿಯನ್ನೇ ಹೋಲುವ ನಕಲಿ ಪ್ಯಾಕಿಂಗ್ ಮಾಡಿರುವ 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆಯಲಾಗಿದೆ.

ನಾವು ಆಯುಷ್ ಇಲಾಖೆಯಿಂದ ಲೈಸೆನ್ಸ್ ಪಡೆದು ಔಷಧಿ ಎಂದು ಮಾರಾಟ ಮಾಡುತ್ತಿದ್ದೇವೆ. ಆದ್ರೆ ಕೆಲವರು ಇದನ್ನು ನಕಲು ಮಾಡಿ, ಮಾರುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಿದ್ದೇವೆ. ಪೊಲೀಸರು ದಾಳಿ ನಡೆಸಿ ನಕಲಿ ಅಮೃತ್ ನೋನಿ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವ್ಯಾಲ್ಯೂ ಪ್ರಾಡೆಕ್ಟ್ ಸಂಸ್ಥೆಯ ಕಾನೂನು ವಿಭಾಗದ ಶಶಿಕಾಂತ್ ನಾಡಿಗ್ ತಿಳಿಸಿದ್ದಾರೆ. (etbk)

ಜೂಸ್ ಎಂದು ತಿಳಿದು ಅಕಸ್ಮಿಕವಾಗಿ ಆಲ್ಕೊಹಾಲ್ ಸೇವಿಸಿದ 5 ವರ್ಷದ ಬಾಲಕ ದುರ್ಮರಣ

ತಾತ ಚಿನ್ನಸ್ವಾಮಿ (62) ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಬ್ರಾಂಡಿ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. 

ವೆಲ್ಲೂರ್: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಅಣ್ಣಾನಗರ್ ನಲ್ಲಿ ನಡೆದಿದೆ. 

ರಾಕೇಶ್ ಎನ್ನುವ ಬಾಲಕ ಮೃತಪಟ್ಟ ದುರ್ದೈವಿ. ಆತನ ತಾತ ಚಿನ್ನಸ್ವಾಮಿ (62) ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಬ್ರಾಂಡಿ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. 

ತಾತನ ರೂಮಿನಲ್ಲಿ ಬ್ರಾಂಡಿ ಬಾಟಲಿಯನ್ನು ಜೂಸ್ ಎಂದು ತಪ್ಪು ತಿಳಿದ ರಾಕೇಶ್ ಅದರಲ್ಲಿದ್ದುದನ್ನು ಕುಡಿದಿದ್ದಾನೆ. ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು. 

ಇಬ್ಬರನ್ನೂ ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *