ಶಿರಸಿ-ಕುಮಟಾ ರಸ್ತೆ ಅಗಲೀಕರಣಕ್ಕೆ ಹೈಕೋರ್ಟ್ ಅಸ್ತು & 105 ವರ್ಷಗಳ ನಾರಾಯಣ ನಾಮಧಾರಿ ಇನ್ನಿಲ್ಲ

ಭಾರತ್ ಮಾಲಾ ಫೇಸ್-1 ಯೊಜನೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ-766ಇ ಅಗಲೀಕರಣ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಶನ್ ಮೂವ್‌ಮೆಂಟ್ ಚಾರಿಟಬಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ್ದ…

High court of karnataka

ಬೆಂಗಳೂರು: ಭಾರತ್ ಮಾಲಾ ಫೇಸ್-1 ಯೊಜನೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ-766ಇ ಅಗಲೀಕರಣ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಶನ್ ಮೂವ್‌ಮೆಂಟ್ ಚಾರಿಟಬಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ರಸ್ತೆ ಹಾದುಹೋಗುವ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಪರಿಸರ ಹಾನಿಯಾಗಲಿದೆ. ಹೀಗಾಗಿ ರಸ್ತೆ ಅಗಲೀಕರಣ ಯೋಜನೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

“ಯೋಜನೆಯ ಉದ್ದವು 100 ಕಿಮೀಗಿಂತ ಕಡಿಮೆ ಇದೆ ಮತ್ತು ಹೆಚ್ಚುವರಿ ಮಾರ್ಗದ ಹಾದಿ ಸಹ 40 ಮೀಟರ್‌ಗಿಂತ ಕಡಿಮೆ ಇದೆ. ಈ ಅಗಲೀಕರಣವೂ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿರುವುದರಿಂದ, ಪ್ರಕರಣದ ವಿಲಕ್ಷಣ ಸಂಗತಿಗಳು ಮತ್ತು ಸನ್ನಿವೇಶಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ”ಎಂದು ಕೋರ್ಟ್ ಹೇಳಿದೆ.

ಈ ರಸ್ತೆಯಲ್ಲಿ ಅತ್ಯಂತ ವಿರಳ ವಾಹನ ಸಂಚಾರವಿದ್ದು ಪಶ್ಚಿಮ ಘಟ್ಟದ ನಿತ್ಯಹರಿದ್ವರ್ಣ ಕಾಡಿನ ನಡುವೆ ಈ ರಸ್ತೆ ಹಾದು ಹೋಗುತ್ತಿದೆ. ಪರಿಸರದ ಮೇಲಿನ ವ್ಯತಿರಿಕ್ತ ಪರಿಣಾಮವನ್ನು ಪರಿಗಣಿಸದೇ ಅವೈಜ್ಞಾನಿಕ ರೀತಿಯಲ್ಲಿ ಈ ರಸ್ತೆಯನ್ನು ಅಗಲಿಕರಣ ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು. (kpc)


105 ವರ್ಷಗಳ ನಾರಾಯಣ ನಾಮಧಾರಿ ಇನ್ನಿಲ್ಲ
ಸಿದ್ದಾಪುರ: ತಾಲ್ಲೂಕಿನ ಕಾನಸೂರಿನ ನಿವಾಸಿ ನಾರಾಯಣ ನಾಮಧಾರಿ (104) ಮಂಗಳವಾರ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರಿಯರು, ನಾಲ್ವರು ಪುತ್ರರು ಇದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ತಲ್ಲೂರಿನವರು. ಇಂದು ಕಾನಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *