ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?

ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

HD Kumara swamy

ಬೆಂಗಳೂರು: ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಜೊತೆಗಿರುವ ಸಾಂಪ್ರಾದಾಯಿಕ ಅಲ್ಪ ಸಂಖ್ಯಾತರ ಮತಗಳನ್ನು ತನ್ನತ್ತ ಸೆಳೆಯುವ ಉಪಾಯ ಮಾಡಿದೆ.

ಜಾತ್ಯಾತೀತತೆಯ ಇಮೇಜ್ ಅನ್ನು ಮರಳಿ ಪಡೆಯುವ ಪ್ರಯತ್ನ ಇದಾಗಿದೆ. ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿತ್ತು. ಹೀಗಾಗಿ ಮುಸ್ಲಿಮರನ್ನು ಓಲೈಕೆ ಮಾಡಲು ಮುಂದಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ಇದು ಮುಸ್ಲಿಂ ಮತಗಳ ಮೇಲೆ ಪರಿಣಾಮ ಬೀರಬಹುದು ಎಂಬುದನ್ನು ಅರಿತ ಜೆಡಿಎಸ್ ತನ್ನ ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದೆ.

ಇದರ ಜೊತೆಗೆ ಟ್ವಿಟ್ಟರ್ ನಲ್ಲಿ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಇದೇ ಕಾರಣಕ್ಕೆ ಎಂಬುದು ಎಲ್ಲರಿಗೂ ತಿಳಿದ ಬಹಿರಂಗ ಸತ್ಯವಾಗಿದೆ.

ಜೆಡಿಎಸ್‌ನ ಇತ್ತೀಚಿನ ಏಳು ದಿನಗಳ ಕಾರ್ಯಾಗಾರವು ಇದಕ್ಕೆ ಹೊರತಾಗಿರಲಿಲ್ಲ, ಏಕೆಂದರೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ಎಸ್‌ಸಿ ಸಮುದಾಯದ ಪ್ರತ್ಯೇಕ ಸಭೆಗಳು ಜಾತ್ಯತೀತತೆಯ ಇಮೇಜ್ ಗೆ ಪುಷ್ಠಿ ನೀಡಿದೆ. ಜೆಡಿಎಸ್ ಮುಸ್ಲಿಮರನ್ನು ಬಹಿರಂಗವಾಗಿ ಸಮಾಧಾನಪಡಿಸುತ್ತಿದ್ದರೂ, ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯಿಲ್ಲ,  35,000 ಕ್ಕಿಂತ ಹೆಚ್ಚು ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿರುವ ಪಕ್ಷವು ಸಿಂದಗಿಗೆ ನಾಜಿಯಾ ಶಕೀಲ್ ಅಹ್ಮದ್ ಅಂಗಡಿ ಮತ್ತ ಹಾನಗಲ್‌ಗೆ ನಿಯಾಜ್ ಶೇಖ್ ಎಂಬ ಜನಪ್ರಿಯವಲ್ಲದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

2021ರ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಅನುಸರಿಸಿದ ನೀತಿಯನ್ನೇ ಜೆಡಿಎಸ್ ಮತ್ತೆ ಪುನಾರಾವರ್ತಿಸುತ್ತಿದೆ, ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಗೆ ಎದಿರೇಟು ನೀಡಲು ನಿರ್ಧರಿಸಿದೆ, ಈ ಮೂಲಕ ಬಿಜೆಪಿ ಗೆಲುವಿಗೆ ನೆರವಾಗುತ್ತಿದೆ. ನವೆಂಬರ್ 2018 ರ ಲೋಕಸಭಾ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಗೆದ್ದಾಗ ಸಾಂಪ್ರದಾಯಿಕ ಎದುರಾಳಿಗಳು ಯಶಸ್ಸಿನ ರುಚಿ ಕಂಡರು.

ಕಾಂಗ್ರೆಸ್ ನ ವಿ ಎಸ್ ಉಗ್ರಪ್ಪ ಬಳ್ಳಾರಿ ಮತ್ತು ಜೆಡಿಎಸ್ ನ ಎಲ್ ಆರ್ ಶಿವರಾಮೇಗೌಡ ಮಂಡ್ಯ ಲೋಕಸಭೆಯಲ್ಲಿ ಗೆಲುವು ಕಂಡರು. ವಿಧಾನಸಭೆ ಉಪಚುನಾವಣೆಯಲ್ಲೂ ಮೈತ್ರಿ ಕೆಲಸ ಮಾಡಿತು, ಅನಿತಾ ಕುಮಾರಸ್ವಾಮಿ ರಾಮನಗರದಲ್ಲಿ ಜಯಗಳಿಸಿದರು, ಆನಂದ್ ನ್ಯಾಮಗೌಡ ಅವರು ಕಾಂಗ್ರೆಸ್‌ಗಾಗಿ ಜಮಖಂಡಿಯನ್ನು ಉಳಿಸಿಕೊಂಡರು. ಮೈತ್ರಿ ಸರ್ಕಾರದ ಪತನದ ನಂತರ ಈ ಬಾಂಡಿಂಗ್ ಮುಂದುವರಿಯಲಿಲ್ಲ.

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ನಡೆದ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಇದು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯ ವಿಷಯವಾಗಿದೆ, ಹೀಗಾಗಿ ಅವರು ದೊಡ್ಡ ಮೊತ್ತದಲ್ಲಿ ಹಣ ಖರ್ಚು ಮಾಡುತ್ತಾರೆ. ಅವರ ಆಟದಲ್ಲಿ ನಾವು ಪಗಡೆಗಳಾಗಲು ಬಯಸುವುದಿಲ್ಲ, ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *