ಕಳಚಿದ ಸ್ವಾತಂತ್ರ್ಯದ ಕೊನೆಯ ಕೊಂಡಿ

ಸ್ವಾತಂತ್ರ್ಯ ಹೋರಾಟದ ನೆಲ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಮನ್ಮನೆಯ ಸ್ವಾತಂತ್ರ್ಯ ಹೋರಾಟಗಾರ ಬಂಗಾರಪ್ಪ ನಾಯ್ಕ ಇಂದು ಮುಂಜಾನೆ ತಮ್ಮ 99 ನೇ ವಯಸ್ಸಿನಲ್ಲಿ ಕೊನೆ ಉಸಿರೆಳೆದರು.

ಉತ್ತರ ಕನ್ನಡ ಜಿಲ್ಲೆಯ ಬೆರಳೆಣಿಕೆಯ ಜೀವಂತ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದ ಬಂಗಾರಪ್ಪ ನಾಯ್ಕ ಸಿದ್ಧಾಪುರ ತಾಲೂಕಿನ ಕೊನೆಯಸ್ವಾತಂತ್ರ್ಯ ಯೋಧರಾಗಿದ್ದರು. ತಮ್ಮ ಹರೆಯದಲ್ಲಿ ಸ್ನೇಹಿತರೊಂದಿಗೆ ಬ್ರಟೀಷರ ವಿರುದ್ಧ ಹೋರಾಟದಲ್ಲಿ ಭಾಗವಹಿಸಿದ್ದ ಇವರು ಮಾವಿನಗುಂಡಿ, ಮನ್ಮನೆ ಪ್ರದೇಶಗಳಲ್ಲಿ ಸೇತುವೆ ಮುರಿಯುವುದು,ಪ್ರತಿರೋಧ,ಪ್ರತಿಭಟನಾ ಹೋರಾಟದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಕೊಂಡಿದ್ದರು.

ಸ್ವಾತಂತ್ರ್ಯಾ ನಂತರ ಕಾಗೋಡು ಹೋರಾಟದಲ್ಲಿ ತೊಡಗಿಕೊಂಡಿದ್ದ ನಾಯ್ಕ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರಾಗುವುದಕ್ಕಿಂತ ಕಾಗೋಡು ಚಳವಳಿಕಾರ ಎಂದೇ ಗುರುತಿಸಿಕೊಂಡಿದ್ದರು. ತುಂಬು ಕುಟುಂಬದ ಮಕ್ಕಳು, ಮೊಮ್ಮಕ್ಕಳು ಬಂಧು ಮಿತ್ರರನ್ನು ಅಗಲಿರುವ ಬಂಗಾರಪ್ಪ ನಾಯ್ಕ ಕೆಲವು ವರ್ಷಗಳಿಂದ ವಯೋಸಹಜ ತೊಂದರೆಯಿಂದಾಗಿ ನೆನಪಿನ ಶಕ್ತಿ ಕಳೆದುಕೊಂಡಿದ್ದರು. ಮೂರ್ನಾಲ್ಕು ವರ್ಷದ ಕೆಳಗೆ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳನ್ನು ನೆನಪಿಸಿಕೊಂಡು ಹೋರಾಟದ ಹಾಡು ಗುನುಗಿದ್ದ ನಾಯ್ಕ ಒಂದು ವರ್ಷದ ಈಚೆಗೆ ನೆನಪಿನ ಶಕ್ತಿ ಕಳೆದುಕೊಂಡಿದ್ದರೂ 99 ರ ತಮ್ಮ ತುಂಬು ಬದುಕಿನ ಜೀವಂತಿಕೆಗೆ ಸಾಕ್ಷಿ ಎಂಬಂತೆ ದೈಹಿಕವಾಗಿ ದೃಢವಾಗಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ಮತ್ತು ಸಿದ್ಧಾಪುರ ತಾಲೂಕುಗಳು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಾಲೂಕುಗಳು. ಸಿದ್ಧಾಪುರದ ನೂರಾರು ಜನ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೊನೆಯವರಾಗಿ ಬದುಕಿ ಉಳಿದಿದ್ದ ಇವರನ್ನು ಅವರಿಗೆ ಬೇಡದ ವಯಸ್ಸಿನಲ್ಲಿ, ಜೀರ್ಣಿಸಿಕೊಳ್ಳದ ಸಮಯದಲ್ಲಿ ಸನ್ಮಾನಿಸಿ, ಗೌರವಿಸಿದ್ದೇ ಹೆಚ್ಚು. ಗೌರವಾದರಗಳು,ಅನುಕೂಲ,ಪ್ರಸಿದ್ಧಿಗಳಿಗೆ ನಿರ್ಲಿಪ್ತರಾಗಿ ಪ್ರತಿಕ್ರೀಯಿಸುತಿದ್ದ ಬಂಗಾರಪ್ಪ ನಾವೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದು ಈ ಸೌಭಾಗ್ಯಕ್ಕಲ್ಲ ಎನ್ನುವ ನೋವು ಅವರಲ್ಲಡಗಿತ್ತು. ಸ್ವಾತಂತ್ರ್ಯ ಹೋರಾಟ, ಕಾಗೋಡು ಚಳವಳಿಗಳ ಕೇಂದ್ರ ಸ್ಥಳ ಸಿದ್ಧಾಪುರದ ಮನ್ಮನೆ ಇಂದು ತಮ್ಮೂರಿನ ಸ್ವಾತಂತ್ರ್ಯ ಹೋರಾಟಗಾರರ ಪರಂಪರೆ ಮತ್ತು ಕಾಗೋಡು ರೈತ ಚಳವಳಿಯ ಕೊನೆಯ ಕೊಂಡಿಯನ್ನು ಕಳಚಿಕೊಂಡಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *