ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರ ನೇಮಕಕ್ಕೆ ಒತ್ತಾಯ & ನಾಗರಾಜ್ ದೋಶೆಟ್ಟಿಯವರಿಗೆ ಸನ್ಮಾನ

ಸಿದ್ದಾಪುರ
ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರನ್ನು ಕೂಡಲೇ ಸರ್ಕಾರ ನೇಮಕ ಮಾಡಬೇಕು.ಕರೋನಾ ಸಾಂಕ್ರಮಿಕ ರೋಗದಿಂದಾಗಿ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕಲೆಯನ್ನು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದು ಸಿದ್ದಾಪುರದ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆ ದೊಡ್ಮನೆ ಹೇಳಿದರು.
ತಾಲೂಕಿನ ದೊಡ್ಮನೆ ಎಂಜಿವಿವಿ ಪ್ರೌಢಶಾಲೆಯ ಸಭಾಂಗಣದಲ್ಲಿ ಅನಂತ ಯಕ್ಷಕಲಾ ಪ್ರತಿಷ್ಠಾನ ಸಿದ್ದಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘ ದೊಡ್ಮನೆ ಸಹಯೋಗದಲ್ಲಿ ಆಯೋಜಿಸಿದ್ದ ಯಕ್ಷೋ ತ್ಸವ-೨೦೨೧ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲಾ ಹೆಗಡೆ ಗೋಳಿಕೊಪ್ಪ ಯಕ್ಷೋತ್ಸವ ಉದ್ಘಾಟಿಸಿ ಮಾತನಾಡಿ ಈ ಹಿಂದೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊ.ಎಂ.ಎ.ಹೆಗಡೆ ಅವರ ಕಾಲದಲ್ಲಿ ಯಕ್ಷಗಾನವನ್ನು ಮತ್ತಷ್ಟು ಬೆಳೆಸುವುದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದಕ್ಕೆ ಎಲ್ಲರ ಸಹಕಾರ ಬೇಕು ಎಂದು ಹೇಳಿದರು.
ಯಕ್ಷಗಾನದ ಮದ್ದಳೆಗಾರ ಶಂಕರ ಭಾಗ್ವತ್ ಯಲ್ಲಾಪುರ, ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಶಂಕರನಾರಾಯಣ ಹೆಗಡೆ ದಾನ್ಮಾಂವ, ಅನಂತ ಯಕ್ಷಕಲಾ ಪ್ರತಿಷ್ಠಾನದ ಕೇಶವ ಹೆಗಡೆ ಕೊಳಗಿ, ಎಂಜಿವಿವಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಫ್.ಎನ್.ಹರನಗಿರಿ ಉಪಸ್ಥಿತರಿದ್ದರು.
ನಂತರ ಹೊಸ್ತೋಟ ಮಂಜುನಾಥ ಭಾಗವತ ರಚಿಸಿದ ಸುರತ ಆಂಜನೇಯ ಯಕ್ಷಗಾನ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಮಹೇಶ ಹೆಗಡೆ ಕೊಳಗಿ, ಶಂಕರ ಭಾಗ್ವತ್, ಗಣೇಶ ಭಟ್ಟ ಕೆರೆಕೈ ಸಹಕರಿಸಿದರು. ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ವಿ.ದತ್ತಮೂರ್ತಿ ಭಟ್ಟ , ಪ್ರಭಾಕರ ಹೆಗಡೆ ಹಣಜೀಬೈಲ್, ವೆಂಕಟೇಶ ಹೆಗಡೆ ಬೊಗರಿಮಕ್ಕಿ, ಅವಿನಾಶ ಹೆಗಡೆ ಕೊಪ್ಪ, ಪ್ರಣವ್ ಭಟ್ಟ ಶಿರಳಗಿ ವಿವಿಧ ಪಾತ್ರನಿರ್ವಹಿಸಿದರು.
ನಂತರ ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘ ದೊಡ್ಮನೆ ಇವರಿಂದ ಮಾಗಧ ವಧೆ ಯಕ್ಷಗಾನ ಪ್ರದರ್ಶನಗೊಂಡಿತು. ಕೇಶವ ಹೆಗಡೆ ಕಿಬ್ಳೆ ಸ್ವಾಗತಿಸಿದರು. ಕೇಶವ ಕೊಳಗಿ ವಂದಿಸಿದರು.


ನಾಗರಾಜ ದೋಶೆಟ್ಟಿ ಯರಿಗೆ ಸನ್ಮಾನ
ಸಿದ್ದಾಪುರ –
ಪಟ್ಟಣದ ಗಣ್ಯ ಜವಳಿ ವರ್ತಕರು ಲಯನ್ಸ್ ಕ್ಲಬ್ ಸಿದ್ದಾಪುರದ ಮಾಜಿ ಅಧ್ಯಕ್ಷರು ಲಯನ್ಸ್ ಅಂತರಾಷ್ಟ್ರೀ ಯ ಸಂಸ್ಥೆ ೩೧೭ ಃ ಜಿಲ್ಲೆಯ ಮಾಜಿ ಕೋಶಾಧ್ಯಕ್ಷರೂ ಆದ ನಾಗರಾಜ ಎಂ. ದೋಶೆಟ್ಟಿ ಅವರಿಗೆ ಅರವತ್ತು ವರ್ಷ ತುಂಬಿದ ಪ್ರಯುಕ್ತ ಸ್ಥಳೀಯ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಲಯನ್ಸ್ ಅಧ್ಯಕ್ಷೆ ಶ್ಯಾಮಲಾ ರವಿ ಹೆಗಡೆ ಹೂವಿನಮನೆ ವಹಿಸಿದ್ದರು. ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಡಾ. ರವಿ ಹೆಗಡೆ ಹೂವಿನಮನೆ ಅಭಿನಂದನ ಪರ ಮಾತುಗಳನ್ನು ಹೇಳಿ ನಾಗರಾಜ ದೋಶೆಟ್ಟಿ ಅವರ ಸಾಮಾಜಿಕ ಕಳಕಳಿ, ಸ್ನೇಹಪರ ಚಿಂತನೆಯಿಂದಾಗಿ ೬೦ ವಸಂತಗಳನ್ನು ಸಾರ್ಥಕ ಗೊಳಿಸಿದ್ದಾರೆ ಎಂದರು.
ಸ್ಥಳೀಯ ಟಿ.ಎಂ.ಎಸ್. ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ಮಾತನಾಡಿ ಅವರ ಸಜ್ಜನಿಕೆ ವಿಶ್ವಾಸದ ಗುಣಗಳಿಂದ ಅಪಾರ ಜನರನ್ನು ಗಳಿಸಿಕೊಂಡಿದ್ದಾರೆ ಎಂದರು.
ಜಿ.ಜಿ.ಹೆಗಡೆ ಬಾಳಗೋಡ, ಸಿ.ಎಸ್. ಗೌಡರ್ ಹೆಗ್ಗೋಡ್ಮನೆ, ಕೆ.ಜಿ. ನಾಗರಾಜ, ಸತೀಶ ಗೌಡರ್ ಹೆಗೋಡ್ಮನೆ, ಡಾ. ಪ್ರಭಾಶಂಕರ ಹೆಗಡೆ, ಸುನಂದಾ ಪ್ರಭಾಶಂಕರ ಹೆಗಡೆ, ನಾಗರಾಜ ಪಾಟೀಲ ಮಳವತ್ತಿ, ಕುಮಾರ ಗೌಡರ್ ಹೊಸೂರು, ಡಾ. ಸುರೇಶ ಪಂಡಿತ್, ಎಂ.ಆರ್. ಪಾಟೀಲ, ಆರ್.ಎಂ ಪಾಟೀಲ, ರಾಘವೇಂದ್ರ ಶಾಸ್ತಿç ಬಿಳಗಿ, ಕುಮಾರ ಗೌಡರ್ ದೊಡ್ಡಗದ್ದೆಬೈಲು, ರಾಘವೇಂದ್ರ ಭಟ್ ಸ್ವಸ್ತಿಕ್, ಜೀವನ ಪೈ ರವರು ಮಾತನಾಡಿ ಶುಭಕೋರಿದರು.
ತಮ್ಮನ್ನ ಅಭಿನಂದಿಸಿದ ನಾಗರಾಜ ಎಂ ದೋಶೆಟ್ಟಿ ಕೃತಜ್ಞತೆ ಹೇಳಿ. ಪರರ ಏಳಿಗೆಯನ್ನು ಕಂಡು ಸಂತೋಷ ಪಡುವುದೇ ದೊಡ್ಡ ಗುಣ. ಬಡವ ಶ್ರೀಮಂತ ಎನ್ನುವ ಭೇದ ಎಣಿಸದೇ ಪ್ರೀತಿಯಿಂದ ನಡೆದುಕೊಳ್ಳುವುದು ಬಲು ದೊಡ್ಡಗುಣ ಎಂದು ಹೇಳಿದರು.

ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಹಳಿಯಾಳದ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆ ನಡೆಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *