ಇಂದಿನ ಖುಷಿ ಕಬರ್- ಡಿಸೆಂಬರ್ 10 ರೊಳಗೆ 25 ಸಾವಿರ ಬಡಜನರ ಮನೆಗೆ ವಿದ್ಯುತ್ ಸಂಪರ್ಕ

ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು ಆಯಾ ಉಪವಿಭಾಗದ ಮೂಲಕ ಆದೇಶದ ಮಾಹಿತಿ ನೀಡಿ ಕಾಲಮಿತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸೂಚಿಸಿರುವುದಾಗಿ ಕೆ.ಪಿ.ಟಿ.ಸಿ.ಎಲ್. ಮೂಲಗಳು samajamukhi.net ಪ್ರತಿನಿಧಿಗೆ ಮಾಹಿತಿ ನೀಡಿವೆ.

ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವಲ್ಲಿ ರಾಮಬಾಣವಾಗುತ್ತಿದೆ ಈ ಹೊಸ ಔಷಧಿ..!

ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.

ಡಿಸೆಂಬರ್ 10 ರೊಳಗೆ ರಾಜ್ಯದ 25 ಸಾವಿರ ಬಡವರಿಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ

ವಿದ್ಯುತ್ ಸಂಪರ್ಕ ಅವಶ್ಯವಿರುವ ರಾಜ್ಯದ 25 ಸಾವಿರಕ್ಕೂ ಹೆಚ್ಚು ಬಡಜನರ ಮನೆಗಳಿಗೆ ಇದೇ ಡಿಸೆಂಬರ್ 10 ರ ರೊಳಗೆ ವಿದ್ಯುತ್ ವ್ಯವಸ್ಥೆ ಮಾಡುವಂತೆ ರಾಜ್ಯ ಇಂಧನ ಇಲಾಖೆ ಆದೇಶಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿದ್ಯುತ್ ಸರಬರಾಜು ಕಾಮಗಾರಿಗೆ ಮೀಸಲಿರುವ ಮೊತ್ತವನ್ನು ಬಳಸಿಕೊಂಡು ರಾಜ್ಯದ 23ರಿಂದ 25 ಸಾವಿರ ಬಡ ಕುಟುಂಬಗಳಿಗೆ ಡಿಸೆಂಬರ್ ಹತ್ತರೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆದೇಶಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ದೀನ್ ದಯಾಳ್ ಗ್ರಾಮ ಜ್ಯೋತಿ ಯೋಜನೆಯಡಿ 2020 ರ ವರೆಗೆ 4.29 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಈಗ ಡಿಸೆಂಬರ್ 10 ರೊಳಗೆ ಇನ್ನೂ ಬಾಕಿ ಇರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಇಂಧನ ಇಲಾಖೆ ಯ ಅಧೀನ ಕಾರ್ಯದರ್ಶಿ ಎನ್. ಮಂಗಳಗೌರಿ ಆದೇಶದಲ್ಲಿ ತಿಳಿಸಿದ್ದಾರೆ.

ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು ಆಯಾ ಉಪವಿಭಾಗದ ಮೂಲಕ ಆದೇಶದ ಮಾಹಿತಿ ನೀಡಿ ಕಾಲಮಿತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸೂಚಿಸಿರುವುದಾಗಿ ಕೆ.ಪಿ.ಟಿ.ಸಿ.ಎಲ್. ಮೂಲಗಳು samajamukhi.net ಪ್ರತಿನಿಧಿಗೆ ಮಾಹಿತಿ ನೀಡಿವೆ.

Molnupiravir

ನವದೆಹಲಿ: ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.

ಹೌದು.. ಪ್ರಾಯೋಗಿಕ ಕೋವಿಡ್-19 ಮಾತ್ರೆಯು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಜನರಲ್ಲಿ ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಸಾಧ್ಯತೆಯನ್ನು ಅರ್ಧದಷ್ಟು ಕಡಿಮೆ ಮಾಡಿದೆ. ಈ ಮಾತ್ರೆಯನ್ನು ಕೋವಿಡ್ ರೋಗಿಗಳ ಬಳಕೆಗೆ ಅಧಿಕೃತಗೊಳಿಸಲು ಅಮೆರಿಕ ಮತ್ತು ಪ್ರಪಂಚದಾದ್ಯಂತದ ಇರುವ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸುವುದಾಗಿ ಹೇಳಿದೆ ಎಂದು ಔಷಧ ತಯಾರಿಕಾ ಕಂಪನಿ ಮರ್ಕ್ ಮತ್ತು ಕೋ ಹೇಳಿದೆ.

ಒಂದೊಮ್ಮೆ ಈ ಮಾತ್ರೆಗೆ ಅನುಮೋದನೆ ಸಿಕ್ಕರೆ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನದಲ್ಲಿ ಪ್ರಮುಖ ಮುನ್ನಡೆಯಾಗಲಿದೆ. ಈ ಮೊಲ್ನುಪಿರವಿರ್  ಕೋವಿಡ್-19ಗೆ ಚಿಕಿತ್ಸೆ ನೀಡಬಹುದಾದದ ಮೊದಲ ಮಾತ್ರೆಯಾಗಲಿದೆ. ಅಮೆರಿಕದಲ್ಲಿ ಈಗ ಅಧಿಕೃತವಾಗಿರುವ ಎಲ್ಲಾ ಕೋವಿಡ್ -19 ಚಿಕಿತ್ಸೆಗೆ ಬಳಸುವ ಔಷಧಕ್ಕೆ ಐವಿ ಅಥವಾ ಇಂಜೆಕ್ಷನ್ ಅಗತ್ಯವಿದೆ. ಮೊಲ್ನುಪಿರವಿರ್ ಎಂದು ಕರೆಯಲ್ಪಡುವ ಈ ಮಾತ್ರೆಯನ್ನು ಪಡೆದ ರೋಗಿಗಳಲ್ಲಿ ಕೋವಿಡ್ -19 ರೋಗಲಕ್ಷಣಗಳು ಐದು ದಿನಗಳೊಳಗೆ ಕಡಿಮೆ ಆಗಿದ್ದು, ಅರ್ಧದಷ್ಟು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದು ಮರ್ಕ್ ಮತ್ತು ಅದರ ಪಾಲುದಾರ ರಿಡ್ಜ್‌ಬ್ಯಾಕ್ ಬಯೋಥೆರಪೆಟಿಕ್ಸ್ ಸಂಸ್ಥೆ ಹೇಳಿದೆ.

ಮೆರ್ಕ್ ಮತ್ತು ರಿಡ್ಜ್‌ಬ್ಯಾಕ್ ಬಯೋಥೆರಪ್ಯೂಟಿಕ್ ಅಕ್ಟೋಬರ್ 2 ರಂದು ಮಾಡಿದ ಪ್ರಕಟಣೆಯ ಪ್ರಕಾರ ಸೌಮ್ಯ ಮತ್ತು ಮಧ್ಯಮ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆಯಿದೆ. ಪ್ರಮುಖವಾಗಿ ಸ್ಥೂಲಕಾಯ, ಮಧುಮೇಹ ಅಥವಾ ಹೃದ್ರೋಗದಂತಹ ಆರೋಗ್ಯ ಸಮಸ್ಯೆಗಳಿಂದಾಗಿ ಕೋವಿಡ್‌ನಿಂದ ಹೆಚ್ಚು ಅಪಾಯವೆಂದು ಪರಿಗಣಿಸಲ್ಪಟ್ಟ ಮಧ್ಯಮ ಪ್ರಮಾಣದ ಕೋವಿಡ್ -19 ಲಕ್ಷಣಗಳನ್ನು ಹೊಂದಿರುವ 775 ವಯಸ್ಕರ ಮೇಲೆ ಈ ಅಧ್ಯಯನ ನಡೆಸಲಾಗಿದೆ. ಮೆರ್ಕ್ ಸಂಸ್ಥೆಯ ವರದಿಯನ್ನು ಸದ್ಯ ಯಾವುದೇ ಉನ್ನತ ವೈದ್ಯಕೀಯ ತಂಡ ಪರಿಶೀಲನೆ ನಡೆಸಿಲ್ಲ. ಭವಿಷ್ಯದ ವೈದ್ಯಕೀಯ ಪರಿಶೀಲನೆಯಲ್ಲಿ ಅದನ್ನು ಪ್ರಸ್ತುತಪಡಿಸಲು ಯೋಜಿಸಲಾಗಿದೆ ಎಂದು ಮರ್ಕ್ ಹೇಳಿದೆ.

ವೈದ್ಯರು ಇದು ಕೋವಿಡ್ ರೋಗಿಗಳಿಗೆ ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಲು ಉಪಯುಕ್ತ ಎಂದು ಹೇಳಲಾಗಿದ್ದು, ಏಕೆಂದರೆ ಆಸ್ಪತ್ರೆಯಲ್ಲಿನ ರೋಗಿಗಳ ಸಾವಿನ ಶೇ.50 ಇಳಿಕೆಯಾಗಿದೆ ಎಂದು ಹೇಳಲಾಗಿದೆ. ಪ್ರಯೋಗದ ಫಲಿತಾಂಶಗಳು ಪ್ರಬಲವಾಗಿರುವುದರಿಂದ ಸದ್ಯ ಮಾತ್ರೆಯ ಬಳಕೆ ನಿಲ್ಲಿಸುವಂತೆ ವೈದ್ಯಕೀಯ ತಜ್ಞರ ಸ್ವತಂತ್ರ ಗುಂಪು ಶಿಫಾರಸು ಮಾಡಿದೆ. ಮಾತ್ರೆಗೆ ಅನುಮೋದನೆ ನೀಡುವ ಕುರಿತಂತೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತದೊಂದಿಗೆ ಚರ್ಚಿಸುತ್ತಿದ್ದೇವೆ ಮತ್ತು ಮುಂದಿನ ದಿನಗಳಲ್ಲಿ ಡೇಟಾವನ್ನು ಪರಿಶೀಲನೆಗಾಗಿ ಸಲ್ಲಿಸಲು ಯೋಜಿಸಿದ್ದೇವೆ ಎಂದು ಕಂಪನಿಯ ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಔಷಧಿ ಪರಿಣಾಮಕ್ಕಾಗಿ ಇನ್ನೂ ಕಾಯಬೇಕು
ಕ್ಲಿನಿಕಲ್ ಪ್ರಯೋಗಗಳ ಪ್ರಯೋಜನವನ್ನು ಪರಿಶೀಲಿಸಲು ಇನ್ನಷ್ಟು ದಿನ ಕಾಯಬೇಕು ಎಂದು ವೈಜ್ಞಾನಿಕ ಮಂಡಳಿಯ ಮುಖ್ಯಸ್ಥ ಮತ್ತು ಮಣಿಪಾಲ್ ಆಸ್ಪತ್ರೆಗಳ ಜೆರಿಯಾಟ್ರಿಕ್ ಮೆಡಿಸಿನ್ ಅಧ್ಯಕ್ಷರಾದ ಡಾ.ಅನೂಪ್ ಅಮರನಾಥ್ ಹೇಳಿದ್ದು, ಅಲ್ಲದೆ ಔಷಧ ನಿಯಂತ್ರಕ ಸಂಸ್ಥೆಯ ಅನುಮೋದನೆಗಾಗಿ ಕಾಯಬೇಕು ಎಂದು ಹೇಳಿದರು.

ಭಾರತದಲ್ಲಿ, ಐದು ಕಂಪನಿಗಳು ಈ ಔಷಧಕ್ಕಾಗಿ ಪ್ರಯೋಗಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಗಳ ಪಟ್ಟಿಯಲ್ಲಿ ಸಿಪ್ಲಾ, ಡಾ ರೆಡ್ಡಿ, ಎಮ್‌ಕ್ಯೂರ್, ಸನ್ ಫಾರ್ಮಾ ಮತ್ತು ಟೊರೆಂಟ್ ಸಂಸ್ಥೆಗಳು ಇವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *