Exclusive -ಹಸಿರು ಪರಿಸರದ ನೀಲಿ ಚಮತ್ಕಾರ! ಗೋಳಗೋಡ್ ಗದ್ದೆ ಬೈಲಿಗೆ ಬಂದ ಜಾಗತಿಕ ಮಹತ್ವ

ಸಿದ್ಧಾಪುರ ತಾಲೂಕಿನ ಸಾಗರ ರಸ್ತೆಯ ಗೋಳಗೋಡು ಗ್ರಾಮದ ಗದ್ದೆ ಬಯಲೀಗ ಅನೇಕರ ಆಸಕ್ತಿಯ ಕೇಂದ್ರವಾಗಿದೆ. ದೃಷ್ಟಿಹರಿದಷ್ಟೂ ದೂರ ಹಚ್ಚ ಹಸಿರು ಕಾಣುವ ಮಲೆನಾಡಿನ ಈ ಭತ್ತದ ಗದ್ದೆ ಬಯಲಿಗೆ ಈ ಆಕರ್ಷಣೆ ಹೇಗೆ ಬಂತು ಎಂದರೆ ಈ ಕೌತುಕಕ್ಕೆ ಉತ್ತರ ದೊರೆಯುತ್ತದೆ. ಈ ಭಾಗದ ಜನರ ಲಕ್ಷ್ಯ ತನ್ನತ್ತ ಕೇಂದ್ರೀಕರಿಸುವಂತೆ ಮಾಡಿದ ಹಣಜಿಬೈಲಿನ ದ್ಯಾವಾ ಎಂ. ನಾಯ್ಕರ ಸಾಹಸಗಾಥೆಯೇ ಈ ಕೌತುಕದ ಹಿಂದಿನ ಸಾಧನೆ.

ಹಣಜಿಬೈಲಿನ ದ್ಯಾವಾ ನಾಯ್ಕರಿಗೆ ಕಳೆದ ನಾಲ್ಕೈದು ವರ್ಷದ ಹಿಂದೆ ರಸ್ತೆಯ ಪಕ್ಕ ಬಣ್ಣದ ಭತ್ತದ ಗಿಡವೊಂದು ಕಾಣಿಸಿದ್ದೇ ಪ್ರಾರಂಭ. ಹೂವಿನ ಗಿಡವೇನೋ ಎಂದು ಅನುಮಾನದಿಂದಲೇ ಕೊಂಡೊಯ್ದು ಸಾಕಿ ಬೆಳಸಿದ ನಾಯ್ಕರಿಗೆ ಅದು ಭತ್ತದ ಗಿಡ ಎಂದು ತಿಳಿಯಲು ಸಮಯ ಹಿಡಿಯಲಿಲ್ಲ. ಈ ನೀಲಿ ಸಸ್ಯವನ್ನು ನಾಟಿ ಮಾಡಿದ ಭತ್ತದ ಸಸಿಯಿಂದ ನಾಲ್ಕೈದು ತೆನೆ ಭತ್ತ ದೊರೆತಖುಷಿಯಲ್ಲಿದ್ದ ದ್ಯಾವಾ ನಾಯ್ಕರಿಗೆ ಈ ಭತ್ತದ ಕದರನ್ನು ನವಿಲುಗಳು ಕತ್ತರಿಸಿದಾಗಬೇಸರವಾದರೂ ನೆಲಕ್ಕೆ ಬಿದ್ದ ಭತ್ತದಿಂದ ಮಾರನೇ ವರ್ಷ ಕೆಲವು ಸಸಿಗಳನ್ನು ಮಾಡಿ 4ರಿಂದ 5 ವರ್ಷಗಳಲ್ಲಿ ಈಗ ಹತ್ತುಗುಂಟೆಗೂ ಹೆಚ್ಚುಭಾಗದಲ್ಲಿ ಈ ನೀಲಿಭತ್ತವನ್ನು ಬೆಳೆದಿದ್ದಾರೆ.

ಹಚ್ಚಹಸಿರಿನ ಭತ್ತದ ಗದ್ದೆಯ ನಡುವೆ ನೀಲಿಬಣ್ಣದಿಂದ ಸ್ಥಳೀಯರ ಗಮನ ಸೆಳೆಯುತ್ತಿರುವ ಈ ಕೃಷ್ಣ ನೀಲ ಭತ್ತ ಈಗ ಸಾರ್ವಜನಿಕರ ಕೌತುಕ ಮತ್ತು ಆಕರ್ಷಣೆಯ ಕೇಂದ್ರವಾಗಿದೆ.ಇದು ಕೃಷ್ಣ ನೀಲ ಎನ್ನುವ ಭತ್ತದ ತಳಿ ಎನ್ನುವ ದ್ಯಾವಾ ನಾಯ್ಕರಿಗೆ ಈ ಭತ್ತದ ವೈಶಿಷ್ಟ್ಯ, ಪ್ರಾಮುಖ್ಯತೆಗಳ ಬಗ್ಗೆ ತಿಳಿದಿಲ್ಲ. ಈ ಭತ್ತದ ಗದ್ದೆ ನೋಡಿದ ಜನರು ಇದು ಉತ್ತಮ ತಳಿ ಇದರಲ್ಲಿ ಔಷಧೀಯ ಗುಣಗಳಿಗೆ ಎಂದು ಹೇಳುತ್ತಾರಾದರೂ ಈ ಬಗ್ಗೆ ಸ್ಫಷ್ಟ ದಾಖಲೆ, ಮಾಹಿತಿ ಇವರ ಬಳಿ ಇಲ್ಲ.

ಈ ಬಗ್ಗೆ ಸ್ಥಳೀಯ ಕೃಷಿ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿದರೆ ಅದು ವಿಶಿಷ್ಟ ತಳಿಯ ಭತ್ತ ಇದನ್ನು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರಾಯೋಗಿಕವಾಗಿ ಬೆಳೆದಿರುವ ಸಾಧ್ಯತೆ ಇದೆ. ಆದರೆ ಅನಿರೀಕ್ಷಿತವಾಗಿ ದೊರೆತ ಈ ಭತ್ತದ ಗಿಡದಿಂದ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೃಷ್ಣನೀಲಿ ಭತ್ತ ಬೆಳೆದ ರೈತರ ಸಾಧನೆ ದೊಡ್ಡದು ಎನ್ನುತ್ತಾರೆ. (ಚಿತ್ರಗಳು,ಮಾಹಿತಿ-ವಿಜಯಕುಮಾರ್ & ಲೋಹಿತ್ ಕುಮಾರ್ ಹಣಜೀಬೈಲ್)


ಕಳ್ಳಭಟ್ಟಿ ಸಂಗ್ರಹಿಸಿದ್ದಕ್ಕೆ 21ಸಾವಿರ ರೂ ದಂಡ-

ದಿನಾಂಕ:೨೬೦೧೨೦೧೭ ರಂದು ಕೃಷ್ಣ ದ್ಯಾವಾ ನಾಯ್ಕ ವಾಸ:_ಐಗಳಕೊಪ್ಪ, ತಾಲ್ಲೂಕು:ಸಿದ್ದಾಪುರ ಎಂಬ ಆರೋಪಿಯು ತನ್ನ ಮನೆಯಲ್ಲಿ ಕಳ್ಳ ಭಟ್ಟಿ ಸರಾಯಿಯನ್ನು ದಾಸ್ತಾನಿಸಿದ್ದನ್ನು ಪತ್ತೆ ಹಚ್ಚಿ,ಸಿ.ಸಿ. ನಂ.೪೬೧/೨೦೧೭ ರಲ್ಲಿ ಆರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಶ್ರೀ ಸಿದ್ದರಾಮ ಎಸ್. ಮಾನ್ಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶರು ಆರೋಪಿಗೆ, ಕ‌.ಅ. ಕಾಯ್ದೆ ಕಲಮ್- ೩೨ ರಲ್ಲಿ ೧ ವರ್ಷ ಸಾಧಾ ಸಜೆ ಮತ್ತು ರೂ. ೧೦,೦೦೦/ಗಳ ದಂಡ,ಕಲಮ್- ೩೪ ರಲ್ಲಿ ೧ ವರ್ಷ ಸಾಧಾ ಸಜೆ ಮತ್ತು ರೂ. ೧೦,೦೦೦/ಗಳ ದಂಡ ಹಾಗೂ ಐ.ಪಿ.ಸಿ.ಕಲಮ್- ೨೭೩ ರಲ್ಲಿ ೬ ತಿಂಗಳ ಸಾಧಾ ಸಜೆ ಮತ್ತು ರೂ. ೧,೦೦೦/ಗಳ ದಂಡ, ಈ ರೀತಿ ಒಟ್ಟು ಎರಡುವರೆ ವರ್ಷಗಳ ಸಾಧಾ ಸಜೆ ಮತ್ತು ರೂ.೨೧೦೦೦/-ಗಳು ದಂಡವನ್ನು ವಿಧಿಸಿರುತ್ತಾರೆ.ಈ ಪ್ರಕರಣದಲ್ಲಿ ಚಂದ್ರಶೇಖರ ಎಚ್. ಎಸ್.ಸಹಾಯಕ ಸರ್ಕಾರಿ ಅಭಿಯೋಜಕರು ಸರ್ಕಾರದ‌ ಪರವಾಗಿ ವಾದಿಸಿದ್ದರು. ಮಹೇಂದ್ರ ಎಸ್. ನಾಯ್ಕ ಅಬಕಾರಿ ಉಪ-ಅಧೀಕ್ಷಕರು (ಪ್ರಭಾರ)ಉಪ_ವಿಭಾಗ ಶಿರಸಿ ಇವರು ಮೊಕದ್ದಮೆ ದಾಖಲಿಸಿದ್ದು, ಶ್ರೀಮತಿ ಜ್ಯೋತಿಶ್ರೀ ಜಿ. ನಾಯ್ಕ ಅಬಕಾರಿ ನಿರೀಕ್ಷಕರು ಶಿರಸಿ ವಲಯ ನ್ಯಾಯಾಲಯದಲ್ಲಿ ಆರೋಪಣಾ ಪಟ್ಟಿ ಸಲ್ಲಿಸಿದ್ದರು..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *