ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ ತಾಳ್ಮೆ ಇಲ್ಲ ಹಾಗಾಗಿ ಪಕ್ಷ ನನ್ನನ್ನೂ ಪರಿಗಣಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಯೂ ಎದುರಾಗಬಹುದು ಹೀಗೆಂದು ಕಡಕ್ ಆಗಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿದವರು ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜಿಬೈಲ್

ಸಂದರ್ಭ- ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳ ಮತ್ತು ಹಿಂದುಳಿದ ವರ್ಗಗಳ ವಿಭಾಗ ಆಯೋಜಿಸುತ್ತಿರುವ ಬಿ.ಜೆ.ಪಿ. ಹಿಂದುಳಿದವರ್ಗಗಳ ಸಮಾವೇಶದ ಕುರಿತು ಮಾಹಿತಿ ನೀಡಲು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ನಾಯ್ಕ ಮಾಧ್ಯಮಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪಕ್ಷದ ಸಂಘಟನೆಗೆ ಶಕ್ತಿ ಇಲ್ಲದ ಸಂದರ್ಭದಿಂದ ನಿರಂತರ ಮೂರು ದಶಕ ಸೇವೆ ಸಲ್ಲಿಸಿದ್ದೇನೆ. ಮೀಸಲಾತಿ,ತಾಂತ್ರಿಕ ಅಡಚಣೆಗಳಿಲ್ಲದಿದ್ದರೆ ಸಿದ್ಧಾಪುರದ ಪ.ಪಂ. ನಲ್ಲಿ ಪಕ್ಷಾತೀತವಾಗಿ ನಿರಂತರ ಅಧ್ಯಕ್ಷರಾಗುವ ಅವಕಾಶವಿತ್ತು. ಈಗಲೂ ನನ್ನ ವೈಯಕ್ತಿಕ ಅನುಕೂಲಕ್ಕಾಗಿ ನನಗೆ ಯಾವ ಹುದ್ದೆಯ ಅಗತ್ಯವೂ ಇಲ್ಲ. ಅಧಿಕಾರ ಇದ್ದರೆ ಜನಸೇವೆ ಮಾಡುತ್ತೇವೆ. ಜನರಿಗೆ ನೆರವಾಗುವ ಅವಕಾಶದ ಅಧಿಕಾರ ಕೇಳುವ ಹಕ್ಕು ನಮಗಿದೆ. ಹಾಗಾಗಿ ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ನನ್ನನ್ನು ಪರಿಗಣಿಸುವಂತೆ ಪಕ್ಷಕ್ಕೆ ವಿನಂತಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷ ನಾನಾ ವಿಭಾಗಗಳ ಸಂಘಟನೆ, ಸಮಾವೇಶಕ್ಕೆ ಸೂಚಿಸಿದೆ. ಈ ಉದ್ದೇಶದಿಂದ ಸಿದ್ಧಾಪುರದಲ್ಲಿ ಅಕ್ಟೋಬರ್ 30 ರಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ನಾಯಕರು, ಸಚಿವರು,ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಮಾಧ್ಯಮಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಬಹುತೇಕ ಪ್ರಮುಖರು ಹಾಜರಿದ್ದರು. ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕಾ ಅಧ್ಯಕ್ಷ ಬಲರಾಮ್ ನಾಮಧಾರಿ ವಿವರಣೆ ನೀಡಿದರು. ಪ.ಪಂ. ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯರಾದ ವಿನಯ್ ಹೊನ್ನೆಗುಂಡಿ, ವಿಜೇಂದ್ರ ಗೌಡರ್, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಈಶ್ವರ ನಾಯ್ಕ ಮನಮನೆ, ಎಸ್.ಕೆ. ಮೇಸ್ತ ಸೇರಿದಂತೆ ಹಲವರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *