ಭಟ್ಕಳ : ರಾಷ್ಟ್ರೀ ಯ ತರಬೇತುದಾರ ಕಾಶೀನಾಥ ನಾಯ್ಕರಿಗೆ ಸನ್ಮಾನ

ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.ಸಾರದಹೊಳೆಯ ನೂತನ ಶಿಲಾಮಯ ದೇವಸ್ಥಾನವನ್ನು ವೀಕ್ಷಿಸಿದ ನಂತರ ಕಾಶೀನಾಥ ಮಾತನಾಡಿ,ನಾನು ಮೂಲತಃ ಮುರುಡೇಶ್ವರದವನಾಗಿದ್ದು,ನಾನು ಬಾಲ್ಯದಿಂದಲೂ ಈ ದೇವಸ್ಥಾನಕ್ಕೆ ನಡೆದುಕೊಂಡಿದ್ದು,ಆಂಜನೇಯನ ಅನುಗ್ರಹದಿಂದ ನಾನು ಈ ಸ್ಥಾನಕ್ಕೆ ಏರಿದ್ದೇನೆ. ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಕಾಶೀನಾಥ ನಾಯ್ಕರವರನ್ನು ಸನ್ಮಾನಿಸಿ ಗೌರವಿಸಲಾಯಿತು.ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಾಯ ನಾಯ್ಕ,ಕೃಷ್ಣಾ ನಾಯ್ಕ,ಪೃಥ್ವಿ,ಮುಕುಂದ ನಾಯ್ಕ,ಸುಬ್ರಾಯ ನಾಯ್ಕ ಇದ್ದರು.

ಭಟ್ಕಳದ ಗದ್ದುಗೆ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ ಭೇಟಿ

ಕಾಶೀನಾಥ ನಾಯ್ಕ ಅವರು ಇಲ್ಲಿನ ಗದ್ದುಗೆಯ ಶ್ರೀ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀದೇವರಿಗೆ ಪೂಜೆ ಸಲ್ಲಿಸಿದರು.ದೇವಸ್ಥಾನದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ರಾಮಾ ನಾಯ್ಕ ದಂಪತಿಗಳು ದೇವಸ್ಥಾನದ ಪರವಾಗಿ ಕಾಶೀನಾಥರವರಿಗೆ ಸಾಲು ಹೊದಿಸಿ,ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಆಸರಕೇರಿ ನಾಮಧಾರಿ ಗುರುಮಠದ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ,ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಗಂಗಾಧರ ನಾಯ್ಕ,ಶಿವಾನಂದ ನಾಯ್ಕ,ಪಾಂಡುರಂಗ ನಾಯ್ಕ,ವೆಂಕಟೇಶ ನಾಯ್ಕ,ರಾಮಾ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

,

ಯಲ್ಲಾಪುರ : ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹಳ್ಳಕ್ಕೆ ಹೊತ್ತಿಕೊಂಡ ಬೆಂಕಿ!

ಕಾರವಾರ : ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಇಂದು ಮುಂಜಾನೆ ಮುಗುಚಿ ಬಿದ್ದಿದೆ.ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಅಲ್ಲಿರುವ ರೈತರ ಗದ್ದೆ ಮತ್ತು ತೋಟಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಪೇಂಟ್ ಗೆ ಬಳಸುವ “ಪೆಂಜಾನ್”ಮಂಗಳೂರಿನಿಂದ ಮುಂಬಯಿಗೆ ಟ್ಯಾಂಕರ್ ಮೂಲಕ ಕಳುಹಿಸಲಾಗುತ್ತಿತ್ತು.ಕಡಿದಾದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿ ಸೋರಿದ ರಾಸಾಯನಿಕವು ಪಕ್ಕದ ಹಳ್ಳ ಹಾಗೂ ಕಾಲುವೆಗಳಲ್ಲಿ ಹರಿದಿದೆ.ಇದಕ್ಕೆ ಬೆಂಕಿ ತಗುಲಿದ್ದು,ಹಳ್ಳ ಹೊತ್ತಿ ಉರಿದಿದೆ.ಬೆಂಕಿ ಟ್ಯಾಂಕರ್ ಗೂ ತಗುಲಿದೆ.ಹಳ್ಳದ ಭತ್ತದ ಗದ್ದೆ, ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಗಿಡಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ.ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ಧಾರೆ.

ಟ್ಯಾಂಕರ್ ಅಪಘಾತವಾಗುತ್ತಿದ್ದಂತೆ ಸೋರಿದ ರಾಸಾಯನಿಕಕ್ಕೂ ಬೆಂಕಿ ತಗುಲಿದ್ದು,ಸದ್ದು ಎರಡು ಕಿ.ಮೀ.ವರೆಗೂ ಕೇಳಿಸಿದೆ. ಮನೆಗಳಲ್ಲಿದ್ದ ಜನರು ಗಾಬರಿಯಿಂದ ಹೊರಗಡೆ ಓಡಿ ಬಂದಿದ್ದಾರೆ.ಆಗ ಹಳ್ಳ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ.

ಬಾಳೆಗದ್ದೆ ದೇಗುಲದ ಪಕ್ಕದಲ್ಲಿರುವ ನಿವಾಸಿ ಎಸ್.ಎಸ್.ಭಟ್ಟ ಅವರ ಐದು ಗುಂಟೆ ಭತ್ತದ ಗದ್ದೆ ಯಾವುದೇ ಅವಶೇಷ ಇಲ್ಲದಂತೆ ಸುಟ್ಟು ಹೋಗಿದೆ.ಬಾವಿಗೆ ಹಾಕಿದ ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಅಡಿಕೆ ಮರ,ತೆಂಗಿಮರ, ಮಾವಿನ ಮರ,ಹಲಸಿನ ಮರ ಸೇರಿದಂತೆ ಮುಂತಾದ ಮರಗಳಿಗೆ ಬೆಂಕಿ ತಗುಲಿದೆ. ಮನೆಯ ಒಂದು ಪಾರ್ಶ್ವಕ್ಕೂ ಬೆಂಕಿ ತಗುಲಿದೆ.

ಇದೇ ರೀತಿ ಮಂಜುನಾಥ ಗೌಡ, ನಾರಾಯಣ ಭಟ್ಟ,ವಿಶ್ವನಾಥ ಭಟ್ಟ ಮುಂತಾದವರ ತೋಟ,ಗದ್ದೆಗಳಿಗೂ ಹಾನಿಯಾಗಿದೆ.ಕಾಲುವೆಯಲ್ಲಿ ಸುಮಾರು 20 ಅಡಿ ಹಳ್ಳದಲ್ಲಿ 50 ಅಡಿ ಎತ್ತರಕ್ಕೂ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿಯುವ ದೃಶ್ಯ ಕಂಡುಬಂದಿದೆ.ಅಪಘಾತವಾದ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮೂರು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಯಲ್ಲಾಪುರ, ಮುಂಡಗೋಡ,ಶಿರಸಿಯಿಂದ ಬಂದ ಅಗ್ನಿಶಾಮಕದಳ ಹರಸಾಹಸಪಟ್ಟು ಬೆಂಕಿ ನಂದಿಸಿದರು.ಅಪಘಾತ ಸ್ಥಳಕ್ಕೆ ಶಿರಸಿ ಡಿ.ವೈ.ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *